ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬ್ಯಾಂಕ್ಗಳಲ್ಲಿ 2000 ರೂಪಾಯಿ ಕರೆನ್ಸಿ ನೋಟುಗಳನ್ನು ಬದಲಾವಣೆ ಮಾಡುವ ಅಥವಾ ಡೆಪಾಸಿಟ್ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದೆ. ನೋಟನ್ನು ಬ್ಯಾಂಕ್ಗಳಲ್ಲಿ ವಿನಿಮಯ ಮಾಡಿಕೊಳ್ಳುವ ಕೊನೆಯ ದಿನಾಂಕವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
2,000 ರೂಪಾಯಿ ನೋಟು ವಿನಿಮಯದ ಗಡುವು ಮುಗಿದ ನಂತರವೂ ಮಾನ್ಯವಾಗಿರುತ್ತದೆ ಎಂದು ಆರ್ಬಿಐ ಹೇಳಿದೆ. ಈ ಹಿಂದಿನ ಗಡುವು ಇಂದು (ಸೆಪ್ಟೆಂಬರ್ 30) ಆಗಿದೆ. ಅಕ್ಟೋಬರ್ 8 ರಿಂದ ಬ್ಯಾಂಕ್ಗಳಲ್ಲಿ 2000 ರೂಪಾಯಿ ನೋಟುಗಳನ್ನು ಬದಲಾವಣೆಗೆ ಸ್ವೀಕಾರ ಮಾಡಲಾಗುವುದಿಲ್ಲ.

"ನೂತನ ಗಡುವು ಮುಗಿದ ಬಳಿಕ 2000 ರೂಪಾಯಿ ನೋಟುಗಳನ್ನು ಬ್ಯಾಂಕುಗಳಲ್ಲಿ ಬದಲಾವಣೆ ಮಾಡಲು ಅವಕಾಶವಿಲ್ಲ. ಆದರೆ ಆರ್ಬಿಐನ 19 ಕಚೇರಿಗಳಲ್ಲಿ ಜನರು 2000 ರೂಪಾಯಿ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು. ನೋಟುಗಳನ್ನು ಭಾರತೀಯ ಅಂಚೆ ಮೂಲಕ ಆರ್ಬಿಐನ "ವಿಷಯ ಕಚೇರಿಗಳಿಗೆ" ಅಂಚೆ ಮೂಲಕ ಕಳುಹಿಸಬಹುದು.
ನೋಟುಗಳನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಹಿಂದಿರುಗಿಸಲು ಸೆಂಟ್ರಲ್ ಬ್ಯಾಂಕ್ ಅಕ್ಟೋಬರ್ ಅಂತ್ಯದವರೆಗೆ ಸಮಯವನ್ನು ನೀಡುವ ನಿರೀಕ್ಷೆಯಿದೆ ಎಂದು ಈ ಹಿಂದೆ ಅಕ್ಟೋಬರ್ನಲ್ಲಿ ವರದಿಯಾಗಿದೆ. ಶೇಕಡ 100 ರಷ್ಟು 2000 ರೂಪಾಯಿ ನೋಟುಗಳನ್ನು ಹಿಂಪಡೆಯುವ ನಿಟ್ಟಿನಲ್ಲಿ ಕೇಂದ್ರ ಬ್ಯಾಂಕ್ ಈಗ ಈ ನೋಟುಗಳ ಬದಲಾವಣೆಗೆ ಇನ್ನಷ್ಟು ಸಮಯವನ್ನು ನೀಡಲು ಮುಂದಾಗುತ್ತಿದೆ ಎಂದು ವರದಿಯು ಉಲ್ಲೇಖ ಮಾಡಿದೆ.
"ಯಾರು 2000 ರೂಪಾಯಿ ನೋಟನ್ನು ಬದಲಾವಣೆ ಮಾಡಲು ಈವರೆಗೂ ಸಾಧ್ಯವಾಗಿಲ್ಲವೋ, ಅವರಿಗೆ ಆರ್ಬಿಐ ಈ ಅವಕಾಶವನ್ನು ನೀಡಲು ಮುಂದಾಗಿದೆ. ನೋಟು ಬದಲಾವಣೆಗೆ ಅವಕಾಶ ನೀಡದ ಸಂದರ್ಭದಲ್ಲಿ ಕೆಲವರು ವಿದೇಶದಲ್ಲಿದ್ದರು, ಇನ್ನು ಕೆಲವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ, ಮೊದಲಾದ ತೊಂದರೆ ಉಂಟಾಗಿದೆ. ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ವಿಶೇಷ ಅವಕಾಶ ನೀಡಬಹುದು," ಎಂದು ಸೌತ್ ಇಂಡಿಯನ್ ಬ್ಯಾಂಕ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
More From GoodReturns

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Gold Price Today: ಭಾರತದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ! ದಿಢೀರ್ 12,000 ರೂ. ಹೆಚ್ಚಳ



Click it and Unblock the Notifications