ಭಾರತದ ಅತೀ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ. ಎಸ್ಬಿಐ ಅಮೃತ ಕಳಶ ಡೆಪಾಸಿಟ್ ಎಫ್ಡಿ ಯೋಜನೆಯನ್ನು ಆರಂಭ ಮಾಡಿದೆ. ಮುಖ್ಯವಾಗಿ ಸ್ಥಳೀಯ ಮತ್ತು ಎನ್ಆರ್ಐ ಗ್ರಾಹಕರಿಗೆ ಈ ಯೋಜನೆಯನ್ನು ಜಾರಿ ಮಾಡಲಾಗಿದೆ.
ಎಸ್ಬಿಐ ಅಮೃತ ಕಳಶ ಡೆಪಾಸಿಟ್ ಫಿಕ್ಸಿಡ್ ಡೆಪಾಸಿಟ್ ಯೋಜನೆಯು ಆಕರ್ಷಕ ಬಡ್ಡಿದರವನ್ನು ಹೊಂದಿದೆ. ಸ್ಥಳೀಯ ಮತ್ತು ಎನ್ಆರ್ಐ ಗ್ರಾಹಕರಿಗಾಗಿ ಇರುವ ಈ ಯೋಜನೆಯಲ್ಲಿ ಗ್ರಾಹಕರು ಉತ್ತಮ ಬಡ್ಡಿದರವನ್ನು ಪಡೆಯಲು ಸಾಧ್ಯವಾಗಲಿದೆ. ಈ ಯೋಜನೆಯ ಅವಧಿಯು 400 ದಿನಗಳ ಯೋಜನೆಯಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೇಳಿದೆ.
ಎಸ್ಬಿಐ ಅಮೃತ ಕಳಶ ಡೆಪಾಸಿಟ್ ಫಿಕ್ಸಿಡ್ ಡೆಪಾಸಿಟ್ ಯೋಜನೆಯು ಸಾಮಾನ್ಯ ಜನರಿಗೆ ಶೇಕಡ 7.10ರಷ್ಟು ಬಡ್ಡಿದರವನ್ನು ನೀಡುತ್ತದೆ. ಇನ್ನು ಹಿರಿಯ ನಾಗರಿಕರಿಗೆ ಎಸ್ಬಿಐ ಶೇಕಡ 7.60ರಷ್ಟು ಬಡ್ಡಿದರವನ್ನು ನೀಡುತ್ತದೆ. ಆದರೆ ಈ ಯೋಜನೆಯು ನಿರ್ದಿಷ್ಟ ಅವಧಿಯನ್ನು ಹೊಂದಿದೆ. ಮಾರ್ಚ್ 2023, 31ರವರೆಗೆ ಮಾತ್ರ ಈ ಯೋಜನೆಯನ್ನು ತೆರೆಯಲು ಸಾಧ್ಯವಾಗುತ್ತದೆ.

ಈ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ. "ಅಮೃತ ಕಳಶ ಯೋಜನೆಯು ಸ್ಥಳೀಯ ಮತ್ತು ಎನ್ಆರ್ಐ ಗ್ರಾಹಕರು ಆಕರ್ಷಕ ಬಡ್ಡಿದರವನ್ನು ನೀಡುತ್ತದೆ. ಈ ಯೋಜನೆಯ ಅವಧಿಯು 400 ದಿನಗಳು ಆಗಿದೆ. ಅದಕ್ಕೂ ಅಧಿಕ ಅವಧಿಯನ್ನು ಕೂಡಾ ಹೊಂದಿದೆ," ಎಂದು ತಿಳಿಸಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಸಾಲದ ಬಡ್ಡಿದರವನ್ನು ಕೂಡಾ ಇತ್ತೀಚೆಗೆ ಏರಿಕೆ ಮಾಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಇತ್ತೀಚೆಗೆ ರೆಪೋ ದರವನ್ನು ಹೆಚ್ಚಿಸಿದೆ. ಇದಾದ ಬಳಿಕ ಹಲವಾರು ಬ್ಯಾಂಕುಗಳು ಸಾಲದ ಬಡ್ಡಿದರವನ್ನು ಮತ್ತು ಫಿಕ್ಸಿಡ್ ಡೆಪಾಸಿಟ್ ಬಡ್ಡಿದರವನ್ನು ಏರಿಸಿದೆ. ಅದರಂತೆಯೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಸಾಲದ ಬಡ್ಡಿದರವನ್ನು 10 ಮೂಲಾಂಕ ಹೆಚ್ಚಿಸಿದೆ.
ಈ ನೂತನ ಬಡ್ಡಿದರವು ಫೆಬ್ರವರಿ 15ರಿಂದ ಜಾರಿಗೆ ಬರಲಿದೆ ಎಂದು ಎಸ್ಬಿಐನ ವೆಬ್ಸೈಟ್ನಲ್ಲಿ ಉಲ್ಲೇಖ ಮಾಡಲಾಗಿದೆ. ಇನ್ನು ಬ್ಯಾಂಕ್ 2 ವರ್ಷದಿಂದ 3 ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮೆಚ್ಯೂರ್ ಆಗುವ ಎಫ್ಡಿ ಮೇಲೆ ಶೇಕಡ 7ರಿಂದ ಶೇಕಡ 6.75ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಇನ್ನು 3 ವರ್ಷದಿಂದ 5 ವರ್ಷದ ಅವಧಿಯಲ್ಲಿ ಮೆಚ್ಯೂರ್ ಆಗುವ ಎಫ್ಡಿ ಮೇಲೆ ಶೇಕಡ 6.5ರಿಂದ ಶೇಕಡ 6.25ರಷ್ಟು ಬಡ್ಡಿದರ ನೀಡಲಾಗುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications