ವಿದ್ಯಾರ್ಥಿಗಳಿಗೆ ಜೀವನದಲ್ಲಿ ವಿದ್ಯಾರ್ಥಿ ವೇತನ ಅತೀ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಪ್ರತಿ ವರ್ಷ ಬರುವ ಒಂದು ವಿದ್ಯಾರ್ಥಿ ವೇತನದಿಂದಲೇ ವರ್ಷವಿಡೀ ತಮ್ಮ ಸಣ್ಣ ಪುಟ್ಟ ಖರ್ಚುಗಳನ್ನು ನಿರ್ವಹಣೆ ಮಾಡುವ ಅದೆಷ್ಟೋ ವಿದ್ಯಾರ್ಥಿಗಳು ಇದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಈಗ ವಿದ್ಯಾರ್ಥಿ ವೇತನ ಪಡೆಯಲು ಮೂರು ದಿನಗಳ ಅವಕಾಶ ಮಾತ್ರ ಉಳಿದಿದೆ.
ಶ್ರೀ ಜೆ. ಪಿ. ನಾರಾಯಣಸ್ವಾಮಿ ಪ್ರತಿಷ್ಠಾನ (ರಿ.), ಬೆಂಗಳೂರು, 2023-2024 ಸಾಲಿನ ವಿದ್ಯಾರ್ಥಿ ವೇತನಕ್ಕೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿದ್ಯಾರ್ಥಿ ವೇತನಕ್ಕೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ, ಇನ್ನು ಮೂರೇ ದಿನಗಳು ಬಾಕಿಯಾಗಿದೆ. ಅಂದರೆ ಡಿಸೆಂಬರ್ 15 ಕ್ಕೆ ಕೊನೆಯ ದಿನವಾಗಿದೆ. ಇಲ್ಲಿದೆ ವಿವರ ಮುಂದೆ ಓದಿ....

ಯಾರಿಗೆ ವಿದ್ಯಾರ್ಥಿ ವೇತನ ಲಭ್ಯ?
2023-2024ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸಾಮಾನ್ಯ ಮಾಹಿತಿಯನ್ನು ಸಹ ಪ್ರಕಟಣೆಯಲ್ಲಿ ನೀಡಲಾಗಿದೆ. ಹಿಂದಿನ ವರ್ಷದ (2022-23) ವ್ಯಾಸಂಗದಲ್ಲಿ ಶೇಕಡ ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಇನ್ನು ಶಿವಮೊಗ್ಗ, ಉತ್ತರ-ಕನ್ನಡ, ದಕ್ಷಿಣ-ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಶೇಕಡ 75ಕ್ಕಿಂತ ಹೆಚ್ಚಿನ ಅಂಕ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಅರ್ಹತೆ ತಿಳಿಯಿರಿ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಹಾಗೆಯೇ ಅವರ ಕುಟುಂಬವು ಬಿಪಿಎಲ್ ಕಾರ್ಡ್ ಅನ್ನು ಹೊಂದಿರಬೇಕು. ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ನಲ್ಲಿರುವ ವಿಳಾಸದ ಜಿಲ್ಲೆಯಿಂದ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಕಾಲೇಜುಗಳಲ್ಲಿ ನಿಯಮಿತವಾಗಿ ಓದುತ್ತಿರುವ ಮತ್ತು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಇರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆರ್ಥಿಕವಾಗಿ ದುರ್ಬಲ ವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ತಾಲ್ಲೂಕು ಸಮಿತಿಗೆ ಸಲ್ಲಿಸಿ
ವೆಬ್ ಸೈಟ್ (jpnp.org.in) ಮೂಲಕ ಆನ್ಲೈನ್ ಅರ್ಜಿ ಭರ್ತಿ ಮಾಡಲು ಕೊನೆಯ ದಿನಾಂಕ 15/12/2023 ಆಗಿದೆ. ಆನ್ಲೈನ್ ಅರ್ಜಿ ಸಲ್ಲಿಸಿದ ನಂತರ ನಿಮ್ಮ ಇ-ಮೇಲ್ ಐಡಿಗೆ ಬರುವ ಸ್ವೀಕೃತಿ ಪತ್ರ (acknowledgement letter) ದೊಂದಿಗೆ ಅರ್ಜಿಗಳಲ್ಲಿ ಕೇಳಿರುವ ಎಲ್ಲಾ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ನಿಮ್ಮ ತಾಲ್ಲೂಕಿಗೆ ಸಂಭಂದಪಟ್ಟ ತಾಲ್ಲೂಕು ಸಮಿತಿಗೆ ದಿನಾಂಕ 20/12/2023 ಒಳಗೆ ಸಲ್ಲಿಸಬೇಕು.
ತಾಲ್ಲೂಕು ಸಮಿತಿಯು ಸ್ವೀಕರಿಸಿದ ಅರ್ಜಿ ಮತ್ತು ಮೂಲ ದಾಖಲೆಗಳನ್ನು ಪರಿಶೀಲಿಸಿದ ನಂತರ ತಾಲ್ಲೂಕು ಮುಖ್ಯ ಸಂಚಾಲಕರ ಸಹಿ ಮತ್ತು ಮೊಹರು ಹಾಕಿ ಮುಂದಿನ ಕ್ರಮಕ್ಕಾಗಿ ಜಿಲ್ಲಾ ಸಂಚಾಲಕರ ಸಮಿತಿಗೆ ದಿನಾಂಕ 25/12/2023 ಒಳಗೆ ತಲುಪಿಸಬೇಕು.
ಜಿಲ್ಲಾ ಸಂಚಾಲಕ ಸಮಿತಿಯು ಎಲ್ಲಾ ತಾಲ್ಲೂಕುಗಳಿಂದ ಸ್ವೀಕರಿಸಿದಂತಹ ಅರ್ಜಿಗಳನ್ನು ಮತ್ತೊಮ್ಮೆ ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಜಿಲ್ಲಾ ಮುಖ್ಯ ಸಂಚಾಲಕರ ಸಹಿ ಮತ್ತು ಮೊಹರುವಿನೊಂದಿಗೆ ಜೆ.ಪಿ.ಎನ್.ಪಿ ಬೆಂಗಳೂರು, ಕೇಂದ್ರ ಕಛೇರಿಗೆ ದಿನಾಂಕ 31/12/2023 ಒಳಗೆ ತಲುಪಿಸಬೇಕು.
ಎಲ್ಲಿ ಮಾಹಿತಿ ಲಭ್ಯ?
ತಾಲ್ಲೂಕು ಮತ್ತು ಜಿಲ್ಲಾ ಸಂಚಾಲಕ ಸಮಿತಿಯ ವಿವರಗಳನ್ನು jpnp.org.in ನೀಡಲಾಗಿದೆ. ಅದರಲ್ಲಿ ಇರುವ ತಾಲ್ಲೂಕು/ ಜಿಲ್ಲಾ ಮುಖ್ಯ ಸಂಚಾಲಕರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಅವರ ನಿರ್ದೇಶನದಂತೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಥಿ ವೇತನ ಅರ್ಜಿಗಳನ್ನು ಟ್ರಸ್ಟಿಗಳೇ ಪರಿಶೀಲಿಸುತ್ತಾರೆ.
ಅರ್ಜಿದಾರರಿಗೆ ಯಾವುದೇ ವಿವರಣೆಯನ್ನು ನೀಡದೆಯೇ ಅರ್ಜಿಯನ್ನು ಸ್ವೀಕರಿಸುವ/ ತಿರಸ್ಕರಿಸುವ ಅಧಿಕಾರವನ್ನು ಟ್ರಸ್ಟಿನ ಕಾರ್ಯಕಾರಿ ಮಂಡಳಿಯು ಹೊಂದಿರುತ್ತದೆ. ನಮ್ಮ ಜನಾಂಗದ ಇತರೆ ಸಂಸ್ಥೆಗಳಿಂದ ವಿದ್ಯಾರ್ಥಿ ವೇತನವನ್ನು ಪಡೆದಿದ್ದರೆ ಅಂತಹ ವಿದ್ಯಾರ್ಥಿಗಳ ಹೆಸರುಗಳನ್ನು ಪರಿಗಣಿಸುವುದಿಲ್ಲ.
ಯಾವಾಗ ಅರ್ಜಿ ತಿರಸ್ಕಾರ?
ವಿದ್ಯಾರ್ಥಿಗಳು ಆನ್ ಲೈನ್ ಅರ್ಜಿಯಲ್ಲಿ ಭರ್ತಿಮಾಡಿದಂತಹ ವಿವರ ಮತ್ತು ಮೂಲ ದಾಖಲೆಯಲ್ಲಿ ಇರುವ ವಿವರದಲ್ಲಿ ಯಾವುದೇ ವ್ಯತ್ಯಾಸವಿದ್ದರೂ ಕೂಡಾ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ.
ಯಾವೆಲ್ಲ ದಾಖಲೆಗಳು ಬೇಕು?
ವಿಳಾಸದ ಪುರಾವೆ, ವಿದ್ಯಾಸಂಸ್ಥೆಯು ನೀಡಿದ ಗುರುತಿನ ಚೀಟಿ, ವಿದ್ಯಾರ್ಥಿಯ ಬ್ಯಾಂಕ್ ವಿವರ, ಆಧಾರ್ ಕಾರ್ಡ್, ಕುಟುಂಬದ ಬಿಪಿಎಲ್ ಕಾರ್ಡ್ ಅತೀ ಮುಖ್ಯವಾದ ದಾಖಲೆಗಳಾಗಿದೆ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications