Bank Holiday On Janmashtami: ಜನ್ಮಾಷ್ಟಮಿ ಪ್ರಯುಕ್ತ ಸೆ.6, 7ರಂದು ಬ್ಯಾಂಕ್ ಬಂದ್, ನಗರವಾರು ಪಟ್ಟಿ ಇಲ್ಲಿದೆ

ಭಗವಾನ್ ಶ್ರೀಕೃಷ್ಟನ ಜನ್ಮದಿನವನ್ನು ನೆನೆದು ಪ್ರತಿ ವರ್ಷ ಜನ್ಮಾಷ್ಟಮಿ ಹಬ್ಬವನ್ನು ಆಚರಿಸಲಾಗುತ್ತದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ರಜಾ ಕ್ಯಾಲೆಂಡರ್ ಪ್ರಕಾರ, ಸೆಪ್ಟೆಂಬರ್ 6 ಮತ್ತು 7 ರಂದು ಭಾರತದಾದ್ಯಂತ ವಿವಿಧ ರಾಜ್ಯಗಳಲ್ಲಿ ಬ್ಯಾಂಕುಗಳು ಬಂದ್ ಆಗಿರುತ್ತದೆ.

ಶ್ರೀಕೃಷ್ಣನ ಜನ್ಮದಿನವನ್ನು ಆಚರಿಸುವ ಜನ್ಮಾಷ್ಟಮಿಯು ಪ್ರಮುಖ ಹಿಂದೂ ಹಬ್ಬವಾಗಿದೆ. ಆದ್ದರಿಂದ, ಭಾರತದ ಅನೇಕ ಪ್ರದೇಶಗಳಲ್ಲಿ ರಜೆ ಇರುತ್ತದೆ. ಈ ಹಬ್ಬವನ್ನು ಗೋಕುಲಾಷ್ಟಮಿ ಅಥವಾ ಶ್ರೀಕೃಷ್ಣ ಜಯಂತಿ ಎಂದೂ ಕರೆಯುತ್ತಾರೆ. ಇದನ್ನು ಸಾಮಾನ್ಯವಾಗಿ ಭಾದ್ರಪದ ಮಾಸದಲ್ಲಿ ಕೃಷ್ಣ ಪಕ್ಷದ ಎಂಟನೇ ದಿನ ಆಚರಿಸಲಾಗುತ್ತದೆ. ಜನ್ಮಾಷ್ಟಮಿ ದಿನ ಯಾವೆಲ್ಲ ಪ್ರದೇಶದಲ್ಲಿ ಬ್ಯಾಂಕ್ ರಜೆ ಇದೆ ಎಂದು ತಿಳಿಯೋಣ ಮುಂದೆ ಓದಿ...

 ಜನ್ಮಾಷ್ಟಮಿ: ಸೆ.6, 7ರಂದು ಬ್ಯಾಂಕ್ ಬಂದ್, ನಗರವಾರು ಪಟ್ಟಿ ಇಲ್ಲಿದೆ

ಜನ್ಮಾಷ್ಟಮಿ: ಸೆಪ್ಟೆಂಬರ್ 6ರಂದು ಎಲ್ಲಿ ಬ್ಯಾಂಕ್ ಬಂದ್?

* ಒಡಿಶಾ
* ತಮಿಳುನಾಡು
* ಆಂಧ್ರಪ್ರದೇಶ
* ಬಿಹಾರ

ಜನ್ಮಾಷ್ಟಮಿ: ಸೆಪ್ಟೆಂಬರ್ 7ರಂದು ಎಲ್ಲಿ ಬ್ಯಾಂಕ್ ಬಂದ್?

* ಗುಜರಾತ್
* ಮಧ್ಯಪ್ರದೇಶ
* ಚಂಡೀಗಢ
* ರಾಜಸ್ಥಾನ
* ಸಿಕ್ಕಿಂ
* ಜಮ್ಮು
* ಬಿಹಾರ
* ಛತ್ತೀಸ್‌ಗಢ
* ಜಾರ್ಖಂಡ್
* ಹಿಮಾಚಲ ಪ್ರದೇಶ
* ಮೇಘಾಲಯ
* ಶ್ರೀನಗರ

ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜಾಪಟ್ಟಿ

ಸೆಪ್ಟೆಂಬರ್ 3: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 6: ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಭುವನೇಶ್ವರ, ಚೆನ್ನೈ, ಹೈದರಾಬಾದ್ ಮತ್ತು ಪಾಟ್ನಾದಲ್ಲಿ ಬ್ಯಾಂಕ್‌ಗಳು ಮುಚ್ಚಲಾಗುತ್ತದೆ.
ಸೆಪ್ಟೆಂಬರ್ 7: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರಣದಿಂದಾಗಿ ಅಹಮದಾಬಾದ್, ಚಂಡೀಗಢ, ಡೆಹ್ರಾಡೂನ್, ಗ್ಯಾಂಗ್ಟಾಕ್, ತೆಲಂಗಾಣ, ಜೈಪುರ, ಜಮ್ಮು, ಕಾನ್ಪುರ, ಲಕ್ನೋ, ರಾಯ್‌ಪುರ, ರಾಂಚಿ, ಶಿಲ್ಲಾಂಗ್, ಶಿಮ್ಲಾ ಮತ್ತು ಶ್ರೀನಗರದಂತಹ ನಗರಗಳಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 9: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 10: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 17: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 18: ಗಣೇಶ ಚತುರ್ಥಿ ದಿನ ತೆಲಂಗಾಣದಲ್ಲಿ ಬ್ಯಾಂಕ್‌ಗಳು ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 19: ಗಣೇಶ ಚತುರ್ಥಿ ಕಾರಣ ಅಹಮದಾಬಾದ್, ಬೇಲಾಪುರ, ಭುವನೇಶ್ವರ, ಮುಂಬೈ, ನಾಗ್ಪುರ ಬೆಂಗಳೂರು ಮತ್ತು ಪಣಜಿಯಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 20: ಗಣೇಶ ಚತುರ್ಥಿ ಮತ್ತು ನುವಾಖಾಯ್‌ ಕಾರಣ ಕೊಚ್ಚಿ ಮತ್ತು ಭುವನೇಶ್ವರದಲ್ಲಿ ಬ್ಯಾಂಕ್ ಬಂದ್ ಆಗುತ್ತದೆ.
ಸೆಪ್ಟೆಂಬರ್ 22: ಶ್ರೀ ನಾರಾಯಣ ಗುರು ಸಮಾಧಿ ದಿನವು ಕೊಚ್ಚಿ, ಪಣಜಿ ಮತ್ತು ತಿರುವನಂತಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.
ಸೆಪ್ಟೆಂಬರ್ 23: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 24: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 25: ಶ್ರೀಮಂತ ಶಂಕರದೇವ ಜನ್ಮ ವಾರ್ಷಿಕೋತ್ಸವಕ್ಕಾಗಿ ಗುವಾಹಟಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.
ಸೆಪ್ಟೆಂಬರ್ 27: ಮಿಲಾದ್-ಎ-ಷರೀಫ್ ದಿನ ಜಮ್ಮು, ಕೊಚ್ಚಿ, ಶ್ರೀನಗರ ಮತ್ತು ತಿರುವನಂತಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.
ಸೆಪ್ಟೆಂಬರ್ 28: ಈದ್-ಎ-ಮಿಲಾದ್ ಕಾರಣ ಅಹಮದಾಬಾದ್, ಬೆಂಗಳೂರು, ಚೆನ್ನೈ, ಕಾನ್ಪುರ, ಲಕ್ನೋ, ಮುಂಬೈ ಮತ್ತು ನವದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 29: ಗ್ಯಾಂಗ್ಟಾಕ್, ಜಮ್ಮು ಮತ್ತು ಶ್ರೀನಗರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ದಿನ ಬ್ಯಾಂಕ್ ರಜೆ ಇರುತ್ತದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+