ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸುವ ಕೊನೆಯ ದಿನಾಂಕವು ಸಮೀಪದಲ್ಲಿದೆ. ಹಣಕಾಸು ವರ್ಷ 2021-22 ಅಥವಾ ಮೌಲ್ಯಮಾಪನ ವರ್ಷ 2022-23ರ ಐಟಿಆರ್ ಅನ್ನು ಸಲ್ಲಿಕೆ ಮಾಡುವ ಕೊನೆಯ ದಿನಾಂಕವು ಜುಲೈ 31, 2022 ಆಗಿದೆ.
ವಿವಿಧ ರೀತಿಯ ತೆರಿಗೆದಾರರಿಗೆ ವಿಭಿನ್ನ ಐಟಿಆರ್ ದಿನಾಂಕಗಳು ಅಥವಾ ಗಡುವುಗಳು ಇರುತ್ತದೆ. ಸಂಬಳ ಪಡೆಯುವವರಿಗೆ ಐಟಿಆರ್ ಸಲ್ಲಿಕೆ ಮಾಡಲು ಕೊನೆಯ ದಿನಾಂಕವು ಹತ್ತಿರದಲ್ಲಿದೆ. ಖಾತೆಗಳನ್ನು ಲೆಕ್ಕಪರಿಶೋಧನೆ ಮಾಡುವ ಅಗತ್ಯವಿಲ್ಲದ ವ್ಯಕ್ತಿಗಳು ಮತ್ತು ಸಂಬಳ ಪಡೆಯುವ ಉದ್ಯೋಗಿಗಳು ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಮಾಡುವ ಕೊನೆಯ ದಿನಾಂಕ ಜುಲೈ 31 ಆಗಿದೆ.
ಆದಾಯ ತೆರಿಗೆ ನಿಯಮಗಳ ಪ್ರಕಾರ, ಹಿಂದೂ ಅವಿಭಜಿತ ಕುಟುಂಬಗಳಿಗೆ (HUF) ಐಟಿಆರ್ ಅನ್ನು ಸಲ್ಲಿಕೆ ಮಾಡುವ ಕೊನೆಯ ದಿನಾಂಕವೂ ಕೂಡಾ ಇದೇ ಜುಲೈ 31 ಆಗಿದೆ. ಹಾಗಾದರೆ ಈ ಬಗ್ಗೆ ಅಧಿಕ ಮಾಹಿತಿ ಇಲ್ಲಿದೆ ಮುಂದೆ ಓದಿ...
ಐಟಿಆರ್ ಸಲ್ಲಿಕೆ
ತಮ್ಮ ಖಾತೆಗಳನ್ನು ಲೆಕ್ಕಪರಿಶೋಧನೆ ಮಾಡಬೇಕಾದ ತೆರಿಗೆದಾರರು ಅಕ್ಟೋಬರ್ 31, 2022ರ ಒಳಗೆ ತಮ್ಮ ಐಟಿಆರ್ ಅನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಈ ತೆರಿಗೆದಾರರು ಕಂಪನಿ, ಸಂಸ್ಥೆಯ ಕೆಲಸದ ಪಾಲುದಾರ ಅಥವಾ ಮಾಲೀಕತ್ವವನ್ನು ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಅವರ ಖಾತೆಯನ್ನು ಆಡಿಟ್ ಮಾಡಬೇಕಾಗುತ್ತದೆ.
ನಿಗದಿತ ದಿನಾಂಕದ ನಂತರ ದಂಡ
ತೆರಿಗೆದಾರರು ಜುಲೈ 31, 2022 ರ ನಂತರ ಐಟಿಆರ್ ಅನ್ನು ಸಲ್ಲಿಕೆ ಮಾಡಿದರೆ ಐದು ಸಾವಿರ ರೂಪಾಯಿಗಳ ವಿಳಂಬ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಒಂದು ಹಣಕಾಸು ವರ್ಷದಲ್ಲಿ ವ್ಯಕ್ತಿಯ ಒಟ್ಟು ಆದಾಯವು 5 ಲಕ್ಷ ರೂ.ಗಿಂತ ಕಡಿಮೆಯಿದ್ದರೆ, ಒಂದು ಸಾವಿರ ರೂಪಾಯಿ ದಂಡವನ್ನು ಪಾವತಿ ಮಾಡಬೇಕಾಗುತ್ತದೆ.
ಸೆಕ್ಷನ್ 92E
ಯಾವುದೇ ತೆರಿಗೆದಾರರು, ಅಂತರಾಷ್ಟ್ರೀಯ ವಹಿವಾಟಿನಲ್ಲಿ ತೊಡಗಿದ್ದರೆ, ಅವರು ಸೆಕ್ಷನ್ 92E ಅಡಿಯಲ್ಲಿ ರಿಪೋರ್ಟ್ ಅನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಅಂತಹ ತೆರಿಗೆದಾರರಿಗೆ ಐಟಿಆರ್ ಗಡುವು ನವೆಂಬರ್ 30, 2022 ಆಗಿದೆ.
ಎಲ್ಲಿ ಐಟಿಆರ್ ಸಲ್ಲಿಕೆ ಮಾಡುವುದು?
ತೆರಿಗೆದಾರರು ತಮ್ಮ ಐಟಿಆರ್ ಅನ್ನು ಹಣಕಾಸು ವರ್ಷ 2022-2023 ಕ್ಕೆ ಆದಾಯ ತೆರಿಗೆ ವೆಬ್ಸೈಟ್ನಲ್ಲಿ (https://incometaxindia.gov.in) ಸಲ್ಲಿಸಬಹುದು. ಆದಾಯ ತೆರಿಗೆ ಇಲಾಖೆಯು ಆದಾಯ ತೆರಿಗೆ ರಿಟರ್ನ್ಗಳನ್ನು ಸಲ್ಲಿಸಲು ಹೊಸ ಫಾರ್ಮ್ ಅನ್ನು ಪ್ರಕಟಿಸಿದೆ. ಅಪ್ಡೇಟೆಡ್ ಐಟಿಆರ್ ಫಾರ್ಮ್ನಲ್ಲಿ ತೆರಿಗೆದಾರರು ಸಲ್ಲಿಸುವ ಉದ್ದೇಶವನ್ನು ಮತ್ತು ತೆರಿಗೆ ವಿಧಿಸಬೇಕಾದ ಆದಾಯದ ಮೊತ್ತವನ್ನು ಘೋಷಿಸಬೇಕಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications