ಅಟಲ್ ಪಿಂಚಣಿ ಯೋಜನೆ (ಎಪಿವೈ) ಪ್ರಾರಂಭವಾದಾಗಿನಿಂದ ಆರೂವರೆ ವರ್ಷಗಳ ಅವಧಿಯಲ್ಲಿ 3.68 ಕೋಟಿ ನೋಂದಣಿಗಳೊಂದಿಗೆ ಗಣನೀಯವಾಗಿ ಏರಿಕೆ ಕಂಡಿದೆ. 65 ಲಕ್ಷಕ್ಕೂ ಹೆಚ್ಚು ಚಂದಾದಾರರು ನೋಂದಾಯಿಸಿಕೊಂಡಿರುವುದರಿಂದ ಈ ಹಣಕಾಸು ವರ್ಷದಲ್ಲಿ ಕಾರ್ಯಕ್ಷಮತೆ ಉತ್ತಮವಾಗಿದೆ.
ಇದು ಯೋಜನೆ ಪ್ರಾರಂಭವಾದ ನಂತರ ಅದೇ ಅವಧಿಯಲ್ಲಿ ಇದುವರೆಗಿನ ಅತಿ ಹೆಚ್ಚು ನೋಂದಣಿಯಾಗಿದೆ. ನೋಂದಣಿಯ ಹೊರತಾಗಿ, 56:44 ರ ಪುರುಷ ಮತ್ತು ಸ್ತ್ರೀ ಚಂದಾದಾರಿಕೆ ಅನುಪಾತವು ಸುಧಾರಿಸುತ್ತಿದೆ ಮತ್ತು ನಿರ್ವಹಣೆಯ ಅಡಿಯಲ್ಲಿ ಸ್ವತ್ತು ಸುಮಾರು 20,000 ಕೋಟಿ ರೂಪಾಯಿ ಆಗಿದೆ ಎಂದು ವಿತ್ತ ಸಚಿವಾಲಯ ವರದಿ ನೀಡಿದೆ.
ಅಟಲ್ ಪಿಂಚಣಿ ಯೋಜನೆ(APY), ಭಾರತ ಸರ್ಕಾರದ ಪ್ರಮುಖ ಸಾಮಾಜಿಕ ಭದ್ರತಾ ಯೋಜನೆಯನ್ನು 2015ರ ಮೇ 9 ರಂದು ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಶೇಷವಾಗಿ ಅಸಂಘಟಿತ ವಲಯಗಳಲ್ಲಿನ ನಾಗರಿಕರಿಗೆ ವೃದ್ಧಾಪ್ಯ ಆದಾಯ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಪ್ರಾರಂಭಿಸಿದರು.

ಅಟಲ್ ಪಿಂಚಣಿ ಯೋಜನೆಯನ್ನು ನಿರ್ವಹಿಸುವ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಪಿಎಫ್ಆರ್ಡಿಎ) ಅಧ್ಯಕ್ಷ ಸುಪ್ರತಿಮ್ ಬಂಡೋಪಾಧ್ಯಾಯ ಅವರು ಮಾತನಾಡಿ, ''ಸಮಾಜದ ಅತ್ಯಂತ ದುರ್ಬಲ ವರ್ಗಗಳನ್ನು ಪಿಂಚಣಿ ವ್ಯಾಪ್ತಿಗೆ ತರುವ ಈ ಸಾಧನೆಯು ಅವಿರತ ಪ್ರಯತ್ನದಿಂದ ಮಾತ್ರ ಸಾಧ್ಯವಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು, ಪಾವತಿ ಬ್ಯಾಂಕ್ಗಳು, ಸಣ್ಣ ಹಣಕಾಸು ಬ್ಯಾಂಕ್ಗಳು, ಸಹಕಾರಿ ಬ್ಯಾಂಕ್ಗಳು, ಅಂಚೆ ಇಲಾಖೆ ಮತ್ತು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಮಿತಿಗಳ ಬೆಂಬಲದಿಂದ ಇದು ಸಾಧ್ಯವಾಗಿದೆ,'' ಎಂದಿದ್ದಾರೆ.
"ಈ ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಕೋಟಿ ನೋಂದಣಿಯನ್ನು ಸಾಧಿಸುವುದರ ಜತೆಗೆ, ಮುಂದೆ ನಾವು ದೇಶದಲ್ಲಿ ಪಿಂಚಣಿ ಶುದ್ಧತೆಯನ್ನು ಸಾಧಿಸುವ ಕಾರ್ಯವನ್ನು ಹೊಂದಿದ್ದೇವೆ ಮತ್ತು ಅದನ್ನು ಸಾಧಿಸಲು ನಾವು ನಿರಂತರವಾಗಿ ಪೂರ್ವಭಾವಿ ಉಪಕ್ರಮಗಳನ್ನು ಕೈಗೊಳ್ಳುತ್ತೇವೆ" ಎಂದು PFRDA ಅಧ್ಯಕ್ಷರು ಹೇಳಿದರು.
ಬ್ಯಾಂಕ್ ಖಾತೆಯನ್ನು ಹೊಂದಿರುವ 18-40 ವರ್ಷ ವಯಸ್ಸಿನ ಯಾವುದೇ ಭಾರತೀಯ ನಾಗರಿಕರು APY ಗೆ ಚಂದಾದಾರರಾಗಬಹುದು ಮತ್ತು ಅದರ ವಿಶಿಷ್ಟತೆಯು ಮೂರು ವಿಶಿಷ್ಟ ಪ್ರಯೋಜನಗಳಿಗೆ ಕಾರಣವಾಗಿದೆ. ಮೊದಲನೆಯದಾಗಿ, ಇದು 60 ವರ್ಷಗಳನ್ನು ತಲುಪಿದಾಗ 1000 ರೂ.ರಿಂದ 5000 ರೂ.ರವರೆಗಿನ ಕನಿಷ್ಠ ಖಾತರಿ ಪಿಂಚಣಿಯನ್ನು ಒದಗಿಸುತ್ತದೆ, ಎರಡನೆಯದಾಗಿ ಚಂದಾದಾರರ ಮರಣದ ನಂತರ ಸಂಗಾತಿಗೆ ಪಿಂಚಣಿಯ ಮೊತ್ತವನ್ನು ಜೀವಿತಾವಧಿಯಲ್ಲಿ ಖಾತರಿಪಡಿಸಲಾಗುತ್ತದೆ ಮತ್ತು ಕೊನೆಯದಾಗಿ, ಚಂದಾದಾರರಿಬ್ಬರ ಮರಣದ ಸಂದರ್ಭದಲ್ಲಿ ಮತ್ತು ಸಂಗಾತಿಗೆ, ಸಂಪೂರ್ಣ ಪಿಂಚಣಿ ಹಣವನ್ನು ನಾಮಿನಿಗೆ ಪಾವತಿಸಲಾಗುತ್ತದೆ.
ದೇಶದಲ್ಲಿನ ಕೋಟ್ಯಾಂತರ ಅಸಂಘಟಿತ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರುವ 2015ರಲ್ಲಿ 'ಅಟಲ್ ಪಿಂಚಣಿ ಯೋಜನೆ' (Atal Pension Yojana - APY) ಯನ್ನು ಜಾರಿಗೆ ತಂದಿದೆ. ಅಸಂಘಟಿತ ಕಾರ್ಮಿಕರ ವೃದ್ಧಾಪ್ಯ ಜೀವನವನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಯಿತು. ಅಟಲ್ ಪಿಂಚಣಿ ಯೋಜನೆಯಡಿ, ಚಂದಾದಾರರಿಗೆ ತಿಂಗಳಿಗೆ ಕನಿಷ್ಠ 1,000 ಮತ್ತು ಗರಿಷ್ಠ 5,000 ಪಿಂಚಣಿ ನೀಡಲಾಗುತ್ತದೆ. ಕನಿಷ್ಠ ಪಿಂಚಣಿ ಪ್ರಯೋಜನವನ್ನು ಭಾರತ ಸರ್ಕಾರವು ಖಾತರಿಪಡಿಸುತ್ತದೆ. ಇಲ್ಲಿ ಗಮನಿಸಬೇಕಾದ ವಿಷಯ ಏನಂದ್ರೆ, ನೀವು ಇದರಲ್ಲಿ ಹೂಡಿಕೆ ಮಾಡಲು ಬಹಳ ಕಷ್ಟಪಡಬೇಕಾಗಿಲ್ಲ. ದಿನಕ್ಕೆ ಕೇವಲ 7 ರೂಪಾಯಿ ಠೇವಣಿ ಇಡುವ ಮೂಲಕ ಮಾಸಿಕ 5000 ರೂ. ಪಿಂಚಣಿ ಪಡೆಯಬಹುದು.
ಸರ್ಕಾರವು ನಿಮ್ಮ ಕೊಡುಗೆಯ 50 ಪ್ರತಿಶತದಷ್ಟು ಅಥವಾ ವರ್ಷಕ್ಕೆ 1,000 ರೂಪಾಯಿಗಳಲ್ಲಿ ಯಾವುದು ಕಡಿಮೆ ಇದೆಯೋ ಅದನ್ನು ಕೊಡುಗೆಯಾಗಿ ನೀಡುತ್ತದೆ. ಆದರೆ ಯಾವುದೇ ಕಾನೂನುಬದ್ಧ ಸಾಮಾಜಿಕ ಭದ್ರತಾ ಯೋಜನೆಯ ವ್ಯಾಪ್ತಿಗೆ ಒಳಪಡದ ಮತ್ತು ಆದಾಯ ತೆರಿಗೆಯನ್ನು ಪಾವತಿಸದ ಜನರಿಗೆ ಸರ್ಕಾರದ ತೆರಿಗೆ ಲಭ್ಯವಿರುತ್ತದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications