ನೀವು ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹಣವನ್ನು ಹೂಡಿಕೆ ಮಾಡಿದ್ದರೆ ಮತ್ತು ಹೂಡಿಕೆ ಮಾಡಲು ಬಯಸಿದ್ದರೆ ಗುಡ್ನ್ಯೂಸ್ ಇಲ್ಲಿದೆ. 2021 ರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳಲ್ಲಿ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ. ಇದರೊಂದಿಗೆ, ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಒಂದೇ ಆಗಿವೆ.
ಹೌದು, ಎಫ್ಡಿಯಂತಹ ಇತರ ಹೂಡಿಕೆ ಆಯ್ಕೆಗಳ ಮೇಲಿನ ಬಡ್ಡಿದರಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಂಚೆ ಕಚೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ, ಪೋಸ್ಟ್ ಆಫೀಸ್ ಬಡ್ಡಿದರ ಕಡಿತವನ್ನು ಅಂದಾಜಿಸಲಾಗಿದೆ. ಹಾಗಿದ್ದರೆ ಎಲ್ಲಾ ಯೋಜನೆಗಳ ಬಡ್ಡಿದರಗಳೆಷ್ಟು ಮತ್ತು ಎಷ್ಟು ತಿಂಗಳುಗಳಲ್ಲಿ ಹಣ ದ್ವಿಗುಣಗೊಳ್ಳುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ.
ಅಂಚೆ ಕಚೇರಿ ಯೋಜನೆಗಳ ಬಡ್ಡಿದರಗಳು
ಪ್ರಸ್ತುತ, ಸುಕನ್ಯಾ ಸಮೃದ್ಧಿ ಯೋಜನೆ ಶೇಕಡಾ 7.6ರಷ್ಟು, ಹಿರಿಯ ನಾಗರಿಕರ ಉಳಿತಾಯ ಯೋಜನೆ ಶೇಕಡಾ 7.4ರಷ್ಟು, ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಶೇಕಡಾ 7.1, ಕಿಸಾನ್ ವಿಕಾಸ್ ಪತ್ರ (ಕೆವಿಪಿ) ಶೇಕಡಾ 6.9, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್ಎಸ್ಸಿ) ಶೇಕಡಾ 6.8, ಮಾಸಿಕ ಆದಾಯ ಯೋಜನೆ (ಎಂಐಎಸ್) ಶೇಕಡಾ 6.6, ಅಂಚೆ ಕಚೇರಿಉಳಿತಾಯ ಖಾತೆ ಶೇಕಡಾ 4, ಅಂಚೆ ಕಚೇರಿ ಮರುಕಳಿಸುವ ಠೇವಣಿ (ಆರ್ಡಿ) ಶೇ. 5.8 ಮತ್ತು ಹಿರಿಯ ನಾಗರಿಕ ಉಳಿತಾಯ ಯೋಜನೆ ಶೇಕಡಾ 7.4 ಬಡ್ಡಿದರವಿದೆ.
ಅಂಚೆ ಕಚೇರಿ ಠೇವಣಿಯ ಮೇಲಿನ ಬಡ್ಡಿದರಗಳು
ಪೋಸ್ಟ್ ಆಫೀಸ್ ಸಮಯ ಠೇವಣಿ (ಟಿಡಿ) 1 ವರ್ಷಕ್ಕೆ ಶೇ. 5.5, 2 ವರ್ಷಗಳಲ್ಲಿ ಶೇಕಡಾ 5.5, 3 ವರ್ಷಗಳಲ್ಲಿ ಶೇಕಡಾ 5.5 ಮತ್ತು 5 ವರ್ಷಗಳಲ್ಲಿ ಶೇಕಡಾ 6.7ರಷ್ಟು ಬಡ್ಡಿಯನ್ನು ನೀಡುತ್ತದೆ.
ಕಿಸಾನ್ ವಿಕಾಸ್ ಪತ್ರ
ಈ ಯೋಜನೆಯಲ್ಲಿ ಪ್ರಸ್ತುತ ಬಡ್ಡಿದರವು ಶೇಕಡಾ 6.9 ಆಗಿದೆ. ಈ ಬಡ್ಡಿದರ 2020 ರ ಏಪ್ರಿಲ್ 1 ರಿಂದ ಅನ್ವಯವಾಗುತ್ತದೆ ಮತ್ತು ಈಗ ಜುಲೈ-ಸೆಪ್ಟೆಂಬರ್ ತ್ರೈಮಾಸಿಕಕ್ಕೂ ಮುಂದುವರಿಯುತ್ತದೆ. ನೀವು ಕೆವಿಪಿಯಲ್ಲಿ ಠೇವಣಿ ಇಟ್ಟ ಹಣವನ್ನು 124 ತಿಂಗಳುಗಳಲ್ಲಿ (10 ವರ್ಷ ಮತ್ತು 4 ತಿಂಗಳು) ದ್ವಿಗುಣಗೊಳ್ಳಲಿದೆ. ಈ ಯೋಜನೆಯಲ್ಲಿ ನಿಮ್ಮ ಹಣವು ಸುರಕ್ಷಿತವಾಗಿರುತ್ತದೆ, ಏಕೆಂದರೆ ಇದು ಸರ್ಕಾರಿ ಯೋಜನೆಯಾಗಿದೆ.
ಬಡ್ಡಿದರಗಳು ಯಾವಾಗ ಬದಲಾಗಬಹುದು?
ಅಂಚೆ ಕಚೇರಿ ಉಳಿತಾಯ ಯೋಜನೆಗಳ ಬಡ್ಡಿದರಗಳ ಪರಿಶೀಲನೆಯನ್ನು ಸೆಪ್ಟೆಂಬರ್ 2021ರ ಕೊನೆಯಲ್ಲಿ ಮಾಡಲಾಗುತ್ತದೆ. ನಂತರ 2021 ರ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಬಡ್ಡಿದರಗಳನ್ನು ನಿರ್ಧರಿಸಲಾಗುತ್ತದೆ. ಅಂಚೆ ಕಚೇರಿಉಳಿತಾಯ ಯೋಜನೆಗಳಲ್ಲಿ ಗಳಿಸಿದ ಬಡ್ಡಿಯನ್ನು ಪ್ರತಿ ತ್ರೈಮಾಸಿಕದಲ್ಲಿ ಪರಿಶೀಲಿಸಲಾಗುತ್ತದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications