PM Kisan: ಪಿಎಂ ಕಿಸಾನ್ ಮೊತ್ತ 8,000 ರೂಪಾಯಿಗೆ ಏರಿಕೆಯಾಗುತ್ತಾ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆ ಅಡಿಯಲ್ಲಿ ಪ್ರತಿ ರೈತರಿಗೆ ನೀಡಲಾಗುವ ಮೊತ್ತವನ್ನು ಸರ್ಕಾರವು ಪರಿಷ್ಕರಣೆ ಮಾಡಲು ಮುಂದಾಗಿದೆ ಎಂದು ಸಿಎನ್‌ಬಿಸಿ-ಟಿವಿ18 ವರದಿ ಮಾಡಿದೆ.

ಪ್ರತಿ ರೈತನಿಗೆ ವಾರ್ಷಿಕವಾಗಿ ನೀಡಲಾಗುವ ಆರು ಸಾವಿರ ರೂಪಾಯಿ ಮೊತ್ತವನ್ನು ಎಂಟು ಸಾವಿರ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ವರದಿಯು ಉಲ್ಲೇಖಿಸಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ನಿಬಂಧನೆಗಳನ್ನು ಹೆಚ್ಚಿಸಲು ಸರ್ಕಾರವು ಚಿಂತನೆ ನಡೆಸಿದೆ. ಇವುಗಳ ಬಗ್ಗೆ ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ವರದಿ ಹೇಳಿದೆ.

 ಪಿಎಂ ಕಿಸಾನ್ ಮೊತ್ತ 8,000 ರೂಪಾಯಿಗೆ ಏರಿಕೆಯಾಗುತ್ತಾ?

ಪಿಎಂ-ಕಿಸಾನ್ ಯೋಜನೆಯು ದೇಶದ ಎಲ್ಲಾ ರೈತರ ಕುಟುಂಬಗಳಿಗೆ ಆದಾಯದ ಬೆಂಬಲವನ್ನು ಒದಗಿಸುವ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯು ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಆಹಾರಧಾನ್ಯಗಳನ್ನು ಒದಗಿಸುವು ಯೋಜನೆಯಾಗಿದೆ.

ಸರ್ಕಾರವು ಫೆಬ್ರವರಿ 2024 ಮತ್ತು ಮಾರ್ಚ್ 2024 ರ ನಡುವೆ ಪಿಎಂ ಕಿಸಾನ್ ಯೋಜನೆಯ 16ನೇ ಕಂತನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆಯನ್ನು ಒದಗಿಸಿಲ್ಲ. ಕೇಂದ್ರವು ನವೆಂಬರ್ 15, 2023 ರಂದು ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿತು.

ಈ ನಡುವೆ 2024 ರ ಮಧ್ಯಂತರ ಬಜೆಟ್‌ನಲ್ಲಿ ಬಡವರು, ರೈತರು, ಯುವಕರು ಮತ್ತು ಮಹಿಳೆಯರಿಗೆ ಹೆಚ್ಚುವರಿ ಬೆಂಬಲ ಕ್ರಮಗಳನ್ನು ಒದಗಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಮೂಲಗಳ ಪ್ರಕಾರ, ಸರ್ಕಾರಿ ಇಲಾಖೆಗಳು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಹಣಕಾಸಿನ ನೆರವನ್ನು ಹೆಚ್ಚಿಸುವ ಉದ್ದೇಶದಿಂದ ಯೋಜನೆಗಳನ್ನು ರೂಪಿಸುತ್ತಿವೆ.

ಫೆಬ್ರವರಿ 1 ರ ಬಜೆಟ್ ಪ್ರಧಾನವಾಗಿ ಮಧ್ಯಂತರ ಬಜೆಟ್ ಆಗಿರುವ ಕಾರಣ ಯಾವುದೇ ಪ್ರಮುಖ ಘೋಷಣೆಗಳನ್ನು ಹೊಂದಿರುವುದಿಲ್ಲ. ವೋಟ್ ಆನ್ ಅಕೌಂಟ್ ರೀತಿಯಲ್ಲಿ ಎಂದು ಹಣಕಾಸು ಸಚಿವರು ಇತ್ತೀಚಿನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇಲ್ಲಿ ಪಿಎಂ ಕಿಸಾನ್ ಮೊತ್ತ 12,000 ರೂಪಾಯಿ!

ಈ ಹಿಂದೆ ರಾಜಸ್ಥಾನದಲ್ಲಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿರುವ ರಾಜಸ್ಥಾನದ ರೈತರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವರ್ಷಕ್ಕೆ 12,000 ರೂಪಾಯಿ ನೀಡಲಿದೆ ಎಂದು ಪ್ರಧಾನಿ ಮೋದಿ ರಾಜಸ್ಥಾನದ ರೈತರಿಗೆ ತಿಳಿಸಿದ್ದಾರೆ.

"ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಈ ಹಿಂದೆ ವಾರ್ಷಿಕವಾಗಿ ಆರು ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಆದರೆ ಈ ಮೊತ್ತವನ್ನು ಹನ್ನೆರಡು ಸಾವಿರ ರೂಪಾಯಿಗೆ ಏರಿಸಲು ರಾಜಸ್ಥಾನ ಬಿಜೆಪಿ ನಿರ್ಧರಿಸಿದೆ," ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ಮೋದಿ ಮತ್ತೊಂದು ಭರವಸೆ ನೀಡಿದ್ದು, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದರು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+