ತಿರುವನಂತಪುರಂ: ಕೇಂದ್ರ ಸರ್ಕಾರ (Central Govt) ಮಾತ್ರವಲ್ಲದೇ, ದೇಶದ ಆಯಾ ರಾಜ್ಯ ಸರ್ಕಾರಗಳು ಭರ್ಜರಿ ಯೋಜನೆಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಇದೀಗ ಮಹಿಳೆಯರ ಸಬಲೀಕರಣಕ್ಕಾಗಿ ಕೇರಳದಲ್ಲಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲಾಗಿತ್ತು. ಅದೇ 'ಸ್ತ್ರೀಸುರಕ್ಷಾ ಯೋಜನೆ' (Sthree Suraksha Scheme). ಇದೀಗ ಈ ಯೋಜನೆಗೆ ಇಂದು ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸ್ಥಳೀಯ ಸ್ವಯಂ ಆಡಳಿತ ಇಲಾಖೆಯ ನಿರ್ದೇಶಕರು ಇದನ್ನು ಪ್ರಕಟಿಸಿದ್ದಾರೆ. ಈ ಯೋಜನೆಯಡಿ, ಕೇರಳದ 35-60 ವರ್ಷ ವಯಸ್ಸಿನ ಮಹಿಳೆಯರು (Women) ಮತ್ತು ಟ್ರಾನ್ಸ್ ವುಮೆನ್ ಪ್ರತಿ ತಿಂಗಳು 1000 ರೂ. ಆರ್ಥಿಕ ನೆರವು ಪಡೆಯಲು ಅರ್ಹರಾಗಿರುತ್ತಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಯೋಜನೆ ಕುರಿತು ಕಳೆದ ನವೆಂಬರ್ನಲ್ಲಿ ಘೋಷಣೆ ಮಾಡಿ, ಕೇರಳದ ಮಹಿಳೆಯರಿಗೆ ಸಿಹಿ ಸುದ್ದಿ ಕೊಟ್ಟಿದ್ದರು. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಇದರ ಅನುಷ್ಠಾನ ಸ್ವಲ್ಪ ವಿಳಂಬವಾಯಿತು. ಒಂದು ವೇಳೆ ಸುಳ್ಳು ಮಾಹಿತಿ ನೀಡಿ ಪಿಂಚಣಿ ಸೌಲಭ್ಯ ಪಡೆದರೆ, ಶೇ. 18ರಷ್ಟು ಬಡ್ಡಿಯೊಂದಿಗೆ ಹಣವನ್ನು ಮರುಪಡೆಯಲಾಗುವುದು ಎಂದು ಎಚ್ಚರಿಕೆ ಖಡಕ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?
ಇನ್ನು ಈ ಯೋಜನೆಗೆ ಕೇರಳ ರಾಜ್ಯದ ಪ್ರಜೆಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ksmart.lsgkerala.gov.in ವೆಬ್ಸೈಟ್ ಓಪನ್ ಮಾಡಬೇಕು. ನಂತರ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು. ವಾರ್ಡ್ ಸದಸ್ಯರ ಅಥವಾ ಪಂಚಾಯತ್ ಕಚೇರಿಯ ನೆರವನ್ನು ಪಡೆದುಕೊಂಡು ಸಹ ಇದಕ್ಕೆ ಅರ್ಜಿ ಸಲ್ಲಿಸಬಹುದು.
ಯಾರೆಲ್ಲಾ ಅರ್ಹರು?
ಇತರೆ ಯಾವುದೇ ಸಾಮಾಜಿಕ ಕಲ್ಯಾಣ ಯೋಜನೆ ಅಥವಾ ಪಿಂಚಣಿಗಳ ಫಲಾನುಭವಿಗಳಲ್ಲದ ಮಹಿಳೆಯರು ಮಾತ್ರ ಯೋಜನೆಗೆ ಅರ್ಹರು. ಅಂತ್ಯೋದಯ ಅನ್ನ ಯೋಜನೆ (ಹಳದಿ ಕಾರ್ಡ್) ಅಥವಾ ಆದ್ಯತಾ (ಪಿಂಕ್ ಕಾರ್ಡ್) ರೇಷನ್ ಕಾರ್ಡ್ ಹೊಂದಿರಬೇಕು. ಅವಿವಾಹಿತ, ವಿಕಲಚೇತನರ, ಕುಟುಂಬ, ಇಪಿಎಫ್ ಪಿಂಚಣಿ ಪಡೆಯುವವರು ಅನರ್ಹರು. ಕೇಂದ್ರ/ರಾಜ್ಯ ಸರ್ಕಾರಿ ಸೇವೆ, ಸರ್ಕಾರಿ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿ ಖಾಯಂ/ಗುತ್ತಿಗೆ ನೌಕರರೂ ಸಹ ಯೋಜನೆಗೆ ಅರ್ಹರಲ್ಲ ಎಂದು ಹೇಳಲಾಗಿದೆ.
ಏನೆಲ್ಲಾ ಸಲ್ಲಿಸಬೇಕು?
ವಯಸ್ಸಿನ ದೃಢೀಕರಣಕ್ಕಾಗಿ ಜನನ ಪ್ರಮಾಣಪತ್ರ, ಶಾಲಾ ಪ್ರಮಾಣಪತ್ರ, ಚಾಲನಾ ಪರವಾನಗಿ ಅಥವಾ ಪಾಸ್ಪೋರ್ಟ್ ಸಲ್ಲಿಸಲೇಬೇಕು. ಇವು ಲಭ್ಯವಿಲ್ಲದಿದ್ದರೆ, ವೈದ್ಯಾಧಿಕಾರಿ ನೀಡಿದ ಪ್ರಮಾಣಪತ್ರ ಕೂಡಾ ಬಳಸುವ ಅವಕಾಶವಿದೆ. ಬ್ಯಾಂಕ್ ಖಾತೆ ವಿವರ (IFSC ಸಹಿತ), ಆಧಾರ್ ಮಾಹಿತಿ ಮತ್ತು ಸ್ವಯಂ ದೃಢೀಕೃತ ಅಫಿಡವಿಟ್ ಅನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಸಲ್ಲಿಸಬೇಕು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications