ಕೊರೊನಾವೈರಸ್ನಿಂದಾಗಿ ವಿಶ್ವದೆಲ್ಲೆಡೆ ರಾಷ್ಟ್ರಗಳು ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಸಮಯದಲ್ಲಿ ಭಾರತವೂ ಕೂಡ ಆರ್ಥಿಕ ಬಿಕ್ಕಟ್ಟಿಗೆ ಒಳಗಾಗುತ್ತಿದೆ. ಆರ್ಥಿಕ ಬಿಕ್ಕಟ್ಟನ್ನು ಸುಧಾರಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ (ಮಾರ್ಚ್ 24) ವಿಶೇಷ ಪ್ಯಾಕೇಜ್ ಅನ್ನು ಘೋಷಿಸಿದರು.
ಐಟಿ ರಿಟರ್ನ್ಸ್ ಗಡುವು ವಿಸ್ತರಣೆ, ವಿಳಂಭ ಪಾವತಿ ಮೇಲಿನ ಬಡ್ಡಿ ದರ ಇಳಿಕೆ, ಜಿಎಸ್ಟಿ ಗಡುವು ವಿಸ್ತರಣೆ, ಹಾಗೂ ಆಧಾರ್ ಪ್ಯಾನ್ ಕಾರ್ಡ್ ಲಿಂಕ್ ಗಡುವನ್ನು ಮುಂದೂಡಲಾಗಿದೆ.
ಐಟಿ ರಿಟರ್ನ್ಸ್ ಮೇಲಿನ ಗಡುವು ವಿಸ್ತರಿಸಿದ ಕೇಂದ್ರ
2018-19ನೇ ಸಾಲಿನ ಐಟಿ ರಿಟರ್ನ್ಸ್ ಸಲ್ಲಿಕೆಗೆ ಮಾರ್ಚ್ 31 ಅಂತಿಮ ಡೆಡ್ಲೈನ್ ಆಗಿತ್ತು. ಆದರೆ ಈ ದಿನಾಂಕವನ್ನು ವಿಸ್ತರಿಸಲಾಗಿದ್ದು ಜೂನ್ 30 ರ ತನಕ ವಿಸ್ತರಣೆ ಮಾಡಲಾಗಿದೆ.
ಈ ಮೂಲಕ ಆದಾಯ ತೆರಿಗೆ ಪಾವತಿ ಮಾಡದೇ ಇರುವವರಿಗೆ ಕೊಂಚ ರಿಲೀಫ್ ಸಿಕ್ಕಿದೆ.
ವಿಳಂಬದ ಮೇಲೆ ಪಾವತಿಸುವ ಬಡ್ಡಿ ದರ ಇಳಿಕೆ
ಇನ್ನು ಐಟಿ ರಿಟರ್ನ್ಸ್ ವಿಳಂಬದ ಮೇಲೆ ಪಾವತಿಸಬೇಕಿರುವ ಬಡ್ಡಿ ದರವನ್ನೂ ಕೂಡ ಇಳಿಕೆ ಮಾಡಲಾಗಿದೆ. ಬಡ್ಡಿ ದರವನ್ನು ಈಗಿನ 12 ರಿಂದ 8 ಪರ್ಸೆಂಟ್ ತಗ್ಗಿಸಲಾಗಿದೆ.
ಜೊತೆಗೆ ಪಾವತಿ ವಿಳಂಭವಾದಲ್ಲಿ 9 ಪರ್ಸೆಂಟ್ ಬಡ್ಡಿ ಕಟ್ಟಬೇಕಿತ್ತು. ಆದರೆ ಆ ಶುಲ್ಕವನ್ನು ಕಟ್ಟಬೇಕಿಲ್ಲ. ಹೀಗಾಗಿ ಜೂನ್ 30ರವರೆಗೆ ಹೆಚ್ಚುವರಿ ಶುಲ್ಕ ಪಾವತಿಯಿಲ್ಲ.
ಆಧಾರ್ ಕಾರ್ಡ್ -ಪ್ಯಾನ್ ಕಾರ್ಡ್ ಲಿಂಕ್ ಗಡುವು ವಿಸ್ತರಣೆ
ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್ ಗೆ ಲಿಂಕ್ ಮಾಡಲು ಇದೇ ತಿಂಗಳು ಅಂದರೆ ಮಾರ್ಚ್ 31 ಕೊನೆ ದಿನಾಂಕವಾಗಿತ್ತು. ಆದರೆ ಈ ಗಡುವನ್ನು ಸಹ ಸಾರ್ವಜನಿಕರ ಅನುಕೂಲಕ್ಕಾಗಿ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 31ರಿಂದ- ಜೂನ್ 30, 2020ಕ್ಕೆ ಗಡುವನ್ನು ವಿಸ್ತರಿಸಲಾಗಿದೆ
ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆಯ ಅವಧಿಯು ವಿಸ್ತರಣೆ
ಮಾರ್ಚ್ ಏಪ್ರಿಲ್ ಹಾಗೂ ಮೇ ತಿಂಗಳ ಜಿಎಸ್ಟಿ ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆಯ ಅವಧಿಯನ್ನು ಕೂಡ ಜೂನ್ 30ಕ್ಕೆ ವಿಸ್ತರಣೆ ಮಾಡಲಾಗಿದೆ. ಹಾಗೂ ಮಾರ್ಚ್, ಏಪ್ರಿಲ್, ಮೇ GST ಪಾವತಿ ಅವಧಿ ಜಿಎಸ್ಟಿ ಪಾವತಿ ವಿಳಂಬಕ್ಕೆ ಯಾವುದೇ ದಂಡ ಪಾವತಿ ಮಾಡಬೇಕಿಲ್ಲ.
5 ಕೋಟಿ ಒಳಗಿನ ಕಂಪನಿಗಳಿಗೆ ಜಿಎಸ್ಟಿಗೆ ದಂಡ ಇಲ್ಲ
ಐದು ಕೋಟ ರುಪಾಯಿ ಒಳಗೆ ವಹಿವಾಟು ನಡೆಸುವ ಕಂಪನಿಗಳು ವಿಳಂಭವಾಗಿ ಜಿಎಸ್ಟಿ ಪಾವತಿಸಿದ್ದಲ್ಲಿ ವಿಳಂಭ ಪಾವತಿ ಶುಲ್ಕ ಕಟ್ಟಬೇಕಿಲ್ಲ. ಬೃಹತ್ ಕಂಪನಿಗಳಿಗೂ ಯಾವುದೇ ವಿಳಂಭ ಪಾವತಿ ಶುಲ್ಕ ಕಟ್ಟುವಂತಿಲ್ಲ ಆದ್ರೆ ಶೇಕಡಾ 9 ರಷ್ಟು ಕಡಿಮೆ ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ.
ಆಮದು/ರಫ್ತುದಾರರಿಗೆ ಅನುಕೂಲ
ಕಸ್ಟಮ್ಸ್ ಇಲಾಖೆ ತನ್ನ ಕರ್ತವ್ಯ ಪಾಲನೆಯಲ್ಲಿದೆ. ಜೂನ್ 30, 2020 ರವರೆಗೆ ಈ ವಿಭಾಗವು 24x7 ಅತ್ಯಗತ್ಯ ಸೇವೆಯಾಗಿ ಮುಂದುವರಿಯಲಿದೆ.
ಸಂಪತ್ತು ತೆರಿಗೆ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಬೆನಾಮಿ ವಹಿವಾಟು ಕಾಯ್ದೆ, ಕಪ್ಪು ಹಣ ಕಾಯ್ದೆ ಅಡಿಯಲ್ಲಿರುವ ಎಲ್ಲಾ ಅನುಸರಣೆಗಳನ್ನು 2020 ರ ಜೂನ್ 30ರವರೆಗೆ ವಿಸ್ತರಿಸಲಾಗಿದೆ.
ಸಣ್ಣ ಉದ್ಯಮಗಳಿಗೆ ಪರಿಹಾರ
ಸಣ್ಣ ಉದ್ಯಮಗಳಿಗೆ ಪರಿಹಾರವಾಗಿ, ದಿವಾಳಿತನ ಪ್ರಕ್ರಿಯೆಗಳ ಮಿತಿಯನ್ನು ಅಸ್ತಿತ್ವದಲ್ಲಿರುವ 1 ಲಕ್ಷ ರುಪಾಯಿಯಿಂದ 1 ಕೋಟಿ ರುಪಾಯಿಗೆ ವಿಸ್ತರಿಸಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications