ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ ) ಆಗಸ್ಟ್ 18, 2021ರಂದು ಹೊರಡಿಸಿರುವ ಅಧಿಸೂಚನೆ ಅನ್ವಯ ಜನವರಿ 1 ರಿಂದ ಚಾಲ್ತಿಗೆ ಬರುವಂತೆ ಸುರಕ್ಷಿತ ಠೇವಣಿ ಲಾಕರ್ಗೆ ಸಂಬಂಧಪಟ್ಟಂತೆ ಹೊಸ ನಿಯಮಾವಳಿಗಳನ್ನು ಜಾರಿಗೊಳಿಸುತ್ತಿದೆ. ಈ ನಿಯಮಾವಳಿಯ ಪ್ರಕಾರ, ಬ್ಯಾಂಕ್ ಹಾಗೂ ಲಾಕರ್ ಸೇವೆಯನ್ನು ಪಡೆದುಕೊಳ್ಳುವ ಗ್ರಾಹಕರು ಅನುಸರಿಸಬೇಕಾದ ಕ್ರಮಗಳನ್ನು ಸವಿವರವಾಗಿ ಹೇಳಲಾಗಿದೆ. ಹೊಸ ನಿಯಮಾವಳಿಯಂತೆ ಲಾಕರ್ಗಳ ಸುರಕ್ಷತೆಯ ಸಂಪೂರ್ಣ ಹೊಣೆ ಸೇವೆ ನೀಡುವ ಬ್ಯಾಂಕ್ಗಳದ್ದಾಗಿರುತ್ತದೆ.
ಬೆಂಕಿ ಅನಾಹುತ, ಕಳ್ಳತನ, ದರೋಡೆ, ಕಟ್ಟಡ ಹಾನಿ ಮುಂತಾದ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸುವಂತೆ ಬ್ಯಾಂಕ್ಗಳಿಗೆ ಸೂಚಿಸಲಾಗಿದೆ. ಇನ್ಮುಂದೆ ಬ್ಯಾಂಕ್ಗಳು ಇಂತಹ ಅನಾಹುತಗಳಿಂದ ಗ್ರಾಹಕರಿಗೆ ನಷ್ಟವಾದಾಗ ಅಥವಾ ಬ್ಯಾಂಕ್ ಸಿಬ್ಬಂದಿಗಳ ಅಜಾಗರೂಕತೆಯಿಂದ ವಂಚನೆಗೆ ಒಳಗಾದಾಗ ಅದರ ಸಂಪೂರ್ಣ ಹೊಣೆ ಬ್ಯಾಂಕ್ ಹೊರಬೇಕಾಗುತ್ತದೆ.

ಬ್ಯಾಂಕ್ಗಳ ಬೇಜವಾಬ್ದಾರಿಯಿಂದ ನಷ್ಟ ಸಂಭವಿಸಿದರೆ ಗ್ರಾಹಕರಿಗೆ ಸಿಗುವ ಪರಿಹಾರ ಲಾಕರ್ನ ವಾರ್ಷಿಕ ಬಾಡಿಗೆ ಮೊತ್ತದ ನೂರು ಪಟ್ಟಿಗೆ ಸಮನಾದ ಪರಿಹಾರ ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಲಾಕರ್ ಸೇವೆಗಳನ್ನು ನೀಡುವ ಹಾಗೂ ಪಡೆದುಕೊಳ್ಳುವ ಸಂಬಂಧ ಪರಿಷ್ಕೃತ ಮಾರ್ಗಸೂಚಿ ಅನ್ವಯ ನವೀಕೃತ ಕಾರ್ಯಸೂಚಿಗಳನ್ನು ಪ್ರಕಟಿಸಲು ಸೂಚಿಸಲಾಗಿದೆ.
ಅಲ್ಲದೆ, ಲಾಕರ್ ಸೇವೆ ಪಡೆದುಕೊಳ್ಳಲು ಗ್ರಾಹಕರಿಗೆ ಲಾಕರ್ನಲ್ಲಿ ಇಡಲಾಗುವ ಯಾವುದೇ ಬೆಲೆಬಾಳುವ ವಸ್ತುಗಳಿಗೂ ವಿಮಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಒತ್ತಡ ಹೇರದಂತೆ ಸೂಚಿಸಲಾಗಿದೆ. ಅಲ್ಲದೆ, ಸುರಕ್ಷಿತ ಠೇವಣಿ ಲಾಕರ್ಗೆ ಸಂಬಂಧಿಸಿದಂತೆ ಬದಲಾದ ನಿಯಮಾವಳಿಗನ್ನು ಜನವರಿ, 1, 2022ರಿಂದ ಜಾರಿಗೆ ತರಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications