ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (PMMVY) ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯವನ್ನು ಹೆಚ್ಚಿಸುವ ಪ್ರಾಥಮಿಕ ಉದ್ದೇಶದೊಂದಿಗೆ ಪ್ರಾರಂಭಿಸಿರುವ ಭಾರತ ಸರ್ಕಾರದ ಯೋಜನೆಯಾಗಿದೆ. ಅಪೌಷ್ಟಿಕತೆ, ರಕ್ತಹೀನತೆ, ಶಿಶುಮರಣ, ಬಾಣಂತಿಯರ ಮರಣವನ್ನು ತಡೆಯುವ ನಿಟ್ಟಿನಲ್ಲಿ ಭಾರತ ಸರ್ಕಾರ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಮೂಲ ಉದ್ದೇಶವಾಗಿದೆ.
ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ, ಈ ಯೋಜನೆ ವೈದ್ಯಕೀಯ ಚಿಕಿತ್ಸೆ ಮತ್ತು ಔಷಧೀಯ ವೆಚ್ಚಗಳಿಗೆ ಸಂಬಂಧಿಸಿದ ಆರ್ಥಿಕ ಒತ್ತಡವನ್ನು ನಿವಾರಿಸಲು ಉದ್ದೇಶಿಸಿದೆ ಮತ್ತು ಅದರಿಂದಾಗುವ ಪರಿಣಾಮಗಳನ್ನು ತಗ್ಗಿಸುತ್ತದೆ. ಈ ಯೋಜನೆ ತಾಯಿಯಾಗುವ ಮಹಿಳೆಗೆ ಹೇಗೆ ಪ್ರಯೋಜನಕಾರಿ ಮತ್ತು ಅದರ ಪ್ರಭಾವಗಳ ವಿವರ ಇಲ್ಲಿದೆ.

ಪಿಎಂಎಂವಿವೈ ಯೋಜನೆ ಹೇಗೆ ಕೆಲಸ ಮಾಡುತ್ತದೆ?
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಅಥವಾ ಪಿಎಂಎಂವಿವೈ ಯೋಜನೆಯ ಚೌಕಟ್ಟಿನೊಳಗೆ ಬರುವ ಅರ್ಹ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೂರು ಕಂತುಗಳಲ್ಲಿ ಒಟ್ಟು 5000 ರೂಪಾಯಿ ನಗದು ಸಹಾಯಧನವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಗರ್ಭಧಾರಣೆಯ ನೋಂದಣಿಯ ಹಂತದಲ್ಲಿ ಆರಂಭಿಕ ಕಂತಿನ ರೂಪದಲ್ಲಿ 1,000 ರೂಪಾಯಿ ಅನ್ನು ನೀಡಲಾಗುತ್ತದೆ.
ಇನ್ನು ಎರಡನೇ ಕಂತಿನ 2000 ರೂಪಾಯಿ ಸಹಾಯಧನವನ್ನು ಗರ್ಭಧಾರಣೆಯ 6 ತಿಂಗಳ ನಂತರ ಕನಿಷ್ಠ ಒಂದು ಬಾರಿ ಪ್ರಸವಪೂರ್ವ ವೈದ್ಯಕೀಯ ತಪಾಸಣೆಯ ನಂತರ ಪಾವತಿಸಲಾಗುತ್ತದೆ. ಮಗುವಿನ ಜನನ ಅಧಿಕೃತವಾಗಿ ನೋಂದಣಿಯ ನಂತರ ಮೂರನೇ ಮತ್ತು ಅಂತಿಮ ಕಂತು 2,000 ರೂಪಾಯಿ ಪಾವತಿಸಲಾಗುತ್ತದೆ.
ಪಿಎಂಎಂವಿವೈಗೆ ಯಾರು ಅರ್ಹರು?
ದಿನಕೂಲಿ ಗಳಿಸುವ ಅಥವಾ ಆರ್ಥಿಕವಾಗಿ ಅಬಲರಾಗಿರುವ ಮಹಿಳೆಯರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಪರಿಚಯಿಸಲಾಗಿದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಆಗುವ ವೇತನ ನಷ್ಟವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ ಮಾತ್ರವಲ್ಲದೇ ಈ ಅವಧಿಯಲ್ಲಿ ಮಹಿಳೆಯರಿಗೆ ಅಗತ್ಯವಾದ ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆಗೆ ಸಹಾಯಕವಾಗುತ್ತದೆ.
ಈ ಯೋಜನೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಉದ್ಯೋಗದಲ್ಲಿರುವ ಮಹಿಳೆಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.ಇದಲ್ಲದೆ, ಈ ಯೋಜನೆಯಡಿಯಲ್ಲಿ ಉಳಿದಿರುವ ಮೊದಲ ಮಗು ಮಾತ್ರ ಪ್ರಯೋಜನಗಳಿಗೆ ಅರ್ಹವಾಗಿರುತ್ತದೆ ಅಂದರೆ ಫಲಾನುಭವಿಯು ಯೋಜನೆಯಡಿ ಒಮ್ಮೆ ಮಾತ್ರ ಪ್ರಯೋಜನಗಳನ್ನು ಪಡೆಯಲು ಅರ್ಹನಾಗಿರುತ್ತಾಳೆ.
ಪಿಎಂಎಂವಿವೈ ಯೋಜನೆ ಭಾರತದಲ್ಲಿ ತಾಯಿಯ ಆರೋಗ್ಯದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಈ ಕಾರ್ಯಕ್ರಮವು ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ಆರೈಕೆ ಪಡೆದುಕೊಳ್ಳಲು ಸಹಾಯ ಮಾಡಿದೆ. ಮಾತ್ರವಲ್ಲದೇ ಅಪೌಷ್ಟಿಕತೆಯಿಂದಾಗುವ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಿದ್ದು ಒಟ್ಟಾರೆ ಶಿಶು ಮತ್ತು ತಾಯಿಯ ಆರೋಗ್ಯವನ್ನು ಸುಧಾರಿಸಿದೆ.
ಇದಲ್ಲದೆ, ಯೋಜನೆಯಿಂದ ದೊರಕುವ ಆರ್ಥಿಕ ಪ್ರೋತ್ಸಾಹ ಗರ್ಭಿಣಿಯರು ಮತ್ತು ಅವರ ಕುಟುಂಬಗಳ ಮೇಲಿನ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಿದೆ. ಚಿಕಿತ್ಸೆ ಮತ್ತು ಔಷಧಿ ವೆಚ್ಚಗಳ ಹೆಚ್ಚುವರಿ ಒತ್ತಡವಿಲ್ಲದೆ ವಿಶ್ರಾಂತಿ ಮತ್ತು ಸ್ವಯಂ-ಆರೈಕೆಯ ಮೇಲೆ ಕೇಂದ್ರೀಕರಿಸಲು ಈ ಯೋಜನೆ ಉಪಕಾರಿಯಾಗಿದೆ. ಪ್ರಧಾನ ಮಂತ್ರಿ ಮಾತೃ ಯೋಜನೆಯ ವಿವರವಾದ ಮಾಹಿತಿ ಪಡೆಯಲು ನಿಮ್ಮ ಸಮೀಪದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಥವಾ ಆಶಾ ಕಾರ್ಯಕರ್ತೆಯರ ಸಹಾಯವನ್ನೂ ಪಡೆಯಬಹುದಾಗಿದೆ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications