ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ವಾರಾಂತ್ಯದಲ್ಲೂ ಚಂದಾದಾರಿಕೆಗೆ ತೆರೆದಿರಲಿದೆ. ಶನಿವಾರ ಮತ್ತು ಭಾನುವಾರ ಚಂದಾದಾರಿಕೆಗೆ ನಡೆಸಲಾಗುತ್ತದೆ. ಇದಕ್ಕಾಗಿ ಭಾನುವಾರವೂ ಕೆಲವು ಬ್ಯಾಂಕ್ಗಳು ತೆರೆದಿರಲಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಭಾನುವಾರವೂ ಎಲ್ಐಸಿ ಐಪಿಒಗೆ ಅರ್ಜಿಗಳನ್ನು ಸ್ವೀಕಾರ ಮಾಡುವಂತೆ, ತಮ್ಮ ಕಚೇರಿ ತೆರೆದಿರುವಂತೆ ಎಲ್ಲಾ ಬ್ಯಾಂಕುಗಳಿಗೆ ನಿರ್ದೇಶಿಸಿದೆ. ಆರ್ಬಿಐ ನಿರ್ದೇಶನದಂತೆ ಹಲವಾರು ಬ್ಯಾಂಕುಗಳು ಭಾನುವಾರವೂ ಎಲ್ಐಸಿ ಐಪಿಒಗಾಗಿ ತೆರೆದಿರಲಿದೆ.
ಎಲ್ಐಸಿ ಐಪಿಒ ಹೂಡಿಕೆದಾರರಿಗೆ ಮೇ 9 ರವರೆಗೆ ತೆರೆದಿರುತ್ತದೆ. ಎಲ್ಐಸಿ ಐಪಿಒಗಾಗಿ ಒಟ್ಟು ಮೌಲ್ಯವನ್ನು 21,000 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದು ಇಲ್ಲಿಯವರೆಗೆ ದೇಶದ ಅತಿದೊಡ್ಡ ಐಪಿಒ ಆಗಿದೆ. ಉದ್ಯೋಗಿಗಳಿಗೆ ಸುಮಾರು 15.81 ಲಕ್ಷ ಷೇರುಗಳನ್ನು ಮತ್ತು ಪಾಲಿಸಿದಾರರಿಗೆ ಸುಮಾರು 2.21 ಕೋಟಿ ಷೇರುಗಳನ್ನು ಕಾಯ್ದಿರಿಸಲಾಗಿದೆ.

ಆಸಕ್ತ ಚಂದಾದಾರರು ಲಾಟ್ಗಳಲ್ಲಿ ಅರ್ಜಿ ಸಲ್ಲಿಸಬಹುದು, ಒಂದು ಎಲ್ಐಸಿ ಐಪಿಒ ಲಾಟ್ 15 ಎಲ್ಐಸಿ ಷೇರುಗಳನ್ನು ಒಳಗೊಂಡಿರುತ್ತದೆ. ಒಬ್ಬ ಅರ್ಜಿದಾರರು ಕನಿಷ್ಠ ಒಂದು ಮತ್ತು ಗರಿಷ್ಠ 14 ಲಾಟ್ಗಳಿಗೆ ಅರ್ಜಿ ಸಲ್ಲಿಸಬಹುದು. ಎಲ್ಐಸಿ ಐಪಿಒಗೆ ಅರ್ಜಿ ಸಲ್ಲಿಸಲು ಕನಿಷ್ಠ ಮೊತ್ತ 14,235 ರೂಪಾಯಿ ಆಗಿದೆ. ನಿಮ್ಮ ಷೇರುಗಳನ್ನು ಮೇ 16 ರೊಳಗೆ ನಿಮ್ಮ ಡಿಮ್ಯಾಟ್ ಖಾತೆಗೆ ಕ್ರೆಡಿಟ್ ಮಾಡಲಾಗುತ್ತದೆ. ನೀವು ಅರ್ಜಿ ಸಲ್ಲಿಸಿದಷ್ಟು ಷೇರು ನಿಮಗೆ ಲಭ್ಯವಾಗದಿದ್ದರೆ ನಿಮ್ಮ ಹಣವನ್ನು ಮೇ 13 ರೊಳಗೆ ಮರುಪಾವತಿಸಲಾಗುತ್ತದೆ.
ಭಾನುವಾರವೂ ತೆರೆದಿರುವ ಎಸ್ಬಿಐ ಕಚೇರಿ
ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಎಲ್ಐಸಿ ಐಪಿಒಗಾಗಿ ಅರ್ಜಿಗಳನ್ನು ಸ್ವೀಕಾರ ಮಾಡಲು ಎಲ್ಲಾ ಶಾಖೆಗಳನ್ನು ಭಾನುವಾರ ತೆರೆದಿರಲಿದೆ. ''ಎಲ್ಐಸಿ ಐಪಿಒ ಅರ್ಜಿ ಸ್ವೀಕಾರ ಮಾಡಲು ಮೇ 8 ರಂದು ನಮ್ಮ ಬ್ಯಾಂಕ್ನ ಎಲ್ಲಾ ಶಾಖೆಗಳು ತೆರೆದಿರುತ್ತದೆ,'' ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ನೀಡಿದೆ. "ಎಲ್ಐಸಿ ಐಪಿಒಗೆ ಅರ್ಜಿ ಸಲ್ಲಿಸುವ ನಮ್ಮ ಗ್ರಾಹಕರ ಅನುಕೂಲಕ್ಕಾಗಿ, ಅರ್ಜಿಗಳನ್ನು ಸ್ವೀಕರಿಸಲು ನಮ್ಮ ಎಲ್ಲಾ ಶಾಖೆಗಳು ಮೇ8, 2022 ರಂದು (ಭಾನುವಾರ) ತೆರೆದಿರುತ್ತವೆ ಎಂದು ತಿಳಿಸಲು ನಮಗೆ ಸಂತೋಷವಾಗಿದೆ," ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ.
More From GoodReturns

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Karnataka: ಕರ್ನಾಟಕ ಕೈಗಾರಿಕೆಯಲ್ಲಿ ಹೊಸ ಕ್ರಾಂತಿ…ಏರೋಸ್ಪೇಸ್, ರಕ್ಷಣಾ, EV ಮತ್ತು ಹಸಿರು ಇಂಧನದಲ್ಲಿ ನೂತನ ದಿಕ್ಕು!



Click it and Unblock the Notifications