ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆ ಅಡಿಯಲ್ಲಿ ಪ್ರತಿ ರೈತರಿಗೆ ನೀಡಲಾಗುವ ಮೊತ್ತವನ್ನು ಸರ್ಕಾರವು ಪರಿಷ್ಕರಣೆ ಮಾಡಲು ಮುಂದಾಗಿದೆ ಎಂದು ಸಿಎನ್ಬಿಸಿ-ಟಿವಿ18 ವರದಿ ಮಾಡಿದೆ.
ಪ್ರತಿ ರೈತನಿಗೆ ವಾರ್ಷಿಕವಾಗಿ ನೀಡಲಾಗುವ ಆರು ಸಾವಿರ ರೂಪಾಯಿ ಮೊತ್ತವನ್ನು ಎಂಟು ಸಾವಿರ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ವರದಿಯು ಉಲ್ಲೇಖಿಸಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ನಿಬಂಧನೆಗಳನ್ನು ಹೆಚ್ಚಿಸಲು ಸರ್ಕಾರವು ಚಿಂತನೆ ನಡೆಸಿದೆ. ಇವುಗಳ ಬಗ್ಗೆ ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ವರದಿ ಹೇಳಿದೆ.

ಪಿಎಂ-ಕಿಸಾನ್ ಯೋಜನೆಯು ದೇಶದ ಎಲ್ಲಾ ರೈತರ ಕುಟುಂಬಗಳಿಗೆ ಆದಾಯದ ಬೆಂಬಲವನ್ನು ಒದಗಿಸುವ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯು ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಆಹಾರಧಾನ್ಯಗಳನ್ನು ಒದಗಿಸುವು ಯೋಜನೆಯಾಗಿದೆ.
ಸರ್ಕಾರವು ಫೆಬ್ರವರಿ 2024 ಮತ್ತು ಮಾರ್ಚ್ 2024 ರ ನಡುವೆ ಪಿಎಂ ಕಿಸಾನ್ ಯೋಜನೆಯ 16ನೇ ಕಂತನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆಯನ್ನು ಒದಗಿಸಿಲ್ಲ. ಕೇಂದ್ರವು ನವೆಂಬರ್ 15, 2023 ರಂದು ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿತು.
ಈ ನಡುವೆ 2024 ರ ಮಧ್ಯಂತರ ಬಜೆಟ್ನಲ್ಲಿ ಬಡವರು, ರೈತರು, ಯುವಕರು ಮತ್ತು ಮಹಿಳೆಯರಿಗೆ ಹೆಚ್ಚುವರಿ ಬೆಂಬಲ ಕ್ರಮಗಳನ್ನು ಒದಗಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಮೂಲಗಳ ಪ್ರಕಾರ, ಸರ್ಕಾರಿ ಇಲಾಖೆಗಳು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್ಎಂಇ) ಹಣಕಾಸಿನ ನೆರವನ್ನು ಹೆಚ್ಚಿಸುವ ಉದ್ದೇಶದಿಂದ ಯೋಜನೆಗಳನ್ನು ರೂಪಿಸುತ್ತಿವೆ.
ಫೆಬ್ರವರಿ 1 ರ ಬಜೆಟ್ ಪ್ರಧಾನವಾಗಿ ಮಧ್ಯಂತರ ಬಜೆಟ್ ಆಗಿರುವ ಕಾರಣ ಯಾವುದೇ ಪ್ರಮುಖ ಘೋಷಣೆಗಳನ್ನು ಹೊಂದಿರುವುದಿಲ್ಲ. ವೋಟ್ ಆನ್ ಅಕೌಂಟ್ ರೀತಿಯಲ್ಲಿ ಎಂದು ಹಣಕಾಸು ಸಚಿವರು ಇತ್ತೀಚಿನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಇಲ್ಲಿ ಪಿಎಂ ಕಿಸಾನ್ ಮೊತ್ತ 12,000 ರೂಪಾಯಿ!
ಈ ಹಿಂದೆ ರಾಜಸ್ಥಾನದಲ್ಲಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿರುವ ರಾಜಸ್ಥಾನದ ರೈತರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವರ್ಷಕ್ಕೆ 12,000 ರೂಪಾಯಿ ನೀಡಲಿದೆ ಎಂದು ಪ್ರಧಾನಿ ಮೋದಿ ರಾಜಸ್ಥಾನದ ರೈತರಿಗೆ ತಿಳಿಸಿದ್ದಾರೆ.
"ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಈ ಹಿಂದೆ ವಾರ್ಷಿಕವಾಗಿ ಆರು ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಆದರೆ ಈ ಮೊತ್ತವನ್ನು ಹನ್ನೆರಡು ಸಾವಿರ ರೂಪಾಯಿಗೆ ಏರಿಸಲು ರಾಜಸ್ಥಾನ ಬಿಜೆಪಿ ನಿರ್ಧರಿಸಿದೆ," ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ಮೋದಿ ಮತ್ತೊಂದು ಭರವಸೆ ನೀಡಿದ್ದು, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದರು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications