ಇಂದಿನಿಂದ (ಮೇ 26) ಪ್ರಮುಖ ಬ್ಯಾಂಕಿಂಗ್ ನಿಯಮ ಬದಲಾವಣೆ ಆಗಿದೆ. ಗ್ರಾಹಕರು ಒಂದೇ ಹಣಕಾಸು ವರ್ಷದಲ್ಲಿ 20 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ಹಿಂಪಡೆಯುವಿಕೆ / ಠೇವಣಿಗಳಿಗಾಗಿ ತಮ್ಮ ಪ್ಯಾನ್ ಅಥವಾ ಆಧಾರ್ ಕಾರ್ಡ್ ಸಂಖ್ಯೆಯನ್ನು ಒದಗಿಸುವುದು ಈಗ ಕಡ್ಡಾಯವಾಗಿದೆ.
ಹೊಸ ಮಾರ್ಗಸೂಚಿಯು ವಾಣಿಜ್ಯ ಬ್ಯಾಂಕ್ಗಳಿಗೆ ಮಾತ್ರವಲ್ಲದೆ ಸಹಕಾರಿ ಬ್ಯಾಂಕ್ಗಳು ಅಥವಾ ಅಂಚೆ ಕಚೇರಿಗಳಿಗೂ ಅನ್ವಯಿಸುತ್ತದೆ. ಬದಲಾದ ನಿಯಮವನ್ನು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು (CBDT) ಮೇ 10 ರ ಅಧಿಸೂಚನೆಯಲ್ಲಿ ಪ್ರಕಟಿಸಿದೆ.
ಹೆಚ್ಚುವರಿಯಾಗಿ, ಒಬ್ಬರು ಒಂದೇ ಹಣಕಾಸು ವರ್ಷದಲ್ಲಿ 20 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ವಿತ್ಡ್ರಾ ಅಥವಾ ಠೇವಣಿ ಮಾಡಲು ಬಯಸಿದರೆ ವಹಿವಾಟುಗಳನ್ನು ಮಾಡುವ ಕನಿಷ್ಠ ಏಳು ದಿನಗಳ ಮೊದಲು ಪ್ಯಾನ್ಗೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ. ಲೆಕ್ಕಕ್ಕೆ ಸಿಗದ ಹಣಕಾಸು ವಹಿವಾಟುಗಳಿಗೆ ಕಡಿವಾಣ ಹಾಕುವುದು ಈ ಹೊಸ ನಿಯಮದ ಹಿಂದಿನ ಪ್ರಮುಖ ಉದ್ದೇಶವಾಗಿದೆ.

ಯಾವೆಲ್ಲಾ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯ?
* ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಅಥವಾ ಆದಾಯ ತೆರಿಗೆ ಅಧಿಕಾರಿಗಳೊಂದಿಗೆ ಯಾವುದೇ ಪತ್ರವ್ಯವಹಾರವನ್ನು ಪ್ರಾರಂಭಿಸಲು ಪ್ಯಾನ್ ಕಡ್ಡಾಯ
* ಬ್ಯಾಂಕ್ ಅಥವಾ ಡಿಮ್ಯಾಟ್ ಖಾತೆ ತೆರೆಯಲು ಅಥವಾ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಪಡೆಯಲು ಪ್ಯಾನ್ ಕಾರ್ಡ್ ಅಗತ್ಯ
* ಮ್ಯೂಚುವಲ್ ಫಂಡ್ಗಳು, ಡಿಬೆಂಚರ್ಗಳು ಅಥವಾ ಬಾಂಡ್ಗಳಲ್ಲಿ ರೂ 50,000 ಕ್ಕಿಂತ ಹೆಚ್ಚು ಹೂಡಿಕೆ ಮಾಡುವಾಗ ಪ್ಯಾನ್ ವಿವರ ಕಡ್ಡಾಯ
* ವಿಮಾದಾರರಿಗೆ ಜೀವ ವಿಮಾ ಪ್ರೀಮಿಯಂನಂತೆ ಆರ್ಥಿಕ ವರ್ಷದಲ್ಲಿ ರೂ 50,000 ಕ್ಕಿಂತ ಹೆಚ್ಚು ಮೊತ್ತದ ಪಾವತಿಗೆ ಪ್ಯಾನ್ ಕಡ್ಡಾಯ
* ಯಾವುದೇ ಒಂದು ದಿನದ ಅವಧಿಯಲ್ಲಿ ರೂ 50,000 ಕ್ಕಿಂತ ಹೆಚ್ಚಿನ ನಗದು ಠೇವಣಿ ಅಥವಾ ರೂ 50,000 ಕ್ಕಿಂತ ಹೆಚ್ಚಿನ ಮೊತ್ತದ ಫಿಕ್ಸಿಡ್ ಡೆಪಾಸಿಟ್ಗಳಿಗೆ ಅಥವಾ ಬ್ಯಾಂಕಿಂಗ್ ಕಂಪನಿ ಅಥವಾ ಸಹಕಾರಿ ಬ್ಯಾಂಕ್, ಅಂಚೆ ಕಛೇರಿ ಅಥವಾ ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಯೊಂದಿಗೆ ಹಣಕಾಸು ವರ್ಷದಲ್ಲಿ 5 ಲಕ್ಷ ರೂ. ವಹಿವಾಟಿಗೆ ಪ್ಯಾನ್
* ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಮೋಟಾರು ವಾಹನ ಅಥವಾ ವಾಹನವನ್ನು ಮಾರಾಟ ಮಾಡುವ ಅಥವಾ ಖರೀದಿಸುವ ಸಮಯದಲ್ಲಿ ಪ್ಯಾನ್ ಅಗತ್ಯ
* ಯಾವುದೇ ವಿದೇಶಕ್ಕೆ ಪ್ರಯಾಣಿಸಲು ಅಥವಾ ಯಾವುದೇ ಒಂದು ಸಮಯದಲ್ಲಿ ಯಾವುದೇ ವಿದೇಶಿ ಕರೆನ್ಸಿಯನ್ನು ಖರೀದಿಸಲು ಪ್ಯಾನ್ ಅಗತ್ಯ
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications