ಸರ್ಕಾರವು ಮೇ 10, 2022 ರಂದು ಅಧಿಸೂಚನೆಯೊಂದನ್ನು ಹೊರಡಿಸಿದೆ. ಈ ಅಧಿಸೂಚನೆಯಲ್ಲಿ ರ್ಕಾರವು ವಿಶೇಷವಾಗಿ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ಅಥವಾ ಆಧಾರ್ ಇಲ್ಲದೆ ಹಣಕಾಸಿನ ವಹಿವಾಟು ಮಾಡುವವರಿಗೆ ಸಂಬಂಧಿಸಿದ ಹೊಸ ನಿಯಮಗಳನ್ನು ಹೊರತಂದಿದೆ.
ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಆದಾಯ-ತೆರಿಗೆ (ಹದಿನೈದನೇ ತಿದ್ದುಪಡಿ) ನಿಯಮಗಳು, 2022 ಎಂಬ ಹೊಸ ನಿಯಮಗಳನ್ನು ಮಾಡಿದೆ. ಹೊಸ ನಿಯಮಗಳ ಪ್ರಕಾರ, ಕೆಲವು ವಹಿವಾಟುಗಳಿಗೆ ಪ್ಯಾನ್ ಅಥವಾ ಆಧಾರ್ ಅನ್ನು ಒದಗಿಸುವುದು ಕಡ್ಡಾಯವಾಗಿದೆ.
(ಎ) ಬ್ಯಾಂಕಿಂಗ್ ಕಂಪನಿ ಅಥವಾ ಸಹಕಾರಿ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೊಂದಿರುವ ವ್ಯಕ್ತಿಯ ಒಂದು ಅಥವಾ ಹೆಚ್ಚಿನ ಖಾತೆಯಲ್ಲಿ ಒಂದು ಹಣಕಾಸು ವರ್ಷದಲ್ಲಿ ರೂ 20 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ಠೇವಣಿ ವೇಳೆ ಪ್ಯಾನ್ ಅಥವಾ ಆಧಾರ್ ಕಡ್ಡಾಯವಾಗಿದೆ.

(ಬಿ) ಬ್ಯಾಂಕಿಂಗ್ ಕಂಪನಿ ಅಥವಾ ಸಹಕಾರಿ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೊಂದಿರುವ ವ್ಯಕ್ತಿಯ ಒಂದು ಅಥವಾ ಹೆಚ್ಚಿನ ಖಾತೆಯಲ್ಲಿ ಒಂದು ಹಣಕಾಸು ವರ್ಷದಲ್ಲಿ ರೂ 20 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ಹಿಂಪಡೆಯುವಿಕೆ ವೇಳೆ ಆಧಾರ್ ಅಥವಾ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ.
(ಸಿ) ಬ್ಯಾಂಕಿಂಗ್ ಕಂಪನಿ ಅಥವಾ ಸಹಕಾರಿ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೊಂದಿರುವ ವ್ಯಕ್ತಿಯು ಕರೆಂಟ್ ಅಕೌಂಟ್ ಅಥವಾ ನಗದು ಕ್ರೆಡಿಟ್ ಖಾತೆಯನ್ನು ತೆರೆಯುವಾಗ ಪ್ಯಾನ್ ಅಥವಾ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ನಂಗಿಯಾ ಮತ್ತು ಕೋ ಎಲ್ಎಲ್ಪಿ ಪಾಲುದಾರ ಶೈಲೇಶ್ ಕುಮಾರ್, "ದೊಡ್ಡ ವಹಿವಾಟುಗಳಿಗೆ ಪ್ರವೇಶಿಸಬಹುದಾದ ಆದರೆ ಪ್ಯಾನ್ ಹೊಂದಿರದ ಜನರನ್ನು ಈಗ ತೆರಿಗೆ ಅಡಿಯಲ್ಲಿ ತರಲು ಸರ್ಕಾರವು ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ದೊಡ್ಡ ಮೊತ್ತದ ವಹಿವಾಟುಗಳನ್ನು ನಡೆಸುವವರಿಗೆ ಪ್ಯಾನ್ ಅಥವಾ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ. ಜನರಲ್ಲಿ ತೆರಿಗೆಗೆ ಒಳಪಡುವ ಆದಾಯವಿರಬಹುದು. ಹೊಂದಿರದೆಯೂ ಇರಬಹುದು. ಆದರೆ ಈಗ ಪ್ಯಾನ್ ಕಡ್ಡಾಯವಾಗಿದೆ," ಎಂದು ತಿಳಿಸಿದ್ದಾರೆ.
"ಅಂತಹ ವ್ಯಕ್ತಿಯು ಒಮ್ಮೆ ಪ್ಯಾನ್ ಅನ್ನು ಉಲ್ಲೇಖಿಸಿದರೆ ವಹಿವಾಟುಗಳನ್ನು ಟ್ರ್ಯಾಕ್ ಮಾಡಲು ತೆರಿಗೆ ಅಧಿಕಾರಿಗಳಿಗೆ ಸುಲಭವಾಗುತ್ತದೆ. ವ್ಯಕ್ತಿಯು ಆದಾಯದ ರಿಟರ್ನ್ ಸಲ್ಲಿಸುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಅದು ಅವರಿಗೆಯೇ ಕಷ್ಟಕರವಾಗಬಹುದು," ಎಂದು ಕೂಡಾ ಹೇಳಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications