ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಮೇ 19 ರಂದು 2000 ರೂಪಾಯಿಯನ್ನು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರವನ್ನು ತಿಳಿಸಿದೆ. ಹಾಗೆಯೇ ನೋಟು ಬದಲಾವಣೆ, ನೋಟು ಡೆಪಾಸಿಟ್ ಮಾಡಲು ಅಕ್ಟೋಬರ್ 15ರವರೆಗೆ ಅವಕಾಶ ನೀಡಲಾಗಿದೆ. ಆದರೆ ಈಗ 1000 ರೂಪಾಯಿ ನೋಟನ್ನು ಮತ್ತೆ ಚಲಾವಣೆಗೆ ತರಲಾಗುತ್ತಾ ಎಂಬ ಸುದ್ದಿಯಿದೆ.
2016ರಲ್ಲಿ ಮೋದಿ ಸರ್ಕಾರವು 500 ರೂಪಾಯಿ ಹಾಗೂ 1000 ರೂಪಾಯಿ ನೋಟುಗಳನ್ನು ದಿಡೀರ್ ಆಗಿ ಬ್ಯಾನ್ ಮಾಡಿದೆ. ಹಾಗೆಯೇ ಚಲಾವಣೆಯಲ್ಲಿರುವ ಶೇಕಡ 88 ಕ್ಕಿಂತ ಹೆಚ್ಚು ಕರೆನ್ಸಿಯನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು. ಆದರೆ ಈಗ ಮತ್ತೆ 1000 ರೂಪಾಯಿ ನೋಟು ಚಲಾವಣೆಗೆ ಬರಲಿದೆಯೇ? ಎಂಬ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ....

1000 ರೂಪಾಯಿ ನೋಟು ಚಲಾವಣೆಗೆ ಬರುತ್ತಾ?
ಮಾಹಿತಿ ಪ್ರಕಾರ ಆರ್ಬಿಐ ಆಗಲಿ ಅಥವಾ ಸರ್ಕಾರವಾಗಿ 1000 ರೂಪಾಯಿ ಕರೆನ್ಸಿ ನೋಟುಗಳನ್ನು ಮತ್ತೆ ಆರಂಭ ಮಾಡುವ ಯಾವುದೇ ನಿರ್ಧಾರವನ್ನು ಮಾಡಿಲ್ಲ. ಆರ್ಬಿಐ ಅಂತಹ ಯಾವುದೇ ಯೋಜನೆ ಅಥವಾ ತೀರ್ಮಾನವನ್ನು ಮಾಡಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
"ಆರ್ಬಿಐ 1000 ರೂಪಾಯಿ ನೋಟು ಮರು ಪರಿಚಯಿಸುವ ನಿರ್ಧಾರವನ್ನು ಮಾಡಿಲ್ಲ, ಈ ಬಗ್ಗೆ ಯಾವುದೇ ಯೋಜನೆಯನ್ನು ಹೊಂದಿಲ್ಲ," ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ಹೇಳಿದೆ.
2016 ರಲ್ಲಿ ಹಳೆಯ 500 ರೂಪಾಯಿ ನೋಟುಗಳ ಜೊತೆಗೆ 1000 ರೂಪಾಯಿ ನೋಟುಗಳನ್ನು ಅಮಾನ್ಯಗೊಳಿಸಲಾಗಿದೆ. 1000 ರೂಪಾಯಿ ನೋಟುಗಳ ಬದಲಿಗೆ ಸರ್ಕಾರವು ಹೊಸ 2000 ರೂಪಾಯಿ ನೋಟುಗಳನ್ನು ಪರಿಚಯಿಸಿದೆ. ಹಾಗೆಯೇ ಹೊಸದಾಗಿ 500 ರೂಪಾಯಿ ನೋಟುಗಳನ್ನು ಕೂಡಾ ಪರಿಚಯಿಸಿದೆ.
ಆದರೆ 2000 ರೂಪಾಯಿ ನೋಟುಗಳನ್ನು ಈಗ ಆರ್ಬಿಐ ಚಲಾವಣೆಯಿಂದ ಹಿಂಪಡೆದಿದೆ. 2000 ರೂಪಾಯಿ ನೋಟುಗಳನ್ನು ಆರಂಭಿಕವಾಗಿ ಜನರು ಮತ್ತು ಸಂಸ್ಥೆಗಳು ಸೆಪ್ಟೆಂಬರ್ 30 ರೊಳಗೆ ಬದಲಾವಣೆ ಮಾಡಿಕೊಳ್ಳಲು ಅಥವಾ ಬ್ಯಾಂಕ್ ಖಾತೆಗಳಿಗೆ ಡೆಪಾಸಿಟ್ ಮಾಡಲು ತಿಳಿಸಲಾಗಿತ್ತು. ಆದರೆ ಗಡುವನ್ನು ಬಳಿಕ ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಯಿತು.
ಅಕ್ಟೋಬರ್ 7 ರಿಂದ ಬ್ಯಾಂಕ್ನಲ್ಲಿ 2000 ರೂಪಾಯಿ ನೋಟು ಪಡೆಯುವುದನ್ನು ನಿಲ್ಲಿಸಲಾಗಿದೆ. ಅಕ್ಟೋಬರ್ 8 ರಿಂದ ಜನರು 19 ಆರ್ಬಿಐ ಕಚೇರಿಗಳಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶವನ್ನು ಆರ್ಬಿಐ ನೀಡಿದೆ. ಒಂದು ಬಾರಿಗೆ 20 ಸಾವಿರ ರೂಪಾಯಿ ಮೌಲ್ಯದ 2 ಸಾವಿರ ರೂಪಾಯಿ ನೋಟುಗಳನ್ನು ಆರ್ಬಿಐ ಕಚೇರಿಗಳಲ್ಲಿ ಬದಲಾವಣೆ ಮಾಡುವ ಅವಕಾಶವಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications