ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ದೇಶಾದ್ಯಂತ ತನ್ನ ಲಕ್ಷಾಂತರ ಜನರಿಗೆ ಪ್ರಮುಖ ಎಚ್ಚರಿಕೆಯನ್ನು ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರುವವರು ಬ್ಯಾಂಕ್ನ ಸೂಚನೆಯಂತೆ ಈ ಒಂದು ಕಾರ್ಯವನ್ನು ಮಾಡದಿದ್ದರೆ ಅವರ ಬ್ಯಾಂಕಿಂಗ್ ಸೇವೆ ಶೀಘ್ರವೇ ಸ್ಥಗಿತವಾಗಲಿದೆ. ಆದ್ದರಿಂದ ಆ ಕೆಲಸವನ್ನು ನೀವು ಮಾಡಿಬಿಡಿ.
ಹೌದು, ಮಾರ್ಚ್ 31, 2022 ರ ಮೊದಲು ತಮ್ಮ ಪ್ಯಾನ್ ಅನ್ನು ತಮ್ಮ ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡುವಂತೆ ಎಸ್ಬಿಐ ತನ್ನ ಗ್ರಾಹಕರಿಗೆ ಹೇಳಿದೆ. ಬ್ಯಾಂಕ್ ತನ್ನ ಬಳಕೆದಾರರಿಗೆ ಕೊನೆಯ ದಿನಾಂಕಕ್ಕೂ ಮುನ್ನ ಅಗತ್ಯ ಕಾರ್ಯವನ್ನು ಮಾಡುವಂತೆ ಎಚ್ಚರಿಕೆ ನೀಡಿದೆ. ಕೊನೆಯ ದಿನಾಂಕಕ್ಕೂ ಮುನ್ನ ನಿಮ್ಮ ಪ್ಯಾನ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡದಿದ್ದರೆ ಬ್ಯಾಂಕಿಂಗ್ ಸೇವೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಸ್ಬಿಐ, "ಯಾವುದೇ ಅನಾನುಕೂಲತೆಯನ್ನು ತಪ್ಪಿಸಲು ಮತ್ತು ತಡೆರಹಿತ ಬ್ಯಾಂಕಿಂಗ್ ಸೇವೆಯನ್ನು ಆನಂದಿಸುವುದನ್ನು ಮುಂದುವರಿಸಲು ನಮ್ಮ ಗ್ರಾಹಕರಿಗೆ ತಮ್ಮ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಲು ನಾವು ಸಲಹೆ ನೀಡುತ್ತೇವೆ," ಎಂದು ಹೇಳಿದೆ.

"ಲಿಂಕ್ ಮಾಡದಿದ್ದರೆ, ಪ್ಯಾನ್ ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಮತ್ತು ನಿರ್ದಿಷ್ಟ ವಹಿವಾಟುಗಳನ್ನು ನಡೆಸಲು ಸಾಧ್ಯವಾಗದು," ಎಂದು ಕೂಡಾ ಬ್ಯಾಂಕ್ ಸೇರಿಸಿದೆ. ಇನ್ನು ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಿಂದಾಗಿ ಎಸ್ಬಿಐ ಆಧಾರ್ನೊಂದಿಗೆ ಪ್ಯಾನ್ ಅನ್ನು ಅನ್ನು ಲಿಂಕ್ ಮಾಡುವ ಗಡುವನ್ನು ಸೆಪ್ಟೆಂಬರ್ 30 2021 ರಿಂದ 31 ಮಾರ್ಚ್ 2022 ರವರೆಗೆ ವಿಸ್ತರಿಸಿದೆ. ಹಾಗಾದರೆ ಪ್ಯಾನ್-ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ....
ಪ್ಯಾನ್-ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?
ಹಂತ 1: ಆದಾಯ ತೆರಿಗೆಯ ಅಧಿಕೃತ ವೆಬ್ಸೈಟ್ಗೆ ಹೋಗಿ https://www.incometaxindiaefiling.gov.in/homeಹಂತ 2: 'ಲಿಂಕ್ ಆಧಾರ್' ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಹಂತ 3: ಹೊಸ ಪುಟದಲ್ಲಿ, ನಿಮ್ಮ ಪ್ಯಾನ್ ಮತ್ತು ಆಧಾರ್ ವಿವರಗಳನ್ನು ನಮೂದಿಸಿ.
ಹಂತ 4: ನಿಮ್ಮ ದಾಖಲೆಯಲ್ಲಿ ಜನ್ಮ ದಿನಾಂಕವನ್ನು ಮಾತ್ರ ನಮೂದಿಸಿದ್ದರೆ 'I have only year of birth in aadhaar card' ಎಂಬ ಬಾಕ್ಸ್ ಅನ್ನು ಆಯ್ಕೆಮಾಡಿ
ಹಂತ 5: ಕ್ಯಾಪ್ಚಾ ಕೋಡ್ ಹಾಕಿ, ಒಟಿಪಿ ಆಯ್ಕೆಯನ್ನು ಕ್ಲಿಕ್ ಮಾಡಿ
ಹಂತ 6: ಲಿಂಕ್ ಆಧಾರ್ ಬಟನ್ ಅನ್ನು ಆಯ್ಕೆ ಮಾಡಿ. ಈ ವೇಳೆ ನಿಮ್ಮ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಲಾಗುತ್ತದೆ.
ಎಸ್ಎಂಎಸ್ ಮೂಲಕ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿ
ಹಂತ 1: ಎಸ್ಎಂಎಸ್ ಮೂಲಕ UIDPAN ಅನ್ನು ಟೈಪ್ ಮಾಡಿ
ಹಂತ 2: ಟೈಮ್ ಮಾಡಿದ ಸಂದೇಶವನ್ನು 567678 ಅಥವಾ 56161 ಗೆ ಕಳುಹಿಸಿದರೆ, ನಿಮ್ಮ ಪ್ಯಾನ್ ಅನ್ನು ನಿಮ್ಮ ಆಧಾರ್ ಕಾರ್ಡ್ಗೆ ಲಿಂಕ್ ಮಾಡಲಾಗುತ್ತದೆ.
IMPS ವರ್ಗಾವಣೆ ಮಿತಿ ಏರಿಕೆ
ಆನ್ ಲೈನ್ ಮೂಲಕ ಹಣ ವರ್ಗಾವಣೆ ಮಾಡುವಾಗ ಐಎಂಪಿಎಸ್ ಬಳಸುವ ಗ್ರಾಹಕರಿಗೆ ವರ್ಗಾವಣೆ ಮಿತಿ ತೊಂದರೆಯಾಗುತ್ತಿತ್ತು. ಈಗ IMPS ವರ್ಗಾವಣೆ ಮಿತಿ ಏರಿಕೆ ಮಾಡಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಗ್ರಾಹಕರು ಫೆಬ್ರವರಿ 1 ರಿಂದ ಹೊಸ ವಹಿವಾಟು ದರಗಳ ಪ್ರಕಾರ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಕೇಂದ್ರ ಬಜೆಟ್ ಮಂಡನೆ ಸಂದರ್ಭದಲ್ಲಿ ಬ್ಯಾಂಕಿಂಗ್ ವಲಯ ಹೆಚ್ಚಿನ ಅನುದಾನ, ಡಿಜಿಟಲ್ ಸೌಕರ್ಯ ಹಾಗೂ ಸೌಲಭ್ಯಗಳನ್ನು ನಿರೀಕ್ಷಿಸಿದೆ. ಅದಕ್ಕೆ ತಕ್ಕಂತೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ತನ್ನ ಗ್ರಾಹಕರಿಗೆ ಸೇವೆ ಒದಗಿಸುತ್ತಿವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications