Anna Bhagya DBT Status: ಅಕ್ಟೋಬರ್ ಅನ್ನಭಾಗ್ಯ ಹಣ ಬಂದಿದೆಯೇ, ಪಾವತಿ ಸ್ಟೇಟಸ್ ಚೆಕ್ ಮಾಡಿ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಮೊತ್ತವನ್ನು ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡುವುದನ್ನು ಸೋಮವಾರ, ಜುಲೈ 10, 2023 ರಿಂದ ಪ್ರಾರಂಭಿಸಿದೆ. ಈಗಾಗಲೇ ಸೆಪ್ಟೆಂಬರ್ ತಿಂಗಳ ಮೊತ್ತ ಲಭ್ಯವಾಗಿದೆ. ಈಗ ಅಕ್ಟೋಬರ್ ತಿಂಗಳ ಮೊತ್ತ ಜಮೆಯಾಗಬೇಕಾಗಿದೆ.

ಅನ್ನ ಭಾಗ್ಯ ಯೋಜನೆಯಡಿ, ಕರ್ನಾಟಕ ಸರ್ಕಾರವು ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಗಳ ನಗದು ಪಾವತಿಸಲು ನಿರ್ಧರಿಸಿದೆ. ಉಚಿತ ಅಕ್ಕಿ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ, ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ, ಅಂತ್ಯೋದಯ ಕುಟುಂಬದ ಸದಸ್ಯರಿಗೆ 34 ರೂಪಾಯಿಯಂತೆ ನೀಡಲಾಗುತ್ತದೆ.

 ಅಕ್ಟೋಬರ್ ಅನ್ನಭಾಗ್ಯ ಹಣ ಬಂದಿದೆಯೇ, ಪಾವತಿ ಸ್ಟೇಟಸ್ ಚೆಕ್ ಮಾಡಿ

ಆರಂಭದಲ್ಲಿ ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವು 10 ಕೆಜಿ ಅಕ್ಕಿಯನ್ನು ನೀಡಲು ನಿರ್ಧಾರ ಮಾಡಿತ್ತು. ಆದರೆ ಅದಾದ ಬಳಿಕ ಅಕ್ಕಿ ಕೊರತೆಯ ಬೆನ್ನಲ್ಲೇ ಯೋಜನೆಯಲ್ಲಿ ಕೊಂಚ ಬದಲಾವಣೆಯನ್ನು ಸರ್ಕಾರ ಮಾಡಿದ್ದು, 5 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಹೇಳಿದೆ. ಉಳಿದ 5 ಕೆಜಿಯ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಗಳ ದರದಲ್ಲಿ ನಗದನ್ನು ಸರ್ಕಾರ ಪಾವತಿಸುತ್ತಿದೆ.

ಬಿಪಿಎಲ್ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಗಳಿಗೆ ಲಿಂಕ್ ಮಾಡಲಾದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣವನ್ನು ನೇರವಾಗಿ ವರ್ಗಾಯಿಸಲಾಗುತ್ತದೆ. ರಾಜ್ಯ ಸರ್ಕಾರದ ಪ್ರಕಾರ, ಕರ್ನಾಟಕವು 'ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ' 1.28 ಕೋಟಿ ಪಡಿತರ ಚೀಟಿಗಳನ್ನು ಹೊಂದಿದೆ.

ಈ ಕಾರ್ಡ್‌ಗಳಲ್ಲಿ ಶೇಕಡ 99 ರಷ್ಟು ಆಧಾರ್ ಸಂಖ್ಯೆಯೊಂದಿಗೆ ಫ್ರೀಜ್ ಮಾಡಲಾಗಿದೆ. ಈ ಕಾರ್ಡ್‌ಗಳಲ್ಲಿ ಶೇಕಡ 82 ರಷ್ಟು (1.06 ಕೋಟಿ) ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಲಿಂಕ್ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಹೇಳಿದೆ.

ಅನ್ನಭಾಗ್ಯ ಯೋಜನೆ ಆರಂಭ

ಐದು ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಹೊಸ ಯೋಜನೆ ಏನಲ್ಲ. ಇದು ಸುಮಾರು ಹತ್ತು ವರ್ಷಗಳ ಹಿಂದೆ ಆರಂಭ ಮಾಡಲಾಗಿರುವ ಯೋಜನೆಯಾಗಿದೆ. ರಾಜ್ಯದಲ್ಲಿ ಜುಲೈ 2013 ರಿಂದ 'ಅನ್ನಭಾಗ್ಯ' ಯೋಜನೆಯನ್ನು ಅಂದಿನ ಸಿಎಂ ಸಿದ್ಧರಾಮಯ್ಯ ಜಾರಿಗೆ ತಂದಿದ್ದಾರೆ. ಈ ಯೋಜನೆ ಜಾರಿಯಾದ ಬಳಿಕ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪ್ರತಿ ಬಿಪಿಎಲ್ ಕುಟುಂಬಗಳಿಗೆ ವಿತರಣೆ ಮಾಡಲಾಗುವ ರೇಷನ್ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ.

2013ಕ್ಕೂ ಮೊದಲು ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ಕನಿಷ್ಟ 4 ಕೆ.ಜಿ ಅಕ್ಕಿ ಮತ್ತು 1 ಕೆ.ಜಿ ಗೋಧಿಯಂತೆ ಒಂದು ಕುಟುಂಬಕ್ಕೆ ಗರಿಷ್ಟ 20 ಕೆ.ಜಿ ಅಕ್ಕಿ ಮತ್ತು 3 ಕೆ.ಜಿ ಗೋಧಿಯನ್ನು ವಿತರಣೆ ಮಾಡಲಾಗುತ್ತಿತ್ತು. ಆದರೆ ಈ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 2015ರಿಂದ ಅರ್ಹ ಬಿಪಿಎಲ್ ಏಕ ಸದಸ್ಯ ಕುಟುಂಬಗಳಿಗೆ 10 ಕೆ.ಜಿ, ದ್ವಿ ಸದಸ್ಯ ಕುಟುಂಬಗಳಿಗೆ 20 ಕೆ.ಜಿ, 3 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ಕುಟುಂಬಗಳಿಗೆ 30 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ಕೆಜಿಗೆ ಒಂದು ರೂಪಾಯಿಯಂತೆ ಹಂಚಿಕೆಯನ್ನು ಮಾಡಲಾಗುತ್ತಿತ್ತು.

ಅನ್ನ ಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್ ಪರಿಶೀಲಿಸಿ

ಹಂತ 1: ಕರ್ನಾಟಕ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್ https://ahara.kar.nic.in/ ಗೆ ಭೇಟಿ ನೀಡಿ
ಹಂತ 2: ಹೋಮ್‌ಪೇಜ್‌ನಲ್ಲಿ ಇ-ಸೇವೆಗಳ ಟ್ಯಾಬ್ ಅನ್ನು ಕ್ಲಿಕ್ ಮಾಡಿ
ಹಂತ 3: ಈ ಡಿಬಿಟಿ ಸ್ಟೇಟಸ್ ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 4: ತಿಂಗಳು, ವರ್ಷವನ್ನು ಆಯ್ಕೆ ಮಾಡಿ. ನಿಮ್ಮ ಪಡಿತರ ಚೀಟಿ ಸಂಖ್ಯೆ (ಆರ್‌ಸಿ ಸಂಖ್ಯೆ) ನಮೂದಿಸಿ ಮತ್ತು continue ಕ್ಲಿಕ್ ಮಾಡಿ
ಹಂತ 5: ಅನ್ನ ಭಾಗ್ಯ ಅಡಿಯಲ್ಲಿ ನಿಮ್ಮ ಡಿಬಿಟಿ ಸ್ಟೇಟಸ್ ಪರದೆಯ ಮೇಲೆ ಕಾಣಲಿದೆ.

ಬರಪೀಡಿತ ತಾಲೂಕುಗಳಲ್ಲಿ ಅಕ್ಕಿ ನೀಡಲು ಸರ್ಕಾರ ಚಿಂತನೆ

ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಧನಸಹಾಯವನ್ನು ನೀಡುವ ಬದಲಾಗಿ ಬರಪೀಡಿತ ಎಂದು ಗೊತ್ತುಪಡಿಸಿದ ತಾಲ್ಲೂಕುಗಳಲ್ಲಿ 5 ಕೆಜಿ ಅಕ್ಕಿಯನ್ನು ವಿತರಿಸಲು ಯೋಜಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಇತ್ತೀಚೆಗೆ ಹೇಳಿದರು.

ಸರ್ಕಾರ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಅಕ್ಕಿ ವಿತರಣೆಯನ್ನು ಪ್ರಾರಂಭಿಸಲಾಗುವುದು ಎಂದು ಮುನಿಯಪ್ಪ ಹೇಳಿದರು. ಪ್ರಸ್ತುತ, ಸಾಕಷ್ಟು ಅಕ್ಕಿ ದಾಸ್ತಾನು ಇಲ್ಲದ ಕಾರಣ, ಸರ್ಕಾರವು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಫಲಾನುಭವಿಗಳಿಗೆ ಹಣಕಾಸು ನೆರವನ್ನು ನೀಡುತ್ತಿದೆ.

ಮುಂದಿನ ಹತ್ತು ದಿನಗಳಲ್ಲಿ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ನಾವು ಆಂಧ್ರಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢದೊಂದಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ಪಡೆಯಲು ಚರ್ಚೆಯಲ್ಲಿ ತೊಡಗಿದ್ದೇವೆ ಎಂದು ಎಂದು ಹೇಳಿದರು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+