ಭಾರತದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕ್ನ ಮೊಬೈಲ್ ಅಪ್ಲಿಕೇಶನ್ನಲ್ಲಿ ಸಮಸ್ಯೆ ಉಂಟಾಗಿದ್ದು, ಗ್ರಾಹಕರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಮಾಧ್ಯಮಗಳ ವರದಿಗಳು ಉಲ್ಲೇಖ ಮಾಡಿದೆ. ಮಿಂಟ್ ವರದಿಯ ಪ್ರಕಾರ, ಗ್ರಾಹಕರು ಅಪ್ಲಿಕೇಶನ್ ಮೂಲಕ ಲಾಗ್ ಇನ್ ಮಾಡುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೆ, ಶುಕ್ರವಾರ ನೆಟ್ ಬ್ಯಾಂಕಿಂಗ್ ಸೇವೆಗಳು ಸ್ಥಗಿತಗೊಂಡಿವೆ.
ವರದಿಗಳ ಪ್ರಕಾರ, ಜನರು ಅಪ್ಲಿಕೇಶನ್ ಮೂಲಕ ಲಾಗ್ ಇನ್ ಮಾಡಲು ಪ್ರಯತ್ನಿಸಿದಾಗ, "ನಿಮ್ಮ ವಿನಂತಿಯನ್ನು ಪ್ರಕ್ರಿಯೆಗೊಳಿಸುವಲ್ಲಿ ನಾವು ಪ್ರಸ್ತುತ ತೊಂದರೆಯನ್ನು ಅನುಭವಿಸುತ್ತಿದ್ದೇವೆ" ಎಂಬ ಸಂದೇಶವು ಪಾಪ್ ಅಪ್ ಆಗಿತ್ತು. ದಯವಿಟ್ಟು ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಿ ಎಂಬ ಸಂದೇಶ ಕೂಡಾ ಕಂಡು ಬಂದಿದೆ.
ಐಸಿಐಸಿಐ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. "ಆತ್ಮೀಯ ಗ್ರಾಹಕರೇ, http://ICICIdirect.com ನಲ್ಲಿ ಈ ಕ್ಷಣದಲ್ಲಿ ವ್ಯತ್ಯಯ ಉಂಟಾಗಿದೆ. ಸಾಧ್ಯವಾದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಿ ಸಾಮಾನ್ಯ ಸ್ಥಿತಿಗೆ ತರುವ ಕಾರ್ಯವನ್ನು ನಾವು ಮಾಡುತ್ತೇವೆ. ಈ ಬಗ್ಗೆ ನಿಮಗೆ ಅಪ್ಡೇಟ್ ನೀಡಲಾಗುವುದು. ಸೇವೆಯಲ್ಲಿ ವ್ಯತ್ಯಯಕ್ಕೆ ನಾವು ತೀವ್ರವಾಗಿ ವಿಷಾಧ ವ್ಯಕ್ತಪಡಿಸುತ್ತೇವೆ," ಎಂದು ತಿಳಿಸಿದ್ದಾರೆ.

ಟ್ವಿಟ್ಟರ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ ನೆಟ್ಟಿಗರು
ಈ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಟೆಕ್ ಬ್ಲಾಗರ್ ಗೀಕಿ ರಂಜಿತ್, "ಐಸಿಐಸಿಐನಲ್ಲಿ ಪ್ರಮುಖ ಸಮಸ್ಯೆ ಇರುವಂತೆ ಕಂಡು ಬಂದಿದೆ. ನಾನು ಐಸಿಐಸಿಐ ಬ್ಯಾಂಕ್ ಖಾತೆಗೆ ಲಾಗಿನ್ ಆಗಲು ಪ್ರಯತ್ನ ಮಾಡಿದಾಗ ತೊಂದರೆ ಉಂಟಾಗುತ್ತಿದೆ. ಸೈಬರ್ ದಾಳಿ ಆಗಿದೆಯೇ ಅಥವಾ ಸಿಸ್ಟಮ್ ಡೌನ್ ಆಗಿದೆಯೇ?," ಎಂದು ಪ್ರಶ್ನೆ ಮಾಡಿದ್ದಾರೆ.
ಮತ್ತೊಬ್ಬ ಬಳಕೆದಾರ ಅಂಶುಲ್ ಶ್ರೀವಾಸ್ತವ ಕೂಡ ಟ್ವೀಟ್ ಮಾಡಿದ್ದಾರೆ, "ಹಲೋ @ICICIBank @ICICIBank_Care ನಿಮ್ಮ ಕಾರ್ಪೊರೇಟ್ ಬ್ಯಾಂಕಿಂಗ್ ವೆಬ್ಸೈಟ್ ಡೌನ್ ಆಗಿರುವಂತೆ ತೋರುತ್ತಿದೆ. ದಯವಿಟ್ಟು ಬ್ಯಾಂಕ್ ತಮ್ಮ ವೆಬ್ಸೈಟ್ಡೌನ್ ಅನ್ನು ಪರಿಶೀಲನೆ ಮಾಡಿ," ಎಂದು ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications