ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನಲ್ಲಿ ಖಾತೆದಾರರು ಮಾರ್ಚ್ 12ರಂದು ಬ್ಯಾಂಕ್ನ ಡಿಜಿಟಲ್ ಬ್ಯಾಂಕಿಂಗ್ ಚಾನೆಲ್ಗಳಲ್ಲಿ ವ್ಯತ್ಯಯವನ್ನು ಕಂಡಿದ್ದು, ಈ ವ್ಯತ್ಯಯವು ಇಂದು ಕೂಡಾ ಮುಂದುವರಿಲಿದೆ.
ಈ ಮೊದಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ತಮ್ಮ ಅಪ್ಲಿಕೇಶನ್ಗಳು ಮಾರ್ಚ್ 12 ರಂದು ತಂತ್ರಜ್ಞಾನದ ನವೀಕರಣಗಳಿಗೆ ಒಳಗಾಗಲಿವೆ ಎಂದು ತಿಳಿಸಿತು. ಇದರ ಪರಿಣಾಮವಾಗಿ, ಯೋನೋ, ಯೋನೋ ಲೈಟ್, ಯೋನೋ ಬಿಜೆನೆಸ್, ಯುಪಿಐ ಸೇರಿದಂತೆ ಎಸ್ಬಿಐ ಅಪ್ಲಿಕೇಶನ್ಗಳಲ್ಲಿನ ಸೇವೆಗಳ ಅಡ್ಡಿಗಳ ಬಗ್ಗೆ ಗ್ರಾಹಕರಿಗೆ ತಿಳಿಸಲಾಯಿತು.
ಈ ಪ್ಲಾಟ್ಫಾರ್ಮ್ಗಳಲ್ಲಿ ತಂತ್ರಜ್ಞಾನದ ನವೀಕರಣಗಳು ಮಾರ್ಚ್ 12 ರಂದು ರಾತ್ರಿ 11:30 ರಿಂದ ಮಾರ್ಚ್ 13 ರ ಬೆಳಿಗ್ಗೆ 2:00 ರವರೆಗೆ ಮುಂದುವರಿಯುತ್ತದೆ ಎಂದು ಬ್ಯಾಂಕ್ ಗ್ರಾಹಕರಿಗೆ ತಿಳಿಸಿತು. ಈ ಟ್ವೀಟ್ ಬಗ್ಗೆ ಉಲ್ಲೇಖ ಮಾಡಿ, ಗ್ರಾಹಕರೊಬ್ಬರು ತಮ್ಮ ಖಾತೆಯಿಂದ 30,000 ರೂಪಾಯಿಗಳನ್ನು ಹೇಗೆ ಕಳೆದುಕೊಂಡರು ಎಂಬುದನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ.

ಕ್ರೆಡಿಟ್ ಕಾರ್ಡ್ ಇಲ್ಲದಿದ್ದರೂ ಕ್ರೆಡಿಟ್ ಕಾರ್ಡ್ ಶುಲ್ಕ
ಹಲವಾರು ಇತರ ಗ್ರಾಹಕರು ಅನಗತ್ಯ ವಹಿವಾಟುಗಳು ಮತ್ತು ಕಡಿತಗಳ ಬಗ್ಗೆ ದೂರು ನೀಡಿದ್ದಾರೆ. ಯೋನೋ ಆ್ಯಪ್ನಲ್ಲಿ ಆಯಾ ಖಾತೆಗಳ ನಿಷ್ಕ್ರಿಯತೆಯ ಬಗ್ಗೆ ಹಲವಾರು ಮಂದಿ ದೂರಿದ್ದಾರೆ. ಆಶ್ಚರ್ಯಕರವಾಗಿ, ಕೆಲವು ಗ್ರಾಹಕರು ಕ್ರೆಡಿಟ್ ಕಾರ್ಡ್ ಇಲ್ಲದಿದ್ದರೂ ಕ್ರೆಡಿಟ್ ಕಾರ್ಡ್ ಶುಲ್ಕವನ್ನು ಭರಿಸಬೇಕಾಗಿತ್ತು.
ಪ್ರಶ್ನೆಗಳನ್ನು ಪರಿಹರಿಸುವ ಸಲುವಾಗಿ, ಎಸ್ಬಿಐ ಟ್ವೀಟ್ಗಳಿಗೆ ಉತ್ತರಿಸಿದೆ. "ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ. ತಾಂತ್ರಿಕ ಸಮಸ್ಯೆಗಳಿಂದಾಗಿ, ಕೆಲವು ಬಳಕೆದಾರರು ತಮ್ಮ ಯೋನೋ ಲೈಟ್ ಅಪ್ಲಿಕೇಶನ್ನಲ್ಲಿ ತಪ್ಪಾದ ಅಧಿಸೂಚನೆ ಸಂದೇಶಗಳನ್ನು ಸ್ವೀಕರಿಸುತ್ತಿದ್ದಾರೆ. ನಮ್ಮ ತಾಂತ್ರಿಕ ತಂಡವು ಈ ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದೆ. ದಯವಿಟ್ಟು ನಮಗೆ ಸಹಕರಿಸಿ," ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಎಸ್ಬಿಐ ತಮ್ಮ ಮೊಬೈಲ್ ಅಪ್ಲಿಕೇಷನ್ ಅನ್ನು 'ಓನ್ಲಿ ಯೋನೋ' ಎಂದು ಮರು ಪ್ರಾರಂಭಿಸುವ ಕುರಿತು ಟ್ವೀಟ್ ಮಾಡಿದೆ. ಹೆಚ್ಚಿನ ಪ್ರಮಾಣದ ವಹಿವಾಟುಗಳನ್ನು ನಿರ್ವಹಿಸಲು ಕ್ಲೌಡ್ ಸಾಮರ್ಥ್ಯವನ್ನು ಸಕ್ರಿಯಗೊಳಿಸಲು ಮತ್ತು ಉತ್ತಮ ಗ್ರಾಹಕ ಅನುಭವಗಳನ್ನು ಎಸ್ಬಿಐ ಖಾತ್ರಿಪಡಿಸಿದೆ.
ಯೋನೋಗೆ ಮಾತ್ರ ಆರ್ಕಿಟೆಕ್ಚರ್ ಮತ್ತು ವಿನ್ಯಾಸಕ್ಕಾಗಿ ಉತ್ತಮ ತಾಂತ್ರಿಕ ಮಾರ್ಗದರ್ಶನವನ್ನು ಪಡೆಯಲು ಬ್ಯಾಂಕ್ ವಿವಿಧ ಸಲಹೆಗಾರರಿಂದ ಬಿಡ್ಗಳನ್ನು ಆಹ್ವಾನಿಸಿದೆ. ಇತ್ತೀಚೆಗೆ ನಿತಿನ್ ಚುಗ್ ಅವರನ್ನು ಎಸ್ಬಿಐ ನೇಮಿಸಿಕೊಂಡಿದ್ದು, ಅವರು ಮೊದಲು ಎಚ್ಡಿಎಫ್ಸಿ ಬ್ಯಾಂಕ್ನ ಡಿಜಿಟಲ್ ಬ್ಯಾಂಕಿಂಗ್ ವಿಭಾಗವನ್ನು ಮುನ್ನಡೆಸಿದ್ದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications