ಪಿಎನ್ ಬಿ ಮೆಟ್ ಲೈಫ್ ಇಂಡಿಯಾ ಇನ್ಷೂರೆನ್ಸ್ ಕಂಪೆನಿ ಲಿಮಿಟೆಡ್ ಜತೆಗೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಕೈಜೋಡಿಸಿ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾವನ್ನು ಆರಂಭಿಸಿದೆ. ಯಾವುದೇ ಕಾರಣದಿಂದ ಸಾವು ಸಂಭವಿಸಿದರೂ ಲೈಫ್ ಕವರ್ ಆಗುತ್ತದೆ.
ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ ಬಗ್ಗೆ ಗೊತ್ತಿರಬೇಕಾದ ಸಂಗತಿಗಳು:
* ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಖಾತೆದಾರರಿಗೆ ಈ ಯೋಜನೆಯು ಐಚ್ಛಿಕವಾಗಿರುತ್ತದೆ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ ಅಡಿಯಲ್ಲಿ ಖಾತೆ ತೆರೆಯಲು ಆಧಾರ್ ಕಾರ್ಡ್ ಎಂಬುದು ಕೆವೈಸಿಗೆ ಪ್ರಾಥಮಿಕ ದಾಖಲಾತಿ.
* ಈ ಯೋಜನೆ ನೋಂದಣಿಗೆ ಗ್ರಾಹಕರಿಗೆ ಕನಿಷ್ಠ ಹದಿನೆಂಟು ವರ್ಷಗಳಾಗಿರಬೇಕು. ಗರಿಷ್ಠ ವಯೋಮಿತಿ ಐವತ್ತು ವರ್ಷ.
* ಇನ್ಷೂರ್ಡ್ ವ್ಯಕ್ತಿ ಮೃತಪಟ್ಟಲ್ಲಿ ನಿಶ್ಚಿತವಾದ ಎರಡು ಲಕ್ಷ ರುಪಾಯಿ ಮೊತ್ತ ನಾಮಿನಿಗೆ ದೊರೆಯುತ್ತದೆ. ಈ ಯೋಜನೆ ಅಡಿಯಲ್ಲಿ ಮೆಚ್ಯೂರಿಟಿ ಅಥವಾ ಸರೆಂಡರ್ ಅನುಕೂಲ ಇಲ್ಲ.

* ಗ್ರಾಹಕರು ವರ್ಷಕ್ಕೆ 330 ರುಪಾಯಿ ಪ್ರೀಮಿಯಂ ಪಾವತಿಸಬೇಕು. ಒಂದು ವರ್ಷದ ಅವಧಿಗೆ ಕವರ್ ಆಗುತ್ತದೆ. ವರ್ಷದಿಂದ ವರ್ಷಕ್ಕೆ ರಿನೀವಲ್ ಆಗುತ್ತದೆ. ಜೂನ್ 1ರಿಂದ ಮೇ 31ರ ಮಧ್ಯೆ ನಿಶ್ಚಿತ ಟೈಮ್ ಲೈನ್ ಆಗಿರುತ್ತದೆ.
* ಗ್ರಾಹಕರ ಉಳಿತಾಯ ಖಾತೆಯಿಂದ ವಾರ್ಷಿಕ ಪ್ರೀಮಿಯಂ ಮೊತ್ತ ಕಡಿತ ಆಗುತ್ತದೆ. ಮೊದಲ ಪ್ರೀಮಿಯಂ ನಿರ್ಧಾರ ಆಗುವುದು ಯಾವ ತ್ರೈಮಾಸಿಕದಲ್ಲಿ ಯೋಜನೆ ಆರಿಸಿಕೊಳ್ಳುತ್ತೀರಿ ಎಂಬುದರ ಮೇಲೆ ಆಧಾರ ಪಟ್ಟಿರುತ್ತದೆ. ಗ್ರಾಹಕರ ಖಾತೆಯಲ್ಲಿ ಅಗತ್ಯ ಪ್ರಮಾಣದಲ್ಲಿ ಮೊತ್ತ ಇರಬೇಕು.
* ಸದಸ್ಯರಿಗೆ 55 ವರ್ಷಗಳು ತುಂಬಿದ ಮೇಲೆ ಲೈಫ್ ಕವರ್ ಟರ್ಮಿನೇಟ್ ಮಾಡಬಹುದು.
* ನೋಂದಣಿಯಾದ ನಲವತ್ತೈದು ದಿನಗಳ ನಂತರ ಪಾಲಿಸಿದಾರರು ಸಾವನ್ನಪ್ಪಿದಲ್ಲಿ ನಾಮಿನಿಗೆ ಅನುಕೂಲ ವರ್ಗಾವಣೆ ಆಗುತ್ತದೆ. ಅಪಘಾತದಿಂದ ಸಾವು ಸಂಭವಿಸಿದಲ್ಲಿ 'ಕೂಲಿಂಗ್ ಪೀರಿಯಡ್' ಅಗತ್ಯ ಇಲ್ಲ.
* ಈ ಪಾಲಿಸಿಗಾಗಿ ಕಟ್ಟುವ ಪ್ರೀಮಿಯಂಗೆ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಅನುಕೂಲ ದೊರೆಯಲಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications