ಜನವರಿ ತಿಂಗಳು ಕೊನೆಯಾಗುತ್ತಿದ್ದು ಫೆಬ್ರವರಿ ತಿಂಗಳು ಆರಂಭವಾಗಲು ಇನ್ನು ಎರಡೇ ದಿನಗಳ ಬಾಕಿ ಉಳಿದಿದೆ. ಈ ವರ್ಷದ ಮೊದಲ ತಿಂಗಳು ಕೊನೆಯಾಗುತ್ತಿದ್ದು ನಾವು ಹೊಸ ತಿಂಗಳು ಆರಂಭಕ್ಕೆ ಕಾಯುತ್ತಿದ್ದೇವೆ. ಈ ತಿಂಗಳಲ್ಲಿ ಎಲ್ಪಿಜಿ ದರ ಸೇರಿದಂತೆ ಹಲವಾರು ಹಣಕಾಸು ಸಂಬಂಧಿತ ಬದಲಾವಣೆಗಳು ಆಗಲಿದೆ. ಹೊಸ ತಿಂಗಳಿನಲ್ಲಿ ಆಗುವ ಈ ಬದಲಾವಣೆಗಳು ಖಚಿತವಾಗಿಯೂ ನಿಮ್ಮ ವೈಯಕ್ತಿಕ ಹಣಕಾಸಿನ ಮೇಲೆ ಪರಿಣಾಮ ಉಂಟು ಮಾಡಲಿದೆ.
ಪ್ರಮುಖವಾಗಿ ಹೊಸ ತಿಂಗಳ ಮೊದಲ ದಿನವೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-2024ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಈ ಬಜೆಟ್ ಮಂಡನೆ ಪ್ರಮುಖವಾಗಿ ನಿಮ್ಮ ಹಣಕಾಸಿನ ಮೇಲೆ ಪ್ರಭಾವ ಉಂಟು ಮಾಡುವ ನಿರೀಕ್ಷೆಯಿದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಬರುವ, ಮೋದಿ ಸರ್ಕಾರದ ಈ ಆಡಳಿತಾವಧಿ ಕೊನೆಯ ಬಜೆಟ್ ಇದಾದ ಕಾರಣ ಜನರು ಈ ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳನ್ನು ಹೊಂದಿದ್ದಾರೆ.
ಬಜೆಟ್ ವೇಳೆ ಮಾಡುವ ಎಲ್ಲ ಘೋಷಣೆಗಳು ಮುಂದಿನ ಹಣಕಾಸು ವರ್ಷ ಅಂದರೆ ಏಪ್ರಿಲ್ 1ರಿಂದ ಪ್ರಭಾವ ಬೀರಲಿದೆ. ಹಾಗೆಯೇ ಫೆಬ್ರವರಿ ತಿಂಗಳಿನಲ್ಲೂ ಕೆಲವೊಂದು ಬದಲಾವಣೆ ಉಂಟು ಮಾಡುವ ನಿರೀಕ್ಷೆಯಿದೆ. ಬಜೆಟ್ನಿಂದ ಜನರು ಹಲವಾರು ನಿರೀಕ್ಷೆಗಳನ್ನು ಹೊಂದಿದ್ದಾರೆ. ಆದರೆ ಅದಕ್ಕೂ ಮುನ್ನ ಫೆಬ್ರವರಿಯಲ್ಲಿ ಹಲವಾರು ಬದಲಾವಣೆಗಳು ಉಂಟಾಗಲಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ...
ಬಿಒಬಿ ಕ್ರೆಡಿಟ್ ಕಾರ್ಡ್ ಶುಲ್ಕ
ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಕ್ರೆಡಿಟ್ ಕಾರ್ಡ್ದಾರರು ಕ್ರೆಡಿಟ್ ಕಾರ್ಡ್ ಮೂಲಕ ಬಾಡಿಗೆ ಪಾವತಿ ವಹಿವಾಟನ್ನು ನಡೆಸಿದರೆ ಶೇಕಡ 1ರಷ್ಟು ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಈ ನೂತನ ನಿಯಮವು ಫೆಬ್ರವರಿ 1, 2023ರಿಂದ ಜಾರಿಗೆ ಬರುತ್ತದೆ. ವ್ಯಕ್ತಿಯು ಬಿಒಬಿ ಕ್ರೆಡಿಟ್ ಕಾರ್ಡ ಬಳಸಿ 10,500 ರೂಪಾಯಿ ಬಾಡಿಗೆಯನ್ನು ಪಾವತಿ ಮಾಡಿದರೆ, ಶೇಕಡ 1ರಷ್ಟು ಅಂದರೆ 105 ರೂಪಾಯಿಯನ್ನು ಶುಲ್ಕವಾಗಿ ಪಾವತಿಸಬೇಕಾಗುತ್ತದೆ.
ಎಲ್ಪಿಜಿ ದರ ಪರಿಷ್ಕರಣೆ
ಪ್ರತಿ ತಿಂಗಳ ಮೊದಲ ದಿನವೇ ಎಲ್ಪಿಜಿ ದರವನ್ನು ಪರಿಷ್ಕರಣೆ ಮಾಡಲಾಗುತ್ತದೆ. ತಿಂಗಳ ಮೊದಲ ದಿನ ತೈಲಾ ಕಂಪನಿಗಳು ಎಲ್ಪಿಜಿ ದರವನ್ನು ಏರಿಸುತ್ತದೆ ಅಥವಾ ಇಳಿಸುತ್ತದೆ. ಪ್ರಸ್ತುತ ಎಲ್ಪಿಜಿ ದರವು ಭಾರೀ ಪ್ರಮಾಣದಲ್ಲಿ ಅಧಿಕವಾಗಿದೆ. ಆದ್ದರಿಂದ ತೈಲಾ ಕಂಪನಿಗಳು ಎಲ್ಪಿಜಿ ದರ ಇಳಿಕೆ ಮಾಡಬಹುದು ಎಂಬ ನಿರೀಕ್ಷೆಯಿದೆ.
ಟಾಟಾ ಕಾರು ದರ ಏರಿಕೆ
ಟಾಟಾ ಮೋಟರ್ಸ್ ತನ್ನ ಕಾರುಗಳ ದರವನ್ನು ಮುಂದಿನ ತಿಂಗಳಿನಿಂದ ಶೇಕಡ 1.2ರಷ್ಟು ಹೆಚ್ಚಳ ಮಾಡಲಿದೆ ಎಂದು ಹೇಳಿದೆ. ಸಂಸ್ಥೆಯು ರೆಗ್ಯೂಲಾರಿಟಿ ಬದಲಾವಣೆ, ವೆಚ್ಚ ಏರಿಕೆಯಾದ ಕಾರಣದಿಂದಾಗಿ ಕಾರುಗಳ ಬೆಲೆ ಹೆಚ್ಚಿಸುವ ನಿರ್ಧಾರವನ್ನು ಮಾಡಿದೆ ಎಂದು ಹೇಳಿಕೊಂಡಿದೆ. ಫೆಬ್ರವರಿ 1, 2023ರಿಂದ ಟಾಟಾ ಮೋಟರ್ಸ್ ಕಾರುಗಳ ಬೆಲೆಯು ಶೇಕಡ 1.2ರಷ್ಟು ಅಧಿಕವಾಗಲಿದೆ.
ಕೇಂದ್ರ ಬಜೆಟ್ 2023
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-2024ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡನೆ ಮಾಡಲಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಮಂಡನೆಯಾಗುವ ಬಜೆಟ್ ಇದಾಗಿದೆ. ಹಾಗೆಯೇ ಕೇಂದ್ರ ಸರ್ಕಾರದ ಈ ಆಡಳಿತಾವಧಿಯ ಕೊನೆಯ ಬಜೆಟ್ ಇದಾಗಿದೆ. ಆದರಿಂದಾಗಿ ಜನರು ಈ ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಸಾಮಾನ್ಯ ಜನರಿಗೆ ರಿಲೀಫ್ ನೀಡುವ ಹಲವಾರು ಘೋಷಣೆಗಳನ್ನು ಸರ್ಕಾರ ಮಾಡುವ ನಿರೀಕ್ಷೆಯಿದೆ.
More From GoodReturns

Price Hike: ಬೆಂಗಳೂರು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗ್ಯಾಸ್ ಬೆನ್ನಲ್ಲೇ ಏರಿಕೆಯಾಗುತ್ತಾ ಹೋಟೆಲ್ ಫುಡ್ ದರ

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

LPG Gas Cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ, ಹೋಟೆಲ್ ಉದ್ಯಮಕ್ಕೆ ಅಡ್ಡಿ; ಪ್ರಧಾನಿಗೆ ಪತ್ರ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?



Click it and Unblock the Notifications