ರುಪೇ ಕ್ರೆಡಿಟ್ ಕಾರ್ಡ್ ಮೂಲಕ ಯುಪಿಐ ಪಾವತಿ ಮಾಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಸಮ್ಮತಿಸಿದೆ. ಇಂದು (ಜೂನ್ 8) ನಡೆದ ಪತ್ರಿಕಾಗೋಷ್ಠಿಯಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
"ಭಾರತದಲ್ಲಿ ಯುಪಿಐ ಅತೀ ಪ್ರಮುಖವಾದ ಪಾವತಿ ವಿಧಾನವಾಗಿದೆ. ಪ್ರಸ್ತುತ ಸುಮಾರು 26 ಕೋಟಿ ಜನರು ಹಾಗೂ ಐದು ಕೋಟಿ ವ್ಯಾಪಾರಿಗಳು ಯುಪಿಐ ಪಾವತಿಯನ್ನು ಅವಲಂಭಿಸಿದ್ದಾರೆ," ಎಂದು ಈ ಸಂದರ್ಭದಲ್ಲೇ ಆರ್ಬಿಐ ಹೇಳಿಕೆಯಲ್ಲಿ ಉಲ್ಲೇಖ ಮಾಡಿದ್ದಾರೆ.
ಮೇ 2022ರಲ್ಲೇ ಯುಪಿಐ ಬಳಕೆ ಮಾಡಿ ಸುಮಾರು 10.40 ಲಕ್ಷ ಕೋಟಿ ರೂಪಾಯಿ ಮೌಲ್ಯದ, 594.63 ಕೋಟಿ ವಹಿವಾಟು ನಡೆಸಲಾಗಿದೆ. ಈ ಡಿಜಿಟಲ್ ವ್ಯವಸ್ಥೆಯನ್ನು ಇನ್ನಷ್ಟು ವಿಸ್ತಾರ ಮಾಡುವ ನಿಟ್ಟಿನಲ್ಲಿ ನಾವು ರುಪೇ ಕ್ರೆಡಿಟ್ ಕಾರ್ಡ್ ಮೂಲಕ ಯುಪಿಐ ಪಾವತಿಗೆ ಅವಕಾಶ ನೀಡುತ್ತಿದ್ದೇವೆ. ಇದರಿಂದಾಗಿ ಇನ್ನಷ್ಟು ಅಧಿಕ ಮಂದಿ ಯುಪಿಐ ಪಾವತಿ ವಿಧಾನ ಬಳಕೆಯಲ್ಲಿ ತೊಡಗಲಿದ್ದಾರೆ ಎಂದು ಕೂಡಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆರಂಭದಲ್ಲಿ ಬ್ಯಾಂಕ್ ಖಾತೆಗೆ ಯುಪಿಐ ಲಿಂಕ್ ಮಾಡುವ ಮೂಲಕ ಯುಪಿಐ ಬಳಕೆ ಮಾಡಲಾಗುತ್ತಿತ್ತು. ಆದರೆ ಬಳಿಕ ಯುಪಿಐ ಆಪ್ಗಳು ಆರಂಭವಾಗಿದೆ. ಡೆಬಿಟ್, ಕ್ರೆಡಿಟ್ ಕಾರ್ಡ್ ಲಿಂಕ್ ಮಾಡಿ ಯುಪಿಐ ಪಾವತಿ ಮಾಡಲು ಆರಂಭಿಸಲಾಯಿತು. ಆದರೆ ಇದು ವ್ಯಾಪಾರಿಗಳಿಗೆ ವಹಿವಾಟು ಮಾಡಲು ಮಾತ್ರ ಸಾಧ್ಯವಾಗಲಿದೆ.

ಗೂಗಲ್ ಪೇಗೆ ಕ್ರೆಡಿಟ್, ಡೆಬಿಟ್ ಕಾರ್ಡ್ ಲಿಂಕ್ ಹೇಗೆ?
ಹಂತ 1: ಅಪ್ಲಿಕೇಶನ್ ತೆರೆಯಿರಿ ಮತ್ತು ನಿಮ್ಮ ಪ್ರೊಫೈಲ್ ಚಿತ್ರದ ಮೇಲೆ ಕ್ಲಿಕ್ ಮಾಡಿ.
ಹಂತ 2: ಪಾವತಿ ವಿಧಾನಗಳ ಮೇಲೆ ಕ್ಲಿಕ್ ಮಾಡಿ.
ಹಂತ 3: ಅಪ್ಲಿಕೇಶನ್ನಲ್ಲಿ ಸೇರಿಸಲಾದ ಪ್ರಸ್ತುತ ಬ್ಯಾಂಕ್ ಖಾತೆಗಳನ್ನು ಅಪ್ಲಿಕೇಶನ್ ತೋರಿಸುತ್ತದೆ.
ಹಂತ 4: ಗೂಗಲ್ ಪೇನಲ್ಲಿ ನಿಮ್ಮ ಕಾರ್ಡ್ ಅನ್ನು ಸೇರಿಸಲು 'Add credit or debit card' ಮೇಲೆ ಕ್ಲಿಕ್ ಮಾಡಿ
ಹಂತ 5: ನಿಮ್ಮ ಕಾರ್ಡ್ ಸಂಖ್ಯೆ, ಮುಕ್ತಾಯ ದಿನಾಂಕ, ಸಿವಿವಿ ನಮೂದಿಸಿ
ಹಂತ 6: ಹೆಸರು ಮತ್ತು ಬಿಲ್ಲಿಂಗ್ ವಿಳಾಸವನ್ನು ನಮೂದಿಸಿ Save ಕ್ಲಿಕ್ ಮಾಡಿ.
ಹಂತ 7: ನೀವು ನಿಯಮಗಳು ಮತ್ತು ಷರತ್ತುಗಳನ್ನು ಒಪ್ಪಿಕೊಳ್ಳಬೇಕು
ಹಂತ 8: 'Activate' ಕ್ಲಿಕ್ ಮಾಡಬೇಕು, ಒಟಿಪಿ ಬರಲಿದ್ದು ಅದನ್ನು ನಮೂದಿಸಿದರೆ ಪ್ರಕ್ರಿಯೆ ಪೂರ್ಣ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications