ರಿಸರ್ವ್ ಬ್ಯಾಂಪ್ ಆಫ್ ಇಂಡಿಯಾ (ಆರ್ಬಿಐ) ಮೇ 19 ರಂದು 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಗಡುವು ಮುಗಿಯಲು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಗಡುವಿಗೂ ಮುನ್ನವೇ ನೀವು ನೋಟುಗಳನ್ನು ಬದಲಾವಣೆ ಮಾಡಬೇಕಾಗುತ್ತದೆ.
2000 ರೂಪಾಯಿ ನೋಟುಗಳನ್ನು ಜನರು ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್ಗಳಲ್ಲಿ ಡೆಪಾಸಿಟ್ ಮಾಡುವಂತೆ ಅಥವಾ ಬದಲಾವಣೆ ಮಾಡಿಕೊಳ್ಳುವಂತೆ ಕೇಂದ್ರ ಬ್ಯಾಂಕ್ ವಿನಂತಿ ಮಾಡಿದೆ. 2000 ರೂಪಾಯಿ ನೋಟುಗಳನ್ನು ಹೇಗೆ ಬದಲಾವಣೆ ಮಾಡುವುದು ಎಂಬ ವಿವರ ಇಲ್ಲಿದೆ ಮುಂದೆ ಓದಿ....

ನೋಟು ಹೀಗೆ ಬದಲಾಯಿಸಿ
ಜನರು ಸೆಪ್ಟೆಂಬರ್ 30 ರವರೆಗೆ ತಮ್ಮ ಬ್ಯಾಂಕ್ ಖಾತೆಗಳಲ್ಲಿ 2,000 ರೂಪಾಯಿ ನೋಟುಗಳನ್ನು ಡೆಪಾಸಿಟ್ ಮಾಡಬಹುದು ಅಥವಾ ಬದಲಾವಣೆ ಮಾಡಿಕೊಳ್ಳಬಹುದು. ಮೇ 23 ಯಾರಲ್ಲಿ 2000 ರೂಪಾಯಿ ನೋಟು ಇದೆಯೋ ಅವರು ದೇಶಾದ್ಯಂತ ಎಲ್ಲ ಬ್ಯಾಂಕ್ಗಳಲ್ಲಿ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
ಬ್ಯಾಂಕ್ ಶಾಖೆಗಳ ನಿಯಮಿತ ಕಾರ್ಯನಿರ್ವಹಣೆಯಲ್ಲಿ ಅಡಚಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಒಂದು ಬಾರಿಗೆ 20,000 ರೂಪಾಯಿ ಮೌಲ್ಯದ 2000 ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. 2000 ರೂಪಾಯಿ ನೋಟುಗಳನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲು ಕೆವೈಸಿ ಮಾನದಂಡಗಳು ಹಾಗೂ ಇತರೆ ಕಾನೂನು ಪ್ರಕ್ರಿಯೆಗಳು ಅವಶ್ಯಕವಾಗಿದೆ.
ಸೆಪ್ಟೆಂಬರ್ ಆರಂಭದಲ್ಲಿ ಆರ್ಬಿಐ ಹಂಚಿಕೊಂಡ ಮಾಹಿತಿಯ ಪ್ರಕಾರ, ಚಲಾವಣೆಯಿಂದ ತೆಗೆದುಹಾಕಲಾದ ಒಟ್ಟು 2,000 ರೂಪಾಯಿ ಮೌಲ್ಯದ ನೋಟುಗಳಲ್ಲಿ ಶೇಕಡ 93 ರಷ್ಟು ನೋಟುಗಳನ್ನು ಬ್ಯಾಂಕ್ಗೆ ವಾಪಾಸ್ ನೀಡಲಾಗಿದೆ.
ಆರ್ಬಿಐ ಹೇಳಿಕೆಯ ಪ್ರಕಾರ, ಆಗಸ್ಟ್ 31, 2023 ರಂತೆ ಬ್ಯಾಂಕ್ಗಳಲ್ಲಿ ಡೆಪಾಸಿಟ್ ಮಾಡಲಾದ 2000 ರೂಪಾಯಿ ನೋಟುಗಳ ಒಟ್ಟು ಮೌಲ್ಯವು 3.32 ಲಕ್ಷ ಕೋಟಿ ರೂಪಾಯಿ ಎಂದು ಬ್ಯಾಂಕ್ಗಳಿಂದ ಸಂಗ್ರಹಿಸಿದ ಡೇಟಾ ಹೇಳಿದೆ. ಅಂದರೆ ಆಗಸ್ಟ್ 31 ರಂದು ಕೇವಲ 0.24 ಲಕ್ಷ ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳು ಚಲಾವಣೆಯಲ್ಲಿತ್ತು.
ಪ್ರಮುಖ ಬ್ಯಾಂಕ್ಗಳಿಂದ ಸಂಗ್ರಹಿಸಿದ ಮಾಹಿತಿಯ ಪ್ರಕಾರ 2,000 ರೂಪಾಯಿಗಳ ಸರಿಸುಮಾರು ಶೇಕಡ 87 ರಷ್ಟು ನೋಟುಗಳನ್ನು ಬ್ಯಾಂಕ್ಗಳಲ್ಲಿ ಡೆಪಾಸಿಟ್ ಮಾಡಲಾಗಿದೆ. ಆದರೆ ಶೇಕಡ 13 ರಷ್ಟು ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಿಗೆ ಬದಲಾವಣೆ ಮಾಡಲಾಗಿದೆ.
ಇತ್ತೀಚಿನ ಸಂದರ್ಶನವೊಂದರಲ್ಲಿ, ಸೌತ್ ಇಂಡಿಯನ್ ಬ್ಯಾಂಕ್ನ ಹಿರಿಯ ಅಧಿಕಾರಿಯೊಬ್ಬರು, "ವಿದೇಶದಲ್ಲಿದ್ದವರು, ಆರೋಗ್ಯ ಸಮಸ್ಯೆ ಇದ್ದವರು ಗಡುವಿಗೂ ಮುನ್ನ 2000 ರೂಪಾಯಿ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ಅವರಿಗೆ ವಿಶೇಷ ಅವಕಾಶ ನೀಡಲಾಗುತ್ತದೆ," ಎಂದು ಮಾಹಿತಿ ನೀಡಿದ್ದಾರೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications