ದೇಶದ ಅತಿದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ವಿಶೇಷ ಅವಧಿಯ ಡೆಪಾಸಿಟ್ ಯೋಜನೆ "ಅಮೃತ್ ಕಳಶ" ದ ಮಾನ್ಯತೆಯ ಅವಧಿಯನ್ನು 31ನೇ ಡಿಸೆಂಬರ್ 2023 ರವರೆಗೆ ವಿಸ್ತರಿಸಿದೆ. ಈ ಎಫ್ಡಿ ಡೆಪಾಸಿಟ್ ಯೋಜನೆಯು ಆಗಸ್ಟ್ 15, 2023 ರವರೆಗೆ ಮಾನ್ಯವಾಗಿತ್ತು.
ಈ 400-ದಿನಗಳ ಅವಧಿಯ ಡೆಪಾಸಿಟ್ ಯೋಜನೆಯ ಬಡ್ಡಿದರವು ಎಸ್ಬಿಐ ವೆಬ್ಸೈಟ್ ಪ್ರಕಾರ ಸಾಮಾನ್ಯ ಗ್ರಾಹಕರಿಗೆ ಶೇಕಡ 7.1 ಆಗಿದೆ. ಹಾಗೆಯೇ ಹಿರಿಯ ನಾಗರಿಕರಿಗೆ ಎಸ್ಬಿಐ ಬ್ಯಾಂಕ್ನ ವಿಶೇಷ ಎಫ್ಡಿ ಅಡಿಯಲ್ಲಿ ಸುಮಾರು ಶೇಕಡ 7.6ರಷ್ಟು ಬಡ್ಡಿದರವನ್ನು ನೀಡುತ್ತದೆ.

ಎಸ್ಬಿಐ ವೆಬ್ಸೈಟ್ನಲ್ಲಿ ಏನಿದೆ?
"ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ವಿಶೇಷ ಫಿಕ್ಸಿಡ್ ಡೆಪಾಸಿಟ್ (ಎಫ್ಡಿ) "400 ದಿನಗಳ" ಯೋಜನೆಯು (ಅಮೃತ್ ಕಳಶ) 2023 ರ ಏಪ್ರಿಲ್ 12 ರಿಂದ ಜಾರಿಗೆ ಬಂದಿದ್ದು, ಈ ಯೋಜನೆಯ ಬಡ್ಡಿದರವು ಸಾಮಾನ್ಯ ನಾಗರಿಕರಿಗೆ ಶೇಕಡ 7.10 ಆಗಿದೆ. ಇನ್ನು ಹಿರಿಯ ನಾಗರಿಕರಿಗೆ ಈ ಎಫ್ಡಿ ಯೋಜನೆಯ ಬಡ್ಡಿದರವು ಶೇಕಡ 7.60 ಆಗಿದೆ. ಈ ಯೋಜನೆಯು 2023 ರ ಡಿಸೆಂಬರ್ 31 ರವರೆಗೆ ಮಾನ್ಯವಾಗಿರುತ್ತದೆ," ಎಂದು ಎಸ್ಬಿಐ ತನ್ನ ವೆಬ್ಸೈಟ್ನಲ್ಲಿ ಉಲ್ಲೇಖಿಸಿದೆ.
ಎಸ್ಬಿಐ ವೆಬ್ಸೈಟ್ ಪ್ರಕಾರ ಅಮೃತ ಕಳಶ ಯೋಜನೆಯು ಸ್ಥಳೀಯ ರಿಟೇಲ್ ಟರ್ಮ್ ಡೆಪಾಸಿಟ್ ಯೋಜನೆಯಾಗಿದೆ. 2 ಕೋಟಿ ರೂಪಾಯಿಗಿಂತ ಕಡಿಮೆ ಮೌಲ್ಯದ ಎನ್ಆರ್ಐ ರುಪೀ ಟರ್ಮ್ ಡೆಪಾಸಿಟ್ ಇದರಲ್ಲಿ ಸೇರಿದೆ. ಈ ಯೋಜನೆಗೆ ಮಾಸಿಕ, ತ್ರೈಮಾಸಿಕ, ಅರ್ಧ ವಾರ್ಷಿಕವಾಗಿ ಬಡ್ಡಿದರವನ್ನು ಹೂಡಿಕೆ ಮಾಡಲಾಗುತ್ತದೆ.
ಎಸ್ಬಿಐ ಎಫ್ಡಿ ಯೋಜನೆ ಬಡ್ಡಿದರ
ಮುಂದಿನ 7 ರಿಂದ 45 ದಿನಗಳಲ್ಲಿ ಮೆಚ್ಯೂರಿಟಿ ಹೊಂದುವ ಎಫ್ಡಿ ಮೇಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೇಕಡ 3ರಷ್ಟು ಬಡ್ಡಿದರವನ್ನು ನೀಡುತ್ತದೆ. 46 ರಿಂದ 179 ದಿನಗಳಲ್ಲಿ ಮೆಚ್ಯೂರಿಟಿ ಹೊಂದುವ ಡೆಪಾಸಿಟ್ಗಳ ಮೇಲಿನ ಬಡ್ಡಿದರವು ಶೇಕಡ 4.50 ರಷ್ಟಾಗಿದೆ.
180 ದಿನಗಳಿಂದ 210 ದಿನಗಳವರೆಗಿನ ಅವಧಿಯ ಡೆಪಾಸಿಟ್ ಯೋಜನೆಗೆ ಎಸ್ಬಿಐ ಶೇಕಡ 5.25ರಷ್ಟು ಬಡ್ಡಿದರವನ್ನು ನೀಡುತ್ತದೆ. ಇನ್ನು 211 ದಿನಗಳಿಂದ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಮೆಚ್ಯೂರಿಟಿ ಹೊಂದುವ ಫಿಕ್ಸಿಡ್ ಡೆಪಾಸಿಟ್ ಮೇಲೆ ಬ್ಯಾಂಕ್ ಶೇಕಡ 5.75ರಷ್ಟು ಬಡ್ಡಿದರವನ್ನು ನೀಡುತ್ತದೆ.
1 ವರ್ಷದಿಂದ 2 ವರ್ಷಗಳಲ್ಲಿ ಮೆಚ್ಯೂರಿಟಿ ಹೊಂದುವ ಡೆಪಾಸಿಟ್ಗಳ ಮೇಲೆ ಶೇಕಡ 6.80ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. 2 ವರ್ಷದಿಂದ 3 ವರ್ಷಗಳಲ್ಲಿ ಮೆಚ್ಯೂರಿಟಿ ಹೊಂದುವ ಎಫ್ಡಿ ಮೇಲೆ ಬ್ಯಾಂಕ್ ಶೇಕಡ 7ರಷ್ಟು ಬಡ್ಡಿದರವನ್ನು ನೀಡುತ್ತದೆ. 3 ವರ್ಷದಿಂದ 10 ವರ್ಷಗಳಲ್ಲಿ ಮೆಚ್ಯೂರಿಟಿ ಹೊಂದುವ ಎಫ್ಡಿ ಮೇಲೆ ಶೇಕಡ 6.50ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ, ಎಸ್ಬಿಐ ದೇಶದಾದ್ಯಂತ 300 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಸಾಲ ನೀಡುವ ಬ್ಯಾಂಕ್ ಈಗ ರಾಷ್ಟ್ರದಾದ್ಯಂತ 22,405 ಶಾಖೆಗಳ ಜೊತೆಗೆ 235 ಅಂತರರಾಷ್ಟ್ರೀಯ ಶಾಖೆಗಳು ಮತ್ತು ಕಚೇರಿಗಳನ್ನು ಹೊಂದಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications