ಮಂಗಳೂರು, ಡಿಸೆಂಬರ್ 26: ಬಹುನಿರೀಕ್ಷಿತ ಮಂಗಳೂರು ಸೆಂಟ್ರಲ್-ಮಡಂಗಾವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಾಯೋಗಿಕ ಓಡಾಟ ನಡೆಸಿದೆ. ಮಂಗಳವಾರ ಬೆಳಗ್ಗೆ 8.30 ರ ವೇಳೆಗೆ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ದಿಂದ ಹೊರಟ ರೈಲು ಮಧ್ಯಾಹ್ನ 1.45ಕ್ಕೆ ಮಡಂಗಾವ್ ತಲುಪುವ ನಿರೀಕ್ಷೆಗಳಿವೆ. ರೈಲು ಹೊರಡುವ ಸಮಯದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದು ಅಧಿಕಾರ ಗಳಿಂದ ಮಾಹಿತಿ ಪಡೆದು ಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30 ರಂದು ಚಾಲನೆ ನೀಡುವ ಐದು ವಂದೇ ಭಾರತ್ ರೈಲುಗಳಲ್ಲಿ ಒಂದಾದ ಮಂಗಳೂರು-ಮಡಂಗಾವ್ ರೈಲು ತನ್ನ ಪ್ರಾಯೋಗಿಕ ಪರೀಕ್ಷೆ ನಡೆಸಿದೆ. ಮಂಗಳೂರು ಸೆಂಟ್ರಲ್ನ ಪ್ಲಾಟ್ ಫಾರಂ ಒಂದರಲ್ಲಿ ಈ ಹೊಸ ರೈಲು ಓಡಾಟ ಮಾಡಿದೆ. ಸುಮಾರು 370 ಕೀಲೋ ಮೀಟರ್ ಅಂತರದ ಮಂಗಳೂರು-ಮಡಂಗಾವ್ ದೂರವನ್ನು 4 ರಿಂದ 5ಗಂಟೆಗಳಲ್ಲಿ ತಲುಪುವ ಬಹು ನಿರೀಕ್ಷೆಯನ್ನು ವಂದೇ ಭಾರತ್ ರೈಲು ಹೊಂದಿದೆ.

ಈ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಕೇವಲ ಮೂರು ನಿಲುಗಡೆಯನ್ನು ಮಾತ್ರ ಹೊಂದಿದೆ. ಮಂಗಳೂರು ಸೆಂಟ್ರಲ್ನಿಂದ ಉಡುಪಿ, ಕಾರವಾರ ಬಳಿಕ ಮಡಂಗಾವ್ನಲ್ಲಿ ಮಾತ್ರ ನಿಲುಗಡೆಯಾಗಲಿದೆ. ರೈಲಿನಲ್ಲಿ ಸದ್ಯ ಕುಳಿತು ಪ್ರಯಾಣಿಸುವ ಆಸನದ ವ್ಯವಸ್ಥೆ ಮಾತ್ರ ಇದೆ.
ಈ ರೈಲಿನ ತಾತ್ಕಾಲಿಕ ವೇಳಾ ಪಟ್ಟಿಯ ಪ್ರಕಾರ ಮಂಗಳೂರು ಸೆಂಟ್ರಲ್ ನಿಂದ ಬೆಳಗ್ಗೆ 8.30ರ ವೇಳೆಗೆ ಹೊರಟರೆ ಮಧ್ಯಾಹ್ನ 1.05 ನಿಮಿಷಕ್ಕೆ ಮಡಂಗಾವ್ ತಲುಪಲಿದೆ. ಸಂಜೆ 6.10 ಕ್ಕೆ ಮಡಂಗಾವ್ ನಿಂದ ಹೊರಟರೆ ರಾತ್ರಿ 10.45ರ ವೇಳೆಗೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ದೇಶವಿಡೀ ವಂದೇ ಭಾರತ್ ಓಡಾಟ ನಡೆಸಿದರೂ ಮಂಗಳೂರಿಗೆ ವಂದೇ ಭಾರತ್ ಭಾಗ್ಯವನ್ನು ಕೇಂದ್ರ ಸರ್ಕಾರ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿಯಾಗಿ ವಂದೇ ಭಾರತ್ ಸೇವೆಗಳ ಆರಂಭಕ್ಕಾಗಿ ಮನವಿ ಮಾಡಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications