ಅನೇಕರು ಬ್ಯಾಂಕ್, ಷೇರು ಮಾರಕಟ್ಟೆ, ರಿಯಲ್ ಎಸ್ಟೇಟ್, ಪೋಸ್ಟ್ ಆಫೀಸ್ ಹೀಗೆ ಹಲವಾರು ಕಡೆ ಹೂಡಿಕೆ ಮಾಡುತ್ತಾರೆ. ಆದ್ರೆ ಹೂಡಿಕೆ ಮಾಡುವವರಿಗೆ ಪೋಸ್ಟ್ ಆಫೀಸ್ ಯೋಜನೆಗಳು (Post Office Schemes) ಉತ್ತಮವಾಗಿರುತ್ತೆ. ಇದು ಅತ್ಯಂತ ಸುರಕ್ಷಿತವೂ ಹೌದು. ಆದ್ದರಿಂದ ಎಷ್ಟೋ ಜನರು ಈಗಾಗಲೇ ಪೋಸ್ಟ್ ಆಫೀಸ್ ಯೋಜನೆಗಳ ಮೂಲಕ ತನ್ನ ಹೂಡಿಕೆಗಳನ್ನು ಮಾಡಲು ಶುರು ಮಾಡಿದ್ದಾರೆ. ದುಡಿದ ಹಣದಲ್ಲಿ ಇಂತಿಷ್ಟು ಅಂತ ಭವಿಷ್ಯಕ್ಕಾಗಿ ಸೇವಿಂಗ್ಸ್ (Savings Tips) ಮಾಡುತ್ತಿದ್ದಾರೆ. ಆದ್ರೆ ಪೋಸ್ಟ್ ಆಫೀಸ್ನಲ್ಲಿ ಹಲವಾರು ಹೂಡಿಕೆ ಯೋಜನೆಗಳಿವೆ. ಆದರೆ ಇವುಗಳಲ್ಲಿ ಯಾವುದು ಬೆಸ್ಟ್, ಯಾವುದರಲ್ಲಿ ಹೆಚ್ಚು ಲಾಭ ಬರುತ್ತೆ ಎಂದು ಗೊತ್ತಾ? ಹಾಗಿದ್ರೆ ಇಲ್ಲಿ ನಾವು ನಿಮಗೆ ಪೋಸ್ಟ್ ಆಫೀಸ್ನ ಬೆಸ್ಟ್ 5 ಹೂಡಿಕೆ ಯೋಜನೆ ಬಗ್ಗೆ ಹೇಳಲಿದ್ದೇವೆ ನೋಡಿ.

1. ಸುಕನ್ಯಾ ಸಮೃದ್ಧಿ ಯೋಜನೆ (SSA): ಹೆಣ್ಣುಮಕ್ಕಳಿಗಾಗಿ ಅಂತಾನೇ ಕೇಂದ್ರ ಸರ್ಕಾರ ಶುರು ಮಾಡಿದ ಯೋಜನೆಯೆಂದರೆ ಅದು ಸುಕನ್ಯಾ ಸಮೃದ್ಧಿ ಯೋಜನೆ. ಹೆಣ್ಣುಮಕ್ಕಳು ಕೂಡಾ ಸ್ವಾವಲಂಬಿಗಳಾಗಿ ಬದುಕಬೇಕೆಂಬುದು ಈ ಯೋಜನೆಯ ಮುಖ್ಯ ಉದ್ದೇಶ. ಶಿಕ್ಷಣ, ಮದುವೆ, ಉದ್ಯೋಗ ಹೀಗೆ ಇನ್ನಿತರ ಖರ್ಚುಗಳಿಗಾಗಿ ಈ ಯೋಜನೆಯಲ್ಲಿ ಪೋಷಕರು ಹೆಣ್ಣುಮಗುವಿನ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದು. ಈ ಯೋಜನೆಯಲ್ಲಿ, ಪೋಷಕರು ತಮ್ಮ ಮಗಳ ಹೆಸರಿನಲ್ಲಿ ಖಾತೆಯನ್ನು ತೆರೆದು, ಹೂಡಿಕೆ ಮಾಡಬಹುದು. ಈ ಯೋಜನೆಯು ವಾರ್ಷಿಕವಾಗಿ 8.2% ಬಡ್ಡಿಯನ್ನು ನೀಡುತ್ತದೆ. ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಅಲ್ಲದೇ ಬರೀ 250 ರೂಪಾಯಿಯಿಂದ ವಾರ್ಷಿಕವಾಗಿ 1.5 ಲಕ್ಷದವರೆಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.
2. RD ಯೋಜನೆ: ಈ ಆರ್ಡಿ ಯೋಜನೆಯನ್ನು ಮಧ್ಯಮ ವರ್ಗದ ಜನರಿಗಾಗಿ ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ತಿಂಗಳಿಗೆ ಕೇವಲ 100 ರೂ. ಹೂಡಿಕೆ ಮಾಡುವ ಮೂಲಕ ಓಪನ್ ಮಾಡಬಹುದು. ಅಲ್ಲದೇ ವಾರ್ಷಿಕವಾಗಿ ನಿಮ್ಮ ಹೂಡಿಕೆಗೆ 6.7% ಬಡ್ಡಿದರವನ್ನು ಸಹ ಇದು ನೀಡುತ್ತದೆ. ಇನ್ನು ಈ ಯೋಜನೆಯನ್ನು ಒಬ್ಬರು ಅಥವಾ ಇಬ್ಬರೂ ಕೂಡ ಓಪನ್ ಮಾಡಬಹುದು.
3. ಸಾರ್ವಜನಿಕ ಭವಿಷ್ಯ ನಿಧಿ (PPF): ಪಿಪಿಎಫ್ ಯೋಜನೆ, ಇದು ಸಾರ್ವಜನಿಕರಿಗಾಗಿ, ಪಿಎಫ್ ಖಾತೆ ಹೊಂದಿರದವರಿಗಾಗಿ ಜಾರಿ ಮಾಡಿದ ವಿಶೇಷ ಯೋಜನೆ. ಪಿಪಿಎಫ್ ಯೋಜನೆ ದೀರ್ಘಾವಧಿ ಹೂಡಿಕೆ ಮಾಡುವವರಿಗೆ ಹೇಳಿಮಾಡಿಸಿದ ಯೋಜನೆಯಾಗಿದೆ. ಇನ್ನು ಈ ಯೋಜನೆ ಮೂಲಕ ನೀವು ಖಾತೆ ಓಪನ್ ಮಾಡಿದರೆ ತೆರಿಗೆ ವಿನಾಯಿತಿಯನ್ನೂ ಪಡೆಯಬಹುದು. ಪ್ರಸ್ತುತ ಪಿಪಿಎಫ್ ಯೋಜನೆ ಮೂಲಕ ವಾರ್ಷಿಕ 7.1% ಬಡ್ಡಿದರ ಪಡೆಯಬಹುದು. ಇನ್ನು ಈ ಯೋಜನೆಯಲ್ಲಿ ನಿಮಗೆ ಹೂಡಿಕೆ ಮಿತಿಯಿದ್ದು, ಕನಿಷ್ಠ ₹500 ಮತ್ತು ಗರಿಷ್ಠ ₹1.5 ಲಕ್ಷದವರೆಗೆ ಹೂಡಿಕೆ ಮಾಡಬಹುದು. ಇನ್ನು ಈ ಖಾತೆಯ ಅವಧಿ 15 ವರ್ಷಗಳು.
4. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (NSC): ಭಾರತ ಸರ್ಕಾರವು ನೀಡುವ ಮತ್ತೊಂದು ಸುರಕ್ಷಿತ ಮತ್ತು ವಿಶ್ವಾಸಾರ್ಹ ಹೂಡಿಕೆ ಯೋಜನೆಯೆಂದರೆ ಅದು ಎನ್ಎಸ್ಸಿ ಯೋಜನೆ. ಇನ್ನು ಈ ಯೋಜನೆ ಸಂಬಂಧಿಸಿದ ಪ್ರಮಾಣಪತ್ರವನ್ನು ಅಂಚೆ ಕಚೇರಿಯಿಂದ ಪಡೆಯಬಹುದು. NSC ಯಲ್ಲಿ ಗಳಿಸಿದ ಬಡ್ಡಿಯನ್ನು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಕಡಿತಗೊಳಿಸುವಲ್ಲಿ ಪಾತ್ರವಹಿಸುತ್ತದೆ. ಈ ಕಾರಣದಿಂದಾಗಿ, ಹೆಚ್ಚಿನ ಉದ್ಯೋಗಿಗಳು, ಉದ್ಯಮಿಗಳು ತೆರಿಗೆ ಉಳಿಸುವ ನಿಟ್ಟಿನಲ್ಲಿ ಈ ಯೋಜನೆಯಲ್ಲಿ ಹೂಡಿಕೆ ಮಾಡುತ್ತಾರೆ. ಇನ್ನು ಇದರ ಲಾಕ್ಇನ್ ಅವಧಿ 5 ವರ್ಷಗಳು.
5. ಕಿಸಾನ್ ವಿಕಾಸ್ ಪತ್ರ (KVP):
ಪೋಸ್ಟ್ ಆಫೀಸ್ನ ಹಲವು ಯೋಜನೆಗಳಲ್ಲಿ ಕಿಸಾನ್ ವಿಕಾಸ್ ಪತ್ರ ಯೋಜನೆ ಕೂಡಾ ಒಂದು. ಇದನ್ನು ಭಾರತ ಸರ್ಕಾರವು ಏಪ್ರಿಲ್ 1, 1988 ರಂದು ಸಾರ್ವಜನಿಕರ ಹಿತದೃಷ್ಟಿಯಿಂದ ಆರಂಭಿಸಿದೆ. ಇದು ಒಂದು ಸುರಕ್ಷಿತ ಯೋಜನೆಯಾಗಿದ್ದು, ಒಮ್ಮೆ ಈ ಯೋಜನೆ ಮೂಲಕ ಹೂಡಿಕೆ ಮಾಡಿದ್ರೆ, ಕೆಲವು ವರ್ಷಗಳ ನಂತರ ನಿಮ್ಮ ಹಣವನ್ನು ಡಬಲ್ ಮಾಡಬಹುದು. ಪ್ರಸ್ತುತ, ಈ ಯೋಜನೆಯು ವರ್ಷಕ್ಕೆ 7.5% ಬಡ್ಡಿಯನ್ನು ನೀಡುತ್ತಿದ್ದು, ಹೂಡಿಕೆಗೆ ಉತ್ತಮ ಲಾಭವನ್ನು ನೀಡುತ್ತದೆ. ಹೆಚ್ಚು ಹೂಡಿಕೆ ಮಾಡಿದ್ರೆ ಹೆಚ್ಚು ಬಡ್ಡಿದರವನ್ನು ಪಡೆಯಬಹುದು. ಇನ್ನು ನೀವು ಹೂಡಿಕೆ ಮಾಡಿದ ಹನ 9 ವರ್ಷ 7 ತಿಂಗಳಲ್ಲಿ ಡಬಲ್ ಆಗುತ್ತದೆ. ಈ ಯೋಜನೆಯ ಮೇಲಿನ ಹೂಡಿಕೆಗೆ ಯಾವುದೇ ಗರಿಷ್ಠ ಮಿತಿಯಿಲ್ಲ. ಇದಕ್ಕಾಗಿ ನೀವು ಅಂಚೆ ಕಚೇರಿಯಲ್ಲಿ ಅಥವಾ ಯಾವುದೇ ಬ್ಯಾಂಕ್ಗಳಲ್ಲಿ ಹೋಗಿ KVP ಅಕೌಂಟ್ ಓಪನ್ ಮಾಡಬೇಕು. ಅಲ್ಲದೇ ಎರಡೂವರೆ ವರ್ಷದ ನಂತರ ನೀವು ಹೂಡಿಕೆ ಮಾಡಿರುವ ಹಣವನ್ನು ಹಿಂಪಡೆಯುವ ಅವಕಾಶವೂ ಇದೆ.
(ಹಕ್ಕುತ್ಯಾಗ: ವ್ಯಕ್ತಿಗತ ವಿಶ್ಲೇಷಕರ ಅಥವಾ ಘಟಕಗಳ ಅಭಿಪ್ರಾಯಗಳು ಮತ್ತು ಶಿಫಾರಸುಗಳು ಮಾತ್ರ ಇಲ್ಲಿ ಸೂಚಿಸಲಾಗಿದೆ ಮತ್ತು ಅವು Goodreturns.in ಅಥವಾ Greynium Information Technologies Private Limited (ಒಟ್ಟಿಗೆ "ನಾವು" ಎಂದು ಉಲ್ಲೇಖಿಸಲಾಗಿದೆ) ಅವರ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಯಾವುದೇ ವಿಷಯದ ನಿಖರತೆ, ಪೂರ್ಣತೆ ಅಥವಾ ನಂಬಿಕಾರ್ಹತೆಯನ್ನು ನಾವು ಖಚಿತಪಡಿಸುವುದಿಲ್ಲ, ಸಮರ್ಥಿಸುತ್ತಿಲ್ಲ ಅಥವಾ ಹೊಣೆಗಾರರಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ_SECURITIES_ ಖರೀದಿ ಅಥವಾ ಮಾರಾಟವನ್ನು ಪ್ರೇರೇಪಿಸುವುದಿಲ್ಲ. ಎಲ್ಲಾ ಮಾಹಿತಿಯು ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ನೀಡಲಾಗಿದ್ದು, ಯಾವುದೇ ಹೂಡಿಕೆ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಲೈಸೆನ್ಸ್ ಪಡೆದ ಹಣಕಾಸು ಸಲಹೆಗಾರರಿಂದ ಸ್ವತಃ ಪರಿಶೀಲಿಸುವುದು ಅಗತ್ಯ.)
More From GoodReturns

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Mysuru: ಮೈಸೂರಲ್ಲಿ ರಾಜ್ಯದ ಮೊದಲ ಗ್ಲೋಬಲ್ ಟೆಕ್ನಾಲಜಿ ಸೆಂಟರ್ ಆರಂಭ; 10 ಸಾವಿರ ಐಟಿ ಉದ್ಯೋಗಗಳ ನಿರೀಕ್ಷೆ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

LPG cylinder shortage: ಬೆಂಗಳೂರಲ್ಲಿ 1,700ರೂ. ಸಿಲಿಂಡರ್ 5,000 ರೂ.ಗೆ ಮಾರಾಟ..ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ



Click it and Unblock the Notifications