ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಮೇಲೆ ದಂಡವನ್ನು ವಿಧಿಸಿದೆ. ಕೇಂದ್ರ ಬ್ಯಾಂಕ್ನ ಕೆಲವು ನಿರ್ದೇಶನಗಳನ್ನು ಅನುಸರಿಸದ ಕಾರಣಕ್ಕಾಗಿ ಸುಮಾರು 57.50 ಲಕ್ಷ ವಿತ್ತೀಯ ದಂಡವನ್ನು ವಿಧಿಸಿದೆ ಎಂದು ತಿಳಿಸಿದೆ.
ಎಟಿಎಂ ಕಾರ್ಡ್ ಕ್ಲೋನಿಂಗ್ ಮತ್ತು ಸ್ಕಿಮ್ಮಿಂಗ್ ಒಳಗೊಂಡ ವಂಚನೆಗಳ ಕೆಲವು ಘಟನೆಗಳು ಪತ್ತೆಯಾದ ಮೂರು ವಾರದ ಒಳಗಾಗಿ ಆರ್ಬಿಐಗೆ ಈ ಬಗ್ಗೆ ವರದಿ ಸಲ್ಲಿಸಲು ಇಂಡಿಯನ್ ಓವರ್ಸೀಸ್ ಬ್ಯಾಂಕ್ ವಿಫಲವಾಗಿದೆ ಎಂದು ಕೇಂದ್ರ ಬ್ಯಾಂಕ್ ಅಧಿಸೂಚನೆಯಲ್ಲಿ ತಿಳಿಸಿದೆ.
ಇನ್ನು ಈ ಬ್ಯಾಂಕ್ ಕೆಲವು ಬದಲಾಗುವ ಸಾಲದ ದರಗಳನ್ನು ಮೈಕ್ರೋ ಮತ್ತು ಸಣ್ಣ ಉದ್ಯಮಗಳಿಗೆ ಲಿಂಕ್ ಮಾಡಿದೆ. ಬಾಹ್ಯ ಮಾನದಂಡದ ಬದಲಿಗೆ ಅಕ್ಟೋಬರ್ 1, 2019 ರಂದು ಅಥವಾ ನಂತರ ಎಂಸಿಎಲ್ಆರ್ ಅದನ್ನು ವಿಸ್ತರಿಸಲಾಗಿದೆ.

ಆರ್ಬಿಐ ನೀಡಿದ ನಿರ್ದೇಶನಗಳನ್ನು ಅನುಸರಿಸಲು ವಿಫಲವಾದ ಕಾರಣಕ್ಕೆ ದಂಡವನ್ನು ಏಕೆ ವಿಧಿಸಬಾರದು ಎಂದು ಬ್ಯಾಂಕ್ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. "ನೋಟಿಸ್ಗೆ ಬ್ಯಾಂಕ್ನ ಉತ್ತರವನ್ನು ಪರಿಗಣಿಸಿದ ನಂತರ ಮತ್ತು ಹೆಚ್ಚುವರಿ ವರದಿಯನ್ನು ಪರಿಶೀಲಿಸಿದ ನಂತರ ಆರ್ಬಿಐ ಮೇಲಿನ ನಿರ್ದೇಶನಗಳನ್ನು ಅನುಸರಿಸದಿರುವ ಆರೋಪವನ್ನು ಸಮರ್ಥಿಸುತ್ತದೆ. ವಿತ್ತೀಯ ದಂಡವನ್ನು ವಿಧಿಸಲು ಸಮರ್ಥವಾಗಿದೆ ಎಂಬ ತೀರ್ಮಾನಕ್ಕೆ ಬಂದಿದೆ," ಎಂದು ಆರ್ಬಿಐ ಹೇಳಿದೆ.
ಈ ಹಿಂದೆ ಹಲವಾರು ಬ್ಯಾಂಕ್ಗಳ ಮೇಲೆ ದಂಡ ವಿಧಿಸಿದ ಆರ್ಬಿಐ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಈ ಹಿಂದೆ ಫೆಬ್ರವರಿಯಲ್ಲಿ ಮೂರು ಸಹಕಾರಿ ಬ್ಯಾಂಕ್ಗಳಿಗೆ ದಂಡ ವಿಧಿಸಿದೆ. ತಮಿಳುನಾಡಿನ ಎರಡು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಬ್ಯಾಂಕ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಂಡವನ್ನು ವಿಧಿಸಿದೆ.
ದಿ ಬಿಗ್ ಕಾಂಚೀಪುರಂ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿಮಿಟೆಡ್-ಕಾಂಚಿಪುರಂ, ಚೆನ್ನೈ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಮತ್ತು ದಿ ಬಾರಾಮುಲ್ಲಾ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಬ್ಯಾಂಕುಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಂಡವನ್ನು ವಿಧಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications