ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. 2024ರ ಲೋಕ ಸಭೆಗೂ ಮುನ್ನ ಬರುವ ಬಜೆಟ್ ಇದಾಗಿದೆ. ಅಂದರೆ ಕೇಂದ್ರ ಸರ್ಕಾರದ ಈ ಆಡಳಿತಾವಧಿಯ ಕೊನೆಯ ಬಜೆಟ್ ಇದಾಗಿದೆ. ಅದರಿಂದಾಗಿ ಸಾಮಾನ್ಯವಾಗಿಯೇ ಬಜೆಟ್ ಮೇಲಿನ ನಿರೀಕ್ಷೆಗಳು ಹೆಚ್ಚಾಗಿದೆ.
ಈಗಾಗಲೇ ಹಲವಾರು ವಲಯಗಳು ಕೇಂದ್ರ ಬಜೆಟ್ ಮೇಲಿನ ನಿರೀಕ್ಷೆಯನ್ನು ತಿಳಿಸಿದ್ದಾರೆ. ಹಾಗೆಯೇ ತಮ್ಮ ಬೇಡಿಕೆಗಳನ್ನು ಕೂಡಾ ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. ಹಾಗೆಯೇ ಬೇರೆ ಬೇರೆ ರಾಜ್ಯಗಳು ಕೂಡಾ ಕೇಂದ್ರ ಬಜೆಟ್ನಿಂದ ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಕರ್ನಾಟಕ ರಾಜ್ಯವು ಕೂಡಾ ಹಲವಾರು ನಿರೀಕ್ಷೆಗಳನ್ನು ಹೊಂದಿದೆ.
ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಕೇಂದ್ರ ಬಜೆಟ್ನಿಂದ ಕರ್ನಾಟಕ ರಾಜ್ಯ ಸರ್ಕಾರದ ನಿರೀಕ್ಷೆಗಳು ಏನಿದೆ ಎಂಬ ಪಟ್ಟಿಯನ್ನು ಕಳುಹಿಸಿದ್ದಾರೆ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗಾದರೆ ಚುನಾವಣೆಗೂ ಮುನ್ನ ಬರುವ ಬಜೆಟ್ ಮೇಲೆ ಕೇಂದ್ರ ಸರ್ಕಾರದ ನಿರೀಕ್ಷೆಗಳೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ...
ಕರ್ನಾಟಕಕ್ಕೆ ಉತ್ತಮ ಕೊಡುಗೆ ಸಾಧ್ಯತೆ
ಏಪ್ರಿಲ್-ಮೇ ತಿಂಗಳಿನಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಉತ್ತಮ ಕೊಡುಗೆಯನ್ನು ನೀಡುವ ಮೂಲಕ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಸಜ್ಜಾಗಿದೆ. ಕೇಂದ್ರ ನಾಯಕತ್ವವು ಚುನಾವಣೆ ನಡೆಯುವ ಬೇರೆ ಬೇರೆ ರಾಜ್ಯಗಳಲ್ಲಿ ಗುಜರಾತ್ ಮಾದರಿಯನ್ನು ಅಳವಡಿಸಲು ಸಜ್ಜಾಗಿದೆ. "ಬೆಳವಣಿಗೆ ಆಧಾರದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯವನ್ನು ಅತೀ ಮುಖ್ಯ ರಾಜ್ಯ ಎಂದು ಪರಿಗಣಿಸಿದೆ. ಅದರಿಂದಾಗಿ ಕರ್ನಾಟಕವು ಡಬಲ್ ಇಂಜಿನ್ ಸರ್ಕಾರದಿಂದ ಪ್ರಯೋಜನವನ್ನು ಪಡೆಯಲಿದೆ," ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಿರೀಕ್ಷೆಗಳು
ವರದಿಗಳ ಪ್ರಕಾರ ಕರ್ನಾಟಕದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಯೋಜನೆಗಳನ್ನು ಜಾರಿಗೊಳಿಸಲು ಮತ್ತು ನಿಧಿಯನ್ನು ಹಂಚಿಕೆ ಮಾಡಲು ಕೇಂದ್ರ ಸರ್ಕಾರವು ಸಿದ್ಧತೆ ನಡೆಸುತ್ತಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನ ಮೇಲೆ ಹೆಚ್ಚಿನ ಆಧ್ಯತೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರು ವಾಣಿಜ್ಯ ಬೆಳವಣಿಗೆಯನ್ನು ಕಾಣುತ್ತಿರುವ ಪ್ರಮುಖ ನಗರವಾದ ಕಾರಣ ಕೇಂದ್ರ ಸರ್ಕಾರವು ಬೆಂಗಳೂರಿಗೆ ಅಧಿಕ ಒತ್ತು ನೀಡಲಿದೆ. ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ತಮಿಳುನಾಡಿಗೆ ಫಿನ್ಟೆಕ್ ಸಿಟಿ ಯೋಜನೆಗಳನ್ನು ಜಾರಿ ಮಾಡಿದಂತೆ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೂ ಯೋಜನೆಗಳನ್ನು ಜಾರಿಗೊಳಿಸುವ ನಿರೀಕ್ಷೆಯಿದೆ. ನೆಲಮಂಗಲ, ಹೊಸಕೋಟೆ, ದೊಡ್ಡ ಬಳ್ಳಾಪುರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅಭಿವೃದ್ಧಿ ಯೋಜನೆ ಜಾರಿ ಮಾಡುವ ನಿರೀಕ್ಷೆಯಿದೆ. ಪ್ರಸ್ತುತ ಹಲವಾರು ನಗರಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ನಗರಗಳಲ್ಲಿ ಪಟ್ಟಿ ಹೆಚ್ಚಿಸುವ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಹೊಂದಿದೆ.
ರಾಜ್ಯ ಸರ್ಕಾರದ ಬಜೆಟ್
ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾದರೆ, ಫೆಬ್ರವರಿ 17ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಚುನಾವಣೆಗೂ ಮುನ್ನ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಚುನಾವಣಾ ತಂತ್ರವಾಗಿ ಬಳಸುವ ಸಾಧ್ಯತೆಯಿದೆ. ಪ್ರಮುಖವಾಗಿ ಕೃಷಿ ಮತ್ತು ನೀರಾವರಿ ವಲಯಕ್ಕೆ ಹೆಚ್ಚಿನ ಆಧ್ಯತೆ ನೀಡುವ ನಿರೀಕ್ಷೆಯಿದೆ. ಜಲ ಯೋಜನೆಗಳು ರಾಜ್ಯ ಸರ್ಕಾರದ ಪಟ್ಟಿಯಲ್ಲಿದೆ. ಕಳಸ ಬಂಡೂರಿ, ಮೇಕೆದಾಟು, ಎತ್ತಿನಹೊಳೆ, ಕೃಷ್ಣ ಮೊದಲ ಹಂತ, ಎರಡನೇ ಹಂತದ ಕಾಮಾಗಾರಿ, ನವಾಲಿಯಲ್ಲಿ ಉಳಿದ ಕಾಮಗಾರಿಗಳಿದೆ. ಒಟ್ಟಾಗಿ ಈ ಯೋಜನೆಗಳ ಅಂದಾಜು 25,000 ಕೋಟಿ ರೂಪಾಯಿ ಆಗಿದೆ. ಭದ್ರಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ರಾಜ್ಯದ ನಿರೀಕ್ಷೆಗಳಿಗೆ, ಕೇಂದ್ರ ಸರ್ಕಾರವು ಶೇಕಡ 80ರಷ್ಟು ನಿಧಿ ಹಂಚಿಕೆ ಮಾಡುವ ನಿರೀಕ್ಷೆಯಿದೆ. ಇದಕ್ಕಾಗಿ ಕೇಂದ್ರ ಸಚಿವಾಲಯಕ್ಕೆ ಜಲ ಶಕ್ತಿ ಸಚಿವಾಲಯವು ಸುತ್ತೋಲೆ ಕಳುಹಿಸಿದೆ.
40 ಲಕ್ಷ ಮನೆಗೆ ನೀರು ವ್ಯವಸ್ಥೆ
ಈ ವರ್ಷ ಕರ್ನಾಟಕ ರಾಜ್ಯ ಸರ್ಕಾರವು ಸುಮಾರು 40 ಲಕ್ಷ ಕುಟುಂಬಗಳಿಗೆ ಅಥವಾ ಮನೆಗಳಿಗೆ ನಲ್ಲಿ ನೀರು ಸರಬರಾಜು ಮಾಡುವ ಗುರಿಯನ್ನು ಹೊಂದಿದೆ. ಜಲ ಜೀವನ ಮಿಷನ್ ಅಡಿಯಲ್ಲಿ ನೀರಿನ ವ್ಯವಸ್ಥೆ ಮಾಡುವ ಉದ್ದೇಶ ಹೊಂದಿದೆ. ಸುಮಾರು 1 ಕೋಟಿ ಮನೆಗೆ ನೀರಿನ ವ್ಯವಸ್ಥೆ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಇದಕ್ಕಾಗಿ 7,000 ಕೋಟಿ ರೂಪಾಯಿಯ ಅಗತ್ಯವಿದೆ. ಹಾಗೆಯೇ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಹೊಸ ರೈಲನ್ನು ಆರಂಭಿಸುವ ನಿರೀಕ್ಷೆಯಿದೆ. ಬೆಂಗಳೂರು ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು, ಬೆಂಗಳೂರು-ತುಮಕೂರು-ಮೈಸೂರು ನಡುವೆ ಅಧಿಕ ವೇಗದ ರೈಲನ್ನು ಆರಂಭಿಸುವ ನಿರೀಕ್ಷೆಯಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications