ಹೌಸಿಂಗ್ ಡೆವಲಪ್ಮೆಂಟ್ ಫೈನಾನ್ಸ್ ಕಾರ್ಪೊರೇಷನ್ (ಎಚ್ಡಿಎಫ್ಸಿ) ಹಾಗೂ ಎಚ್ಡಿಎಫ್ಸಿ ಬ್ಯಾಂಕ್ ವಿಲೀನಕ್ಕೆ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ (ಸಿಸಿಐ) ಅನುಮೋದನೆ ನೀಡಿದೆ. ಈ ಬಗ್ಗೆ ಸಿಸಿಐ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
"ಹೌಸಿಂಗ್ ಡೆವಲಪ್ಮೆಂಟ್ ಫೈನಾನ್ಸ್ ಕಾರ್ಪೊರೇಷನ್ (ಎಚ್ಡಿಎಫ್ಸಿ) ಲಿಮಿಟೆಡ್, ಎಚ್ಡಿಎಫ್ಸಿ ಬ್ಯಾಂಕ್, ಎಚ್ಡಿಎಫ್ಸಿ ಇನ್ವೆಸ್ಟ್ಮೆಂಟ್, ಎಚ್ಡಿಎಫ್ಸಿ ಹೋಲ್ಡಿಂಗ್ಸ್ ಅನ್ನು ವಿಲೀನ ಮಾಡುವ ಪ್ರಸ್ತಾಪವನ್ನು ಅನುಮೋದಿಸಲಾಗಿದೆ," ಎಂದು ಸಿಸಿಐ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಕಳೆದ ತಿಂಗಳಲ್ಲಿ ಎನ್ಎಸ್ಸಿ ಹಾಗೂ ಬಿಎಸ್ಇಯಲ್ಲಿ ವಿಲೀನಕ್ಕೆ ಅನುಮೋದನೆ ಲಭಿಸಿದೆ. ವಿಲೀನವನ್ನು ಘೋಷಣೆ ಮಾಡಿದ ಎರಡು ತಿಂಗಳ ಬಳಿಕ ಷೇರು ಮಾರುಕಟ್ಟೆಯಲ್ಲಿ ವಿಲೀನಕ್ಕೆ ಸಮ್ಮತಿ ದೊರೆತಿದೆ. ಕಂಪನಿಗಳು ಜುಲೈ 2 ರಂದು ಷೇರು ವಿನಿಮಯ ಕೇಂದ್ರಗಳು, ಬಿಎಸ್ಇ ಮತ್ತು ಎನ್ಎಸ್ಇಗಳಿಂದ 'ವೀಕ್ಷಣಾ ಪತ್ರಗಳನ್ನು' ಸ್ವೀಕರಿಸಿವೆ.

ಈಗಾಗಲೇ ಹೌಸಿಂಗ್ ಫೈನಾನ್ಸ್ ಕಂಪನಿಯ ಮಂಡಳಿಯು ಎಚ್ಡಿಎಫ್ಸಿ ಇನ್ವೆಸ್ಟ್ಮೆಂಟ್ ಲಿಮಿಟೆಡ್ ಮತ್ತು ಎಚ್ಡಿಎಫ್ಸಿ ಹೋಲ್ಡಿಂಗ್ಸ್ ಲಿಮಿಟೆಡ್ನ ವಿಲೀನವನ್ನು ಸಹ ಅನುಮೋದಿಸಿದೆ. ಈ ವಿಲೀನದ ಬಗ್ಗೆ ಪ್ರಮುಖ ಮಾಹಿತಿಯನ್ನು ನಾವಿಲ್ಲಿ ವಿವರಿಸಿದ್ದೇವೆ ಮುಂದೆ ಓದಿ...
ವಿಲೀನದ ಬಗ್ಗೆ ತಿಳಿದಿರಬೇಕಾದ ಪ್ರಮುಖ ಮಾಹಿತಿ
ಎಚ್ಡಿಎಫ್ಸಿ-ಎಚ್ಡಿಎಫ್ಸಿ ಬ್ಯಾಂಕ್ ವಿಲೀನವು ಹಣಕಾಸು ವರ್ಷ 2024 ರ ಎರಡನೇ ಅಥವಾ ಮೂರನೇ ತ್ರೈಮಾಸಿಕದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ವಿಲೀನದ ಮೂಲಕ ಶೇಕಡಾ ಎಚ್ಡಿಎಫ್ ಶೇಕಡಾ 41 ರಷ್ಟು ಪಾಲನ್ನು ಸ್ವಾಧೀನಪಡಿಸಿಕೊಳ್ಳಲಿದೆ ಎಂದು ಎಚ್ಡಿಎಫ್ಸಿ ಬ್ಯಾಂಕ್ ಷೇರು ವಿನಿಮಯ ಕೇಂದ್ರಗಳಿಗೆ ಮಾಹಿತಿ ಸಲ್ಲಿಕ್ಕೆ ಮಾಡಿದ್ದು, ಬಿಎಸ್ಇ, ಎನ್ಎಸ್ಇ ಅನುಮೋದಿಸಿದೆ.
ಎಚ್ಡಿಎಫ್ಸಿ, ಎಚ್ಡಿಎಫ್ಸಿ ಬ್ಯಾಂಕ್ ವಿಲೀನದಿಂದಾಗಿ ಅತೀ ದೊಡ್ಡ ಸ್ಟಾಕ್ ಆಗುವ ಸಾಧ್ಯತೆ ಇದೆ. ಈ ವಿಲೀನದ ಮೂಲಕ ಎಚ್ಡಿಎಫ್ಸಿ ಬ್ಯಾಂಕ್ಗೆ ಕೃಷಿ ಸೇರಿದಂತೆ ಆದ್ಯತೆಯ ವಲಯಕ್ಕೆ ಹೆಚ್ಚಿನ ಪ್ರಮಾಣದ ಸಾಲವನ್ನು ಸುಗಮವಾಗಿ ಹಾಗೂ ಶೀಘ್ರವಾಗಿ ನೀಡಲು ಸಾಧ್ಯವಾಗುತ್ತದೆ ಎಂದು ಎಚ್ಡಿಎಫ್ಸಿ ಹೇಳಿದೆ. ಎಚ್ಡಿಎಫ್ಸಿ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ ಅನ್ನು ವಿಲೀನ ಮಾಡುವುದರಿಂದ ಎಚ್ಡಿಎಫ್ಸಿ ಬ್ಯಾಂಕ್ನ ಅಸುರಕ್ಷಿತ ಸಾಲಗಳ ಪ್ರಮಾಣ ಕಡಿಮೆ ಆಗಲಿದೆ.
ಇನ್ನು ಒಪ್ಪಂದದ ಭಾಗವಾಗಿ, ಎಚ್ಡಿಎಫ್ಸಿ ಲಿಮಿಟೆಡ್ನ ಷೇರುದಾರರು ಎಚ್ಡಿಎಫ್ಸಿ ಬ್ಯಾಂಕ್ನ 42 ಷೇರುಗಳನ್ನು (ಪ್ರತಿ ರೂ. 1 ಮುಖಬೆಲೆ) ಎಚ್ಡಿಎಫ್ಸಿ ಲಿಮಿಟೆಡ್ನ 25 ಷೇರುಗಳಿಗೆ (ತಲಾ ರೂ. 2 ಮುಖಬೆಲೆ) ಸ್ವೀಕರಿಸುತ್ತಾರೆ.
ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ಬಳಿಕ ಎಚ್ಡಿಎಫ್ಸಿ ಬ್ಯಾಂಕ್ ಶೇಕಡ 100ರಷ್ಟು ಸಾರ್ವಜನಿಕ ಷೇರುದಾರರ ಒಡೆತನಕ್ಕೆ ಬರಲಿದೆ. ಎಚ್ಡಿಎಫ್ಸಿ ಲಿಮಿಟೆಡ್ನ ಅಸ್ತಿತ್ವದಲ್ಲಿರುವ ಷೇರುದಾರರು ಎಚ್ಡಿಎಫ್ಸಿ ಬ್ಯಾಂಕ್ನ ಶೇಕಡ 41 ಅನ್ನು ಹೊಂದಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications