ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆ (ಪಿಎಂ-ಕಿಸಾನ್ ಯೋಜನೆ) ಅಡಿಯಲ್ಲಿ ಭಾರತ ಸರ್ಕಾರವು ಎಲ್ಲಾ ಸಣ್ಣ ಮತ್ತು ಅಲ್ಪ ರೈತರಿಗೆ ಮೂಲ ಆದಾಯದ ಸಹಾಯಕ್ಕಾಗಿ ವರ್ಷಕ್ಕೆ 6,000 ರೂ. ನೀಡುತ್ತದೆ. ಈ ಯೋಜನೆ ಪ್ರಾರಂಭವಾದಾಗಿನಿಂದ ಒಂಬತ್ತನೇ ಕಂತನ್ನು ರೈತರಿಗೆ ಕಳುಹಿಸಲಾಗಿದೆ. ಈ ಕುರಿತು ಬಹುತೇಕರು ತಿಳಿದಿರುವುದು ಸಾಮಾನ್ಯ. ಆದ್ರೆ ಇದೇ ರೀತಿ ಮತ್ತೊಂದು ಪ್ರಯೋಜನವೇ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಆಗಿದೆ.
ಕೇಂದ್ರ ಸರ್ಕಾರವು 1998 ರಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆಯನ್ನು ಆರಂಭಿಸಿತು. ಇದು ರೈತರಿಗೆ ಅಲ್ಪಾವಧಿ ಔಪಚಾರಿಕ ಸಾಲವನ್ನು ಒದಗಿಸಲು ಸಹಾಯ ಮಾಡುತ್ತದೆ. ಈ ಯೋಜನೆಯನ್ನು ಮೊದಲು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ರಚಿಸಿದೆ.
3 ಲಕ್ಷ ರೂಪಾಯಿವರೆಗೆ ಸಾಲ
ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 28 ರಂದು ಟ್ವೀಟ್ ಮಾಡಿದ ಮಾಹಿತಿ ಪ್ರಕಾರ ಇದುವರೆಗೆ 2 ಕೋಟಿಗೂ ಹೆಚ್ಚು ರೈತರು ಪ್ರಯೋಜನ ಪಡೆದಿದ್ದಾರೆ. ಅವರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪಿಎಂ ಕಿಸಾನ್ ಯೋಜನೆಗೆ ಲಿಂಕ್ ಮಾಡಿದ ನಂತರ, ರೈತರು ಈಗ 4% ಬಡ್ಡಿಯಲ್ಲಿ 3 ಲಕ್ಷದವರೆಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು.
2 ಕೋಟಿಗೂ ಹೆಚ್ಚು ಕಿಸಾನ್ ಕ್ರೆಡಿಟ್ ಕಾರ್ಡ್
'' ಕೋವಿಡ್-19 ಸಾಂಕ್ರಾಮಿಕದಲ್ಲಿ ಎರಡು ಕೋಟಿಗೂ ಹೆಚ್ಚು ಕಿಸಾನ್ ಕ್ರೆಡಿಟ್ ಕಾರ್ಡ್ಗಳನ್ನು ನೀಡಲಾಗಿದೆ. ಇದರಲ್ಲಿ ಹೆಚ್ಚಿನವುಗಳು ಸಣ್ಣ ರೈತರಿಗೆ ಸಿಕ್ಕಿದ್ದು, ಕೃಷಿ ಮೂಲಸೌಕರ್ಯ ಮತ್ತು ಸಂಪರ್ಕ ಮೂಲ ಸೌಕರ್ಯಗಳಿಂದ ಲಾಭವಾಗುತ್ತದೆ'' ಎಸ್ಬಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಅಪ್ಲೈ ಮಾಡುವುದು ಹೇಗೆ?
ಕಿಸಾನ್ ಕ್ರೆಡಿಟ್ ಕಾರ್ಡ್ಗಳು ರೈತರಿಗೆ ಬ್ಯಾಂಕುಗಳ ಮೂಲಕ ಹೆಚ್ಚಿನ ಬಡ್ಡಿ ನೀಡಿ ಸಾಲವನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಏಕೆಂದರೆ ಕೆಸಿಸಿಗೆ ಬಡ್ಡಿದರವು 2%ರಿಂದ ಆರಂಭವಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಸುಲಭ. ಹೇಗೆ ಎಂದು ಈ ಕೆಳಗೆ ತಿಳಿಯಿರಿ
* ಎಸ್ಬಿಐ ಯೋನೋ ಆ್ಯಪ್ ಡೌನ್ಲೋಡ್ ಮಾಡಿ
* https://www.sbiyono.sbi/index.html ವೆಬ್ಸೈಟ್ನಲ್ಲಿ ಲಾಗಿನ್ ಆಗಿ
* ಯೋನೋ ಕೃಷಿ ಗೆ ಹೋಗಿ
* 'ಖಾತೆ' ಸೆಲೆಕ್ಟ್ ಮಾಡಿ
* ಕೆಸಿಸಿ ರಿವೀವ್ ಸೆಕ್ಷನ್ಗೆ ಹೋಗಿ
* ಅಪ್ಲೈ ಮೇಲೆ ಕ್ಲಿಕ್ ಮಾಡಿ ಮತ್ತು ಬಾಕಿ ಇರುವ ಪ್ರಕ್ರಿಯೆ ಪೂರ್ಣಗೊಳಿಸಿ
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications