ಹಣಕಾಸು ವರ್ಷದ ಅಂತ್ಯ ಸಮೀಪಿಸುತ್ತಿರುವುದರಿಂದ, ಹಲವು ತೆರಿಗೆ-ಉಳಿತಾಯ ಯೋಜನೆಗಳನ್ನು ನಾವು ಮುಂದುವರಿಸಲು ಕನಿಷ್ಠ ಠೇವಣಿ ಅಗತ್ಯ ಇದೆ. ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಮತ್ತು ಸುಕನ್ಯಾ ಸಮೃದ್ಧಿ ಯೋಜನೆಯು ಈ ಯೋಜನೆಗಳಲ್ಲಿ ಸೇರಿದೆ.
ನೀವು ಈ ಖಾತೆಗಳನ್ನು ತೆರೆದಿದ್ದರೆ ಮತ್ತು ಹಣಕಾಸು ವರ್ಷದಲ್ಲಿ ಕನಿಷ್ಠ ಮೊತ್ತವನ್ನು ಠೇವಣಿ ಮಾಡಲು ವಿಫಲವಾದರೆ, ಈ ಖಾತೆಗಳು ನಿಷ್ಕ್ರಿಯವಾಗುತ್ತವೆ. ಆದರಿಂದಾಗಿ ಮಾರ್ಚ್ 31ರೊಳಗೆ ಈ ಖಾತೆಗಳಲ್ಲಿ ಕನಿಷ್ಠ ಠೇವಣಿಯನ್ನು ನೀವು ಮಾಡಬೇಕಾಗಿದೆ.
ನೀವು ಒಂದು ವೇಳೆ ಕನಿಷ್ಠ ಠೇವಣಿ ಹೊಂದಿಲ್ಲದಿದ್ದರೆ ಆ ಖಾತೆಯನ್ನು ನಿಷ್ಕ್ರೀಯ ಮಾಡಲಾಗುತ್ತದೆ. ಹಾಗೆ ಒಮ್ಮೆ ನಿಷ್ಕ್ರೀಯವಾದ ಖಾತೆಯನ್ನು ಮತ್ತೆ ಪುನಃ ಸಕ್ರಿಯಗೊಳಿಸಲು ಸಾಕಷ್ಟು ಸಮಯ ಬೇಕಾಗಲಿದೆ. ಇಂತಹ ಸುದೀರ್ಘ ಕಾರ್ಯವಿಧಾನವನ್ನು ತಪ್ಪಿಸಲು, ಮಾರ್ಚ್ 31 ರ ಆರ್ಥಿಕ ವರ್ಷ ಮುಗಿಯುವ ಮೊದಲು ನೀವು ಕನಿಷ್ಠ ಠೇವಣಿಗಳನ್ನು ಮಾಡಬೇಕು. ಹಾಗಾದರೆ ಈ ಉಳಿತಾಯ ಯೋಜನೆಗಳು ಯಾವುದು, ಈ ಖಾತೆಗಳು ನಿಷ್ಕ್ರೀಯ ಆಗುವುದನ್ನು ತಪ್ಪಿಸಲು ನೀವು ಎಷ್ಟು ಠೇವಣಿ ಮಾಡಬೇಕು ಎಂದು ತಿಳಿಯಲು ಮುಂದೆ ಓದಿ...

ಸಾರ್ವಜನಿಕ ಭವಿಷ್ಯ ನಿಧಿ: ಒಂದು ಹಣಕಾಸು ವರ್ಷದಲ್ಲಿ ಸಾರ್ವಜನಿಕ ಭವಿಷ್ಯ ನಿಧಿ ಖಾತೆಗೆ ಕನಿಷ್ಠ ವಾರ್ಷಿಕ ಠೇವಣಿ 500 ರೂ ಆಗಿದೆ. ಠೇವಣಿ ಮಾಡಲು ಕೊನೆಯ ದಿನಾಂಕ ಮಾರ್ಚ್ 31, 2022 ಆಗಿದೆ. ಗ್ರಾಹಕರು ಈ ದಿನಾಂಕದೊಳಗೆ ಕೊಡುಗೆ ನೀಡಲು ವಿಫಲರಾದರೆ, ಅವರು ಪ್ರತಿ ವರ್ಷಕ್ಕೆ 50 ರೂಪಾಯಿಗಳ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ, ಹಣಕಾಸು ವರ್ಷದಲ್ಲಿ ಕನಿಷ್ಠ ಕೊಡುಗೆಯನ್ನು ನೀಡದಿದ್ದರೆ, ಪಿಪಿಎಫ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ.
ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಅಥವಾ ಎನ್ಪಿಎಸ್ ಖಾತೆದಾರರಿಗೆ, ಖಾತೆಯು ಸಕ್ರಿಯವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಆರ್ಥಿಕ ವರ್ಷದಲ್ಲಿ ಕನಿಷ್ಠ 1,000 ರೂ.ಗಳನ್ನು ಠೇವಣಿ ಮಾಡುವುದು ಕಡ್ಡಾಯವಾಗಿದೆ. ಕನಿಷ್ಠ ಮೊತ್ತವನ್ನು ಖಾತೆಯಲ್ಲಿ ಠೇವಣಿ ಮಾಡದಿದ್ದರೆ, ಖಾತೆಯು ನಿಷ್ಕ್ರಿಯಗೊಳ್ಳುತ್ತದೆ. ಆ ಖಾತೆಯನ್ನು ಪುನರುಜ್ಜೀವನಗೊಳಿಸಲು, ನೀವು ಕನಿಷ್ಟ ಕೊಡುಗೆಗಳೊಂದಿಗೆ ಪ್ರತಿ ವರ್ಷ ರೂ 100 ದಂಡವನ್ನು ಪಾವತಿಸಬೇಕಾಗುತ್ತದೆ.
ಸುಕನ್ಯಾ ಸಮೃದ್ಧಿ ಯೋಜನೆ: ಒಂದು ಆರ್ಥಿಕ ವರ್ಷದಲ್ಲಿ ಸುಕನ್ಯಾ ಸಮೃದ್ಧಿ ಖಾತೆಯನ್ನು ಸಕ್ರಿಯವಾಗಿಡಲು ಠೇವಣಿ ಮಾಡಬೇಕಾದ ಕನಿಷ್ಠ ಮೊತ್ತ 250 ರೂಪಾಯಿ ಎಂದು ಖಾತೆದಾರರು ಗಮನಿಸಬೇಕು. ಹಣಕಾಸು ವರ್ಷದಲ್ಲಿ ಕನಿಷ್ಠ ಠೇವಣಿ ಮಾಡದಿದ್ದರೆ, ಅದನ್ನು ಡೀಫಾಲ್ಟ್ ಖಾತೆ ಎಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ಈ ಖಾತೆಯನ್ನು ಸಕ್ರಿಯಗೊಳಿಸಬಹುದು. ಅದಕ್ಕಾಗಿ ನೀವು ಕನಿಷ್ಟ 250 ರೂಪಾಯಿಗಳ ಕೊಡುಗೆಯನ್ನು ಪಾವತಿಸಬೇಕಾಗುತ್ತದೆ. ಜೊತೆಗೆ ಪ್ರತಿ ವರ್ಷಕ್ಕೆ 50 ರೂಪಾಯಿಗಳ ದಂಡವನ್ನು ಪಾವತಿಸಬೇಕಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications