ನವದೆಹಲಿ, ಅ. 31: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿವೃತ್ತ ನೌಕರರ ತಲೆನೋವು ಇಳಿಸುವ ಪ್ರಯತ್ನವಾಗಿ ಇಪಿಎಫ್ಒ ಕೆಲ ಕ್ರಮಗಳನ್ನು ಕೈಗೊಂಡಿದೆ. ಪಿಂಚಣಿದಾರರು ಈಗ ಜೀವನ ಪ್ರಮಾಣಪತ್ರವನ್ನು ಡಿಜಿಟಲ್ ರೂಪದಲ್ಲಿ ಸಲ್ಲಿಸುವ ಅವಕಾಶ ಮಾಡಿಕೊಡಲಾಗಿದೆ. 80 ವರ್ಷ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಡಿಜಿಟಲ್ ಸರ್ಟಿಫಿಕೇಟ್ ಸಲ್ಲಿಸಲು ನವೆಂಬರ್ 30ರವರೆಗೂ ಕಾಲಾವಧಿ ನೀಡಲಾಗಿದೆ.
ನೀವು ನಿವೃತ್ತರಾಗಿ ಪಿಂಚಣಿ ಬರಲು ಆರಂಭವಾಗಿ 2021 ಡಿಸೆಂಬರ್ ತಿಂಗಳಿಗೆ ಇನ್ನೂ ಒಂದು ವರ್ಷ ಆಗಿಲ್ಲದಿದ್ದರೆ ಅಂಥವರು ಲೈಫ್ ಸರ್ಟಿಫಿಕೇಟ್ ಸಲ್ಲಿಸುವ ಅಗತ್ಯ ಇರುವುದಿಲ್ಲ.
ಏನಿದು ಜೀವನ್ ಪ್ರಮಾಣ ಪತ್ರ?
ಭಾರತದಲ್ಲಿ ವಿವಿಧ ಸರ್ಕಾರಗಳ ಅಂದಾಜು ಒಟ್ಟು 1 ಕೋಟಿ ಪಿಂಚಣಿದಾರರಿದ್ದಾರೆ. ಇದರ ಜೊತೆಗೆ ರಕ್ಷಣಾ ಕ್ಷೇತ್ರದಲ್ಲಿ ಸುಮಾರು ೨೫ ಲಕ್ಷ ಪಿಂಚಣಿದಾರರಿದ್ದಾರೆ. ಅನೇಕ ಬಾರಿ ಪಿಂಚಣಿದಾರರು ಮೃತಪಟ್ಟಾಗಲೂ ಸರ್ಕಾರದಿಂದ ಪಿಂಚಣಿ ಹೋಗುತ್ತಲೇ ಇರುತ್ತದೆ. ಇದನ್ನು ತಪ್ಪಿಸಲು ಪ್ರತೀ ವರ್ಷವೂ ಪಿಂಚಣಿದಾರರು ತಾವು ಜೀವಂತ ಇದ್ದೇವೆಂದು ನಿರೂಪಿಸಬೇಕಾಗುತ್ತದೆ. ತಾವು ಪಿಂಚಣಿಯ ಹಣ ಪಡೆಯುವ ಬ್ಯಾಂಕ್ ಅಥವಾ ಅಂಚೆ ಕಚೇರಿಗೆ ಹೋಗಿ ಲೈಫ್ ಸರ್ಟಿಫಿಕೇಟ್ ದಾಖಲೆಗಳನ್ನು ನೀಡಬೇಕಾಗುತ್ತದೆ.

ಈ ಜೀವನ ಪ್ರಮಾಣ ಪತ್ರ ಪಡೆಯಬೇಕೆಂದರೆ ಈ ಮುಂಚೆಯಾದರೆ ಪಿಂಚಣಿದಾರರೇ ಖುದ್ದಾಗಿ ಪೆನ್ಷನ್ ವಿತರಣಾ ಸಂಸ್ಥೆ ಅಥವಾ ಅವರು ಸೇವೆ ಸಲ್ಲಿಸಿದ ಸಂಸ್ಥೆಯ ಬಳಿ ಹೋಗಬೇಕಾಗುತ್ತದೆ. ವೃದ್ಧಾಪ್ಯದಲ್ಲಿರುವ ಪಿಂಚಣಿದಾರರಿಗೆ ಇದರಿಂದ ಕಷ್ಟವಾಗುವುದನ್ನು ತಪ್ಪಿಸಲು ಸರ್ಕಾರ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೌಲಭ್ಯವನ್ನು ಆರಂಭಿಸಿದೆ.
ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಪಡೆಯುವುದು ಹೇಗೆ?
* ಮೊದಲು ಡೋರ್ಸ್ಟೆಪ್ ಬ್ಯಾಂಕಿಂಗ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ.
* ನಿಮ್ಮ ಬ್ಯಾಂಕ್ ಆಯ್ಕೆ ಮಾಡಿಕೊಳ್ಳಿ.
* ನಿಮ್ಮ ಪೆನ್ಷನ್ ಅಕೌಂಟ್ ನಂಬರ್ ನಮೂದಿಸಿ ವೆರಿಫೈ ಮಾಡಿ
* ಅಲ್ಲಿ ಕೇಳುವ ಶುಲ್ಕ ಪಾವತಿಸಿ
* ನಿಮ್ಮ ಮನವಿ ಕಳುಹಿಸಿ.

ಇಷ್ಟಾದ ಬಳಿಕ ಏಜೆಂಟ್ನ ಹೆಸರು ಇತ್ಯಾದಿ ವಿವರ ಇರುವ ಎಸ್ಎಂಎಸ್ ನಿಮ್ಮ ನೊಂದಾಯಿತ ಮೊಬೈಲ್ ನಂಬರ್ಗೆ ಬರುತ್ತದೆ. ನಿಮ್ಮ ಅನುಕೂಲದ ಸಮಯಕ್ಕೆ ಆ ಏಜೆಂಟ್ ನಿಮ್ಮ ಮನೆಗೆ ಬಂದು ಡಿಜಿಟಲ್ ಸರ್ಟಿಫಿಕೇಟ್ ಪಡೆಯುತ್ತಾರೆ.
ಬಯೋಮೆಟ್ರಿಕ್ ಮೂಲಕ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಪಡೆಯಬಹುದು. ಪೆನ್ಷನ್ ಡಿಸ್ಬರ್ಸಿಂಗ್ ಸಂಸ್ಥೆಗೆ ಡಿಜಿಟಲ್ ಜೀವನ ಪ್ರಮಾಣಪತ್ರವನ್ನು ರವಾನಿಸಲಾಗುತ್ತದೆ.
More From GoodReturns

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Gold Price Today: ಭಾರತದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ! ದಿಢೀರ್ 12,000 ರೂ. ಹೆಚ್ಚಳ



Click it and Unblock the Notifications