ಬ್ಯಾಂಕ್ ಅಥವಾ ಅಂಚೆ ಕಚೇರಿ ಮೂಲಕ ಪಿಂಚಣಿ ಪಡೆಯುವವರು ವರ್ಷಕ್ಕೆ ಒಂದು ಬಾರಿ ತಮ್ಮ ಇರುವಿಕೆಯ ಬಗ್ಗೆ ಖಾತರಿ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಆದರೆ ಹಲವಾರು ಮಂದಿಗೆ ದೈಹಿಕವಾಗಿ ಹಾಜರಾಗಲು ಸಾಧ್ಯವಾಗುವುದಿಲ್ಲ ಅಥವಾ ಆನ್ಲೈನ್ ಮೂಲಕ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ನಡುವೆ ಪಿಂಚಣಿದಾರರಿಗೆ ಒಂದು ಸಿಹಿ ಸುದ್ದಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದೆ.
ಎಸ್ಬಿಐನಲ್ಲಿ ಇನ್ನು ಮುಂದೆ ಬೇರೆ ವಿಧಾನಗಳ ಮೂಲಕ ಜೀವನ ಪ್ರಮಾಣ ಪತ್ರ ಸಲ್ಲಿಸಲು ಸಾಧ್ಯವಾಗದವರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪಿಂಚಣಿದಾರರು ಆನ್ಲೈನ್ ವಿಡಿಯೋ ಕರೆಯ ಮೂಲಕವೇ ಜೀವನ ಪ್ರಮಾಣ ಪತ್ರವನ್ನು ನೀಡುವ ಸೌಲಭ್ಯವನ್ನು ಜಾರಿ ಮಾಡಿದೆ.
ಈ ಬಗ್ಗೆ ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. "ಕೋಟ್ಯಾಂತರ ಮಂದಿ ಪಿಂಚಣಿದಾರರು ಸರಳವಾಗಿ ಈ ವಿಡಿಯೋ ಕರೆಯ ಮೂಲಕ ಜೀವ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡುವ ಮೂಲಕ ಪಿಂಚಣಿ ಬರುವಿಕೆಯಲ್ಲಿ ಅಡೆ ತಡೆ ಉಂಟಾಗದಂತೆ ನೋಡಿಕೊಳ್ಳಬಹುದು," ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.

"ತಮಗೆ ಅನುಕೂಲಕರವಾದ ಸಮಯದಲ್ಲಿ ಪಿಂಚಣಿದಾರರು ವಿಡಿಯೋ ಕರೆಯ ಮೂಲಕ ಬ್ಯಾಂಕಿನ ಸಿಬ್ಬಂದಿಗಳೊಂದಿಗೆ ಮಾತನಾಡಬಹುದು. ಈ ಮೂಲಕ ಬ್ಯಾಂಕಿಗೆ ಭೇಟಿ ನೀಡದೆಯೇ ಪಿಂಚಣಿದಾರರು ತಮ್ಮ ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡಬಹುದು," ಎಂದು ಎಸ್ಬಿಐ ಹೇಳಿದೆ.
ವಿಡಿಯೋ ಕರೆ ಮೂಲಕ ಪ್ರಮಾಣ ಪತ್ರ ಸಲ್ಲಿಕೆ ಹೇಗೆ?
* ಮೊದಲು ಪಿಂಚಣಿದಾರರು www.pensionseva.sbi ಗೆ ಲಾಗಿನ್ ಆಗಿ
* ಬಳಿಕ Video LC ಮೇಲೆ ಕ್ಲಿಕ್ ಮಾಡಿ
* ಆ ನಂತರ ನಿಮ್ಮ ಎಸ್ಬಿಐನ ಪಿಂಚಣಿ ಖಾತೆ ಸಂಖ್ಯೆಯನ್ನು ನಮೂದಿಸಿ (ಪಿಂಚಣಿ ಬರುವ ನಿಮ್ಮ ಬ್ಯಾಂಕ್ ಖಾತೆಯ ಸಂಖ್ಯೆ)
* ನಿಮ್ಮ ಬ್ಯಾಂಕ್ಗೆ ಲಿಂಕ್ ಆದ ಮೊಬೈಲ್ಗೆ ಒಟಿಪಿ ಬರಲಿದೆ, ಅದನ್ನು ನಮೂದಿಸಿ
* ನಿಯಮಗಳು ಮತ್ತು ಷರತ್ತುಗಳ ಪಟ್ಟಿ ಬರಲಿದ್ದು, ಅದನ್ನು ಸಂಪೂರ್ಣವಾಗಿ ಓದಿಕೊಳ್ಳಿ
* ಅದಾದ ನಂತರ Start Journey ಮೇಲೆ ಕ್ಲಿಕ್ ಮಾಡಿ
* I am ready ಎಂದು ಕ್ಲಿಕ್ ಮಾಡುವ ಮೂಲಕ ವಿಡಿಯೋ ಕರೆಗೆ ಅವಕಾಶ ನೀಡಿ
ಇನ್ನು ಈ ವಿಡಿಯೋ ಕರೆಯ ಸಂದರ್ಭದಲ್ಲಿ ಎಸ್ಬಿಐ ಪಿಂಚಣಿದಾರರ ಕೈಯಲ್ಲಿ ಪ್ಯಾನ್ ಕಾರ್ಡ್ ಇರಬೇಕಾಗುತ್ತದೆ. ಈ ಬಗ್ಗೆ ಮಾಹಿತಿ ನೀಡಿದ ಎಸ್ಬಿಐನ ಅಧ್ಯಕ್ಷ, ದಿನೇಶ್ ಖಾರಾ, "ಹಿರಿಯ ನಾಗರಿಕರಿಗಾಗಿ ನಾವು ಹೊಸ ಗ್ರಾಹಕ ತಾಂತ್ರಿಕ ವ್ಯವಸ್ಥೆಯನ್ನು ನಿಮ್ಮ ಮುಂದೆ ಪರಿಚಯಿಸಲು ಸಂತಸಪಡುತ್ತೇವೆ. ಈ ಹೊಸ ತಾಂತ್ರಿಕ ಕಾರ್ಯಕ್ರಮವು ಪಿಂಚಣಿದಾರರನ್ನು ಡಿಜಿಟಲ್ ಆಗಿ ಸದೃಢರನ್ನಾಗಿಸುತ್ತದೆ. ಹಾಗೆಯೇ ಪಿಂಚಣಿದಾರರು ಈ ಕೊರೊನಾ ವೈರಸ್ ಸೋಂಕು ಸಂದರ್ಭದಲ್ಲಿ ಮನೆಯಲ್ಲಿಯೇ ಕುಳಿತು ಜೀವನ ಪ್ರಮಾನ ಪತ್ರವನ್ನು ಸಲ್ಲಿಕೆ ಮಾಡಬಹುದು ಆಗಿದೆ. ನಾವು ಎಲ್ಲಾ ಗ್ರಾಹಕರಿಗೂ ಅಡತಡೆ ಇಲ್ಲದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತೇವೆ," ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಕೊರೊನಾ ವೈರಸ್ ಸೋಂಕು ಸಾಂಕ್ರಾಮಿಕದ ಕಾರಣದಿಂದಾಗಿ ಮತ್ತು ಹಿರಿಯ ನಾಯಕರಿಗೆ ಈ ಸಂದರ್ಭದಲ್ಲಿ ಮನೆಯಿಂದ ಹೊರಗೆ ಬರುವುದು ಕಷ್ಟ ಎಂಬ ಕಾರಣದಿಂದಾಗಿ ಕೇಂದ್ರ ಸರ್ಕಾರವು ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿತ್ತು. ಹಾಗೆಯೇ ಕಳೆದ ವರ್ಷ ಕೇಂದ್ರ ಸರ್ಕಾರದ ಪಿಂಚಣಿ ನೀತಿಯಡಿ ಬರುವ ಎಲ್ಲಾ ಪಿಂಚಣಿದಾರರು ನವೆಂಬರ್ 1 ರಿಂದ ಡಿಸೆಂಬರ್ 31 ರವರೆಗೆ ತಮ್ಮ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬಹುದು ಸರ್ಕಾರ ತಿಳಿಸಿತ್ತು. ಆದರೆ 80 ವರ್ಷಕ್ಕಿಂತ ಅಧಿಕ ವಯಸ್ಸಾದವರು ತಮ್ಮ ಜೀವನ ಪ್ರಮಾಣ ಪತ್ರವನ್ನು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಸಲ್ಲಿಸಬಹುದು ಎಂದು 2020 ರಲ್ಲಿ ಕೇಂದ್ರ ಸರ್ಕಾರ ಹೇಳಿತ್ತು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications