ಮಂಗಳೂರು ಮೂಲದ 'ಎ' ವರ್ಗದ ವಾಣಿಜ್ಯ ಬ್ಯಾಂಕ್ ಆದ ಕರ್ಣಾಟಕ ಬ್ಯಾಂಕ್ ಹೊಸ ಮೂರು ವೇತನ ಯೋಜನೆಗಳನ್ನು ಆರಂಭ ಮಾಡಿದೆ. ಬ್ಯಾಂಕ್ ಹೊಸ ಕಾರ್ಪೊರೇಟ್ ವೇತನ ಖಾತೆ ಯೋಜನೆಗಳನ್ನು ಪ್ರಾರಂಭಿಸಿದೆ. ಈ ಮೂರು ಹೊಸ ಯೋಜನೆಗಳ ಬಗ್ಗೆ ವಿವರ ನೀಡಿದ್ದೇವೆ.
ಕಾರ್ಪೊರೇಟ್ ಸಂಬಳ ವರ್ಗದ ಅಡಿಯಲ್ಲಿ ಬ್ಯಾಂಕ್ ಮೂರು ರೀತಿಯ ಉಳಿತಾಯ ಖಾತೆಗಳನ್ನು ಆರಂಭ ಮಾಡುವ ಬಗ್ಗೆ ಘೋಷಣೆ ಮಾಡಿದೆ. ಅವುಗಳೆಂದರೆ ಕೆಬಿಎಲ್ ಸಾಲ್ ಅಲ್ಟಿಮೇಟ್, ಕೆಬಿಎಲ್ ಸಾಲ್ ಡಿಲೈಟ್ ಮತ್ತು ಕೆಬಿಎಲ್ ಸಾಲ್ ಪ್ರೈಡ್ ಆಗಿದೆ.

ಕಾರ್ಪೊರೇಟ್ ವರ್ಗದ ಅಡಿಯಲ್ಲಿ ಸಂಬಳ ಪಡೆಯುವ ಉದ್ಯೋಗಿಗಳ ಆರ್ಥಿಕ ಅಗತ್ಯಗಳು ಮತ್ತು ಆಕಾಂಕ್ಷೆಗಳನ್ನು ಪೂರೈಕೆ ಮಾಡುವಂತಹ ಯೋಜನೆಯನ್ನು ಕರ್ನಾಟಕ ಬ್ಯಾಂಕ್ ಆರಂಭ ಮಾಡಿದೆ. ಯೋಜನೆ ಬಗ್ಗೆ ಎಂಡಿ, ಸಿಇಒ ಶ್ರೀಕೃಷ್ಟಣ್ ಮಾಹಿತಿ ನೀಡಿದ್ದಾರೆ.
"ಇದು 'ಭವಿಷ್ಯದ ಬ್ಯಾಂಕ್' ಆಗುವ ನಮ್ಮ ದೃಷ್ಟಿಗೆ ಅನುಗುಣವಾಗಿ ಆರ್ಥಿಕ ಮತ್ತು ಜೀವನಶೈಲಿಯ ಅಗತ್ಯಗಳಿಗೆ ಸಂಬಂಧಿಸಿದ ಉತ್ತಮ ಯೋಜನೆಯಾಗಿದೆ. ಬಳಕೆದಾರ ಸ್ನೇಹಿ ಡಿಜಿಟಲ್ ಪ್ರಕ್ರಿಯೆಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು," ಎಂದು ಕರ್ನಾಟಕ ಬ್ಯಾಂಕ್ನ ಶ್ರೀಕೃಷ್ಟಣ್ ಹೇಳಿದ್ದಾರೆ.
"ಈ ಹೊಸ ಯೋಜನೆಯು ವೇತನ ಪಡೆಯುವ ವರ್ಗಕ್ಕಾಗಿ ಪ್ರಯೋಜನಗಳು ಮತ್ತು ಹಲವಾರು ಫೀಚರ್ಗಳನ್ನು ನೀಡುತ್ತದೆ. ಅದು ಸಂಬಳ ಪಡೆಯುವ ಗ್ರಾಹಕರಿಗೆ ತಮ್ಮ ಹಣಕಾಸುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಅವರ ಹಣಕಾಸಿನ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆ," ಎಂದು ತಿಳಿಸಿದರು.
ನಿಯಂತ್ರಕ ಫೈಲಿಂಗ್ ಪ್ರಕಾರ, ಕೆಬಿಎಲ್ ಕಾರ್ಪೊರೇಟ್ ಸಂಬಳ ಯೋಜನೆಗಳೊಂದಿಗೆ, ಖಾತೆದಾರರು 50 ಲಕ್ಷ ರೂಪಾಯಿಗಳ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯುತ್ತಾರೆ. ಪ್ರೀಮಿಯಂ ಡೆಬಿಟ್ ಕಾರ್ಡ್ ಗ್ರಾಹಕರಿಗೆ, ಅಂತರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣದ ಲಾಂಜ್ಗಳಿಗೆ ಪ್ರವೇಶವನ್ನು ಪಡೆಯಬಹುದು.
ಇದಲ್ಲದೆ, ಸಂಬಳ ಪಡೆಯುವ ವೃತ್ತಿಪರರಿಗೆ ಬ್ಯಾಂಕ್ನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆಗಳು ಗೃಹ, ವೈಯಕ್ತಿಕ ಮತ್ತು ವಾಹನ ಸಾಲಗಳ ಮೇಲಿನ ಶುಲ್ಕದಲ್ಲಿ ರಿಯಾಯಿತಿ ನೀಡುತ್ತದೆ. 60,000 ರೂಪಾಯಿವರೆಗೆ ಆಸ್ಪತ್ರೆ ನಗದು ಪ್ರಯೋಜನಗಳು ನೀಡುತ್ತದೆ. 2 ಲಕ್ಷ ರೂಪಾಯಿವರೆ ಆಭರಣ ವಿಮೆಯಂತಹ ಫೀಚರ್ ಅನ್ನು ಸಹ ಒಳಗೊಂಡಿದೆ.
ಬುಧವಾರ ವಹಿವಾಟಿನ ಅಂತ್ಯದಲ್ಲಿ ಕರ್ನಾಟಕ ಬ್ಯಾಂಕ್ ಷೇರುಗಳು ಸುಮಾರು ಶೇಕಡ 2.01 ರಷ್ಟು ಇಳಿಕೆಯಾಗಿದ್ದು, 244.20 ರೂಪಾಯಿಗೆ ತಲುಪಿದೆ. ಇನ್ನು ಇಂದು ಈ ಸಮಯಕ್ಕೆ ಸ್ಟಾಕ್ ಸುಮಾರು ಶೇಕಡ 0.041 ರಷ್ಟು ಏರಿಕೆಯಾಗಿ, 244.40 ರೂಪಾಯಿ ಆಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications