ಕೇಂದ್ರ ಸರ್ಕಾರವು ಇತ್ತೀಚೆಗೆ ಮಂಡನೆ ಮಾಡಿದ 2023-24ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ನಲ್ಲಿ ರೈತರಿಗೆ ಧನ ಸಹಾಯ ಮಾಡುವ ಯೋಜನೆಗಳ ಮೊತ್ತವನ್ನು ಏರಿಕೆ ಮಾಡುವ ನಿರೀಕ್ಷೆಯಿತ್ತು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮೊತ್ತವನ್ನು 6 ಸಾವಿರದಿಂದ 8 ಸಾವಿರಕ್ಕೆ ನಿರೀಕ್ಷೆಯಿತ್ತು. ಆದರೆ ಸರ್ಕಾರ ಯಾವುದೇ ಏರಿಕೆಯನ್ನು ಬಜೆಟ್ನಲ್ಲಿ ಘೋಷಣೆ ಮಾಡಿಲ್ಲ.
ಈ ಬಗ್ಗೆ ಮಂಗಳವಾರ (ಫೆಬ್ರವರ 7) ಸಂಸತ್ತಿನಲ್ಲಿ ಮಾಹಿತಿ ನೀಡಿರುವ ಸರ್ಕಾರವು ಅರ್ಹ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತವನ್ನು ವಾರ್ಷಿಕವಾಗಿ 6 ಸಾವಿರದಿಂದ ಏರಿಕೆ ಮಾಡುವ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ ಎಂದು ಸ್ಪಷ್ಟಣೆ ನೀಡಿದೆ.
ಸರ್ಕಾರವು ರೈತರ ಪಿಎಂ ಕಿಸಾನ್ ಯೋಜನೆಯ ಮೊತ್ತವನ್ನು ಆರು ಸಾವಿರ ರೂಪಾಯಿಯಿಂದ 8 ಸಾವಿರ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆಯಿದೆ. ಮುಖ್ಯವಾಗಿ 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣದಿಂದಾಗಿ ಸರ್ಕಾರವು ಈ ಕ್ರಮವನ್ನು ಕೈಗೊಳ್ಳಬಹುದು ಎಂದು ಮಾಧ್ಯಮಗಳು ವರದಿ ಮಾಡಿತ್ತು. ಹಲವಾರು ತಜ್ಞರುಗಳ ಅಭಿಪ್ರಾಯವೂ ಕೂಡಾ ಇದೇ ಆಗಿತ್ತು.
ಹೋಳಿ ವೇಳೆಗೆ ಮೊತ್ತ ಜಮೆ
ರೈತರ ನಿರಾಸೆ ನೀಡುವ ಘೋಷಣೆಯನ್ನು ಮಾಡುತ್ತಾ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, "ರೈತರ ಕಿಸಾನ್ ಸಮ್ಮಾನ್ ನಿಧಿಯ ಮೊತ್ತವನ್ನು ಏರಿಕೆ ಮಾಡಲು ಪ್ರಸ್ತುತ ಯಾವುದೇ ಪ್ರಸ್ತಾಪವಿಲ್ಲ," ಎಂದು ತಿಳಿಸಿದ್ದಾರೆ. ಪಿಎಂ ಕಿಸಾನ್ ಮೊತ್ತ ಏರಿಸಲಾಗುವುದೇ ಎಂದು ಲೋಕಸಭೆಯಲ್ಲಿ ಪ್ರಶ್ನೆ ಕೇಳಲಾಗಿದ್ದು, ಅದಕ್ಕೆ ಲಿಖಿತ ಉತ್ತರವನ್ನು ಕೇಂದ್ರ ಕೃಷಿ ಸಚಿವರು ನೀಡಿದ್ದಾರೆ. ಆದರೆ ವರದಿಗಳ ಪ್ರಕಾರ ಮುಂದಿನ ಕಂತು ಹೋಳಿ ವೇಳೆಗೆ ಬಿಡುಗೆಯಾಗುವ ನಿರೀಕ್ಷೆಯಿದೆ. ಸಾಮಾನ್ಯವಾಗಿ ಡಿಸೆಂಬರ್ನಿಂದ ಮಾರ್ಚ್ ವೇಳೆಗೆ ಈ ಕಂತನ್ನು ಬಿಡುಗಡೆ ಮಾಡಲಾಗುತ್ತದೆ. ಈ ಅಂದಾಜಿನ ಪ್ರಕಾರ ಹೋಳಿ ವೇಳೆಗೆ ಮೊತ್ತ ಜಮೆಯಾಗುವ ನಿರೀಕ್ಷೆಯಿದೆ.
ಪಿಎಂ ಕಿಸಾನ್ ಯೋಜನೆಯ ಮಾಹಿತಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯನ್ನು 2019ರಲ್ಲಿ ಜಾರಿ ಮಾಡಿದ್ದಾರೆ. ಭೂಮಿಯನ್ನು ಹೊಂದಿರುವ ರೈತರಿಗೆ ಸಹಾಯವ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಮೊತ್ತವನ್ನು ಮೂರು ಕಂತುಗಳಾಗಿ ನೀಡಲಾಗುತ್ತದೆ. ಪ್ರತಿ ಕಂತಿನಲ್ಲಿ 2 ಸಾವಿರ ರೂಪಾಯಿಯಂತೆ ಮೂರು ಕಂತಲ್ಲಿ 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗುತ್ತದೆ. ಅದರಲ್ಲೂ ಕೆಲವು ಮಾನದಂಡಗಳು ಇದೆ.
ಮೊತ್ತ ಏರಿಸುವ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆ
ಬಜೆಟ್ 2023ರಲ್ಲಿ ರೈತರಿಗೆ ಕೇಂದ್ರ ಸರ್ಕಾರವು ಹಲವಾರು ಪ್ರಯೋಜನಕಾರಿ ಯೋಜನೆಗಳನ್ನು ಜಾರಿ ಮಾಡುವ ನಿರೀಕ್ಷೆಯನ್ನು ರೈತರು ಹೊಂದಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮಾಸಿಕ ಕಂತಿನ ಮೊತ್ತವನ್ನು ಏರಿಕೆ ಮಾಡುವ ನಿರೀಕ್ಷೆಯನ್ನು ಕೂಡಾ ರೈತರು ಹೊಂದಿದ್ದರು. ಪ್ರಸ್ತುತ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಮಾಸಿಕವಾಗಿ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕವಾಗಿ ಮೂರು ಕಂತುಗಳಲ್ಲಿ ಆರು ಸಾವಿರ ರೂಪಾಯಿಯನ್ನು ನೀಡಲಾಗುತ್ತಿದೆ. ಆದರೆ ಈ ಮೊತ್ತವನ್ನು ಎಂಟು ಸಾವಿರ ರೂಪಾಯಿಗೆ ಏರಿಕೆ ಮಾಡಬೇಕು ಎಂಬುವುದು ಬೇಡಿಕೆಯಾಗಿತ್ತು. ಈ ಮೊತ್ತವನ್ನು ಎಂಟು ಸಾವಿರಕ್ಕೆ ಏರಿಸಿದಾಗ ನಾಲ್ಕು ಕಂತುಗಳಲ್ಲಿ ಮೊತ್ತವನ್ನು ನೀಡುವ ನಿರೀಕ್ಷೆಯಿತ್ತು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications