ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳು ರಾಜ್ಯದಲ್ಲಿ ಮಾತ್ರವಲ್ಲ ದೇಶದಾದ್ಯಂತ ಜನಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಮುಖ್ಯವಾಗಿ ಗೃಹ ಲಕ್ಷ್ಮೀ ಯೋಜನೆ ಭಾರತದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಯೋಜನೆಯಲ್ಲೇ ಈಗ ತಾಂತ್ರಿಕ ಸಮಸ್ಯೆ ಉಂಟಾಗಿದೆ.
ನಿರಂತರವಾಗಿ ಈ ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆಯೇ ಒಂದು ತಲೆನೋವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (ಡಬ್ಲ್ಯುಸಿಡಿ) ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದರೂ ಆರಂಭದಿಂದ ಈವರೆಗೂ ಈ ಗೃಹ ಲಕ್ಷ್ಮಿ ಯೋಜನೆಯು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಲೇ ಇದೆ.

ಸಮಸ್ಯೆ ಪರಿಹರಿಸಲು ಸೂಚನೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಹಿಂದೆ ದೀಪಾವಳಿಯೊಳಗೆ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ತಾಂತ್ರಿಕ ಸಮಸ್ಯೆ ಮಾತ್ರ ದೀಪಾವಳಿ ಕಳೆದು ಇಷ್ಟು ದಿನಗಳಾದರೂ ಸರಿಯಾಗಿಲ್ಲ.
ಇನ್ನು ಈ ನಡುವೆ ಫಲಾನುಭವಿಗಳ ಆಧಾರ್ ಕಾರ್ಡ್ ಮೊದಲಾದವುಗಳಲ್ಲಿರುವ ಹೆಸರು ಮತ್ತು ಖಾತೆಗಳಲ್ಲಿ ಇರುವ ಹೆಸರು ಹೊಂದಾಣಿಕೆಯಾಗದ ಕಾರಣ ಶೇಕಡ 100 ರಷ್ಟು ಮಹಿಳೆಯರಿಗೆ ಈ ಯೋಜನೆಯ ಪ್ರಯೋಜನ ಲಭ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ 1.47 ಕೋಟಿ ಫಲಾನುಭವಿಗಳಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ರವಾನೆಯಾಗಿದೆ.
ಅಧಿಕಾರಿಗಳ ಪ್ರಕಾರ, ನವೆಂಬರ್ 20 ರ ಹೊತ್ತಿಗೆ, ತಮ್ಮ ಬ್ಯಾಂಕ್ ಖಾತೆಯಲ್ಲಿ ಎರಡು ಸಾವಿರ ರೂಪಾಯಿ ಪಡೆದ ಒಟ್ಟು ಫಲಾನುಭವಿಗಳ ಸಂಖ್ಯೆ ಆಗಸ್ಟ್ನಲ್ಲಿ 1.21 ಕೋಟಿ ಮತ್ತು ಸೆಪ್ಟೆಂಬರ್ಗೆ 1.47 ಕೋಟಿ ಆಗಿದೆ. ಆದರೆ, ಅಕ್ಟೋಬರ್ಗೆ, ನವೆಂಬರ್ 18 ರಿಂದ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿರುವ ಕಾರಣ ಇಲಾಖೆ ಇನ್ನೂ ಡೇಟಾವನ್ನು ಸಂಗ್ರಹಿಸಿಲ್ಲ.
ಪ್ರತಿ ತಿಂಗಳು ಯೋಜನೆಗೆ ಜಿಲ್ಲೆಗಳಿಂದ ಉತ್ಪತ್ತಿಯಾಗುವ ಸುಮಾರು ಶೇಕಡ 20 ರಷ್ಟು ಬಿಲ್ಗಳನ್ನು ತೆರವುಗೊಳಿಸಲು ಇಲಾಖೆಯು ದೈನಂದಿನ ಮಿತಿಯನ್ನು ನಿಗದಿಪಡಿಸಿದೆ ಎಂದು ವರದಿಯಾಗಿದೆ. "ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ. ತಿಂಗಳ ಅಂತ್ಯದ ವೇಳೆಗೆ ಎಲ್ಲ ಸರಿಯಾಗಲಿದೆ ಎಂಬ ಭರವಸೆಯಿದೆ," ಎಂದು ಹಣಕಾಸು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಗಳ ಪ್ರಕಾರ, ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ನೋಡಲ್ ಅಧಿಕಾರಿಗಳು ಸಾಧ್ಯವಾಗದ ಕಾರಣ ಶೇ.100 ರಷ್ಟು ಹಣ ವಿತರಣೆಯಲ್ಲಿ ವಿಳಂಬವಾಗಿದೆ.
ಇದರ ಕಾರಣ ನವೆಂಬರ್ ಮೊದಲ ವಾರದಲ್ಲಿ ಇಲಾಖೆಯು ಜಿಲ್ಲೆಗಳ ಎಲ್ಲಾ ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ಉಪನಿರ್ದೇಶಕರಿಗೆ ಫಲಾನುಭವಿಗಳ ಹೆಸರು ಮತ್ತು ಅವರ ಬ್ಯಾಂಕ್ ಖಾತೆಗಳ ವಿವರ ಪರಿಶೀಲನೆಯ ಪ್ರಕ್ರಿಯೆ ಬಗ್ಗೆ ತರಬೇತಿಯನ್ನು ನೀಡಿತು.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications