ದೈನಂದಿನ ಜೀವನಕ್ಕೆ ಅಗತ್ಯ ಎನಿಸಿರುವ ಟೊಮೆಟೋ ಬೆಲೆ ಕಮ್ಮಿಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಕೆಜಿಯೊಂದಕ್ಕೆ ದಾಖಲೆಯ 150 ರೂಪಾಯಿಗೆ ಟೊಮೆಟೋ ಬೆಲೆ ಬಂದು ನಿಂತಿದೆ. ಆದರೂ, ಅಲ್ಲಲ್ಲಿ ಇದರ ಲಾಭ ರೈತರಿಗೆ ಸಿಗುತ್ತಿಲ್ಲ.
ಸಾಮಾನ್ಯವಾಗಿ ಕರ್ನಾಟಕದಲ್ಲಿ ಟೊಮೆಟೋ ಬೆಲೆ ಕೋಲಾರದ ಮಾರುಕಟ್ಟೆಯನ್ನು ಅವಲಂಬಿತವಾಗಿದೆ. ದೇಶದಲ್ಲಿ ಅತಿ ಹೆಚ್ಚು ಟೊಮೆಟೋ ಬೆಳೆಯುವ ಕೋಲಾರ ಜಿಲ್ಲೆಯೇ ಈ ದಿಢೀರ್ ಬೆಲೆ ಏರಿಕೆಗೆ ಕಾರಣ ಎಂದು ಹೇಳಲಾಗುತ್ತಿದೆ. ಕೋಲಾರ ಮಾರುಕಟ್ಟೆಯಲ್ಲಿ ಟೊಮೆಟೋ ಆವಕ ಕಡಿಮೆಯಾಗಿರುವುದು ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಕೊಪ್ಪಳ ಜಿಲ್ಲೆಯ ರೈತರು ಟೊಮೆಟೋ ಬೆಲೆಯ ನಾಗಾಲೋಟದಿಂದ ಹರ್ಷಚಿತ್ತರಾಗಿದ್ದಾರೆ. ಜಾಕ್ಪಾಟ್ ಬೆಲೆಯೊಂದಿಗೆ ಖುಷಿಖುಷಿಯಿಂದ ಮನೆಗೆ ರೈತರು ತೆರಳುತ್ತಿದ್ದಾರೆ. ಜಿಲ್ಲೆಯ ಕನಕಗಿರಿ ಸಗಟು ಮಾರುಕಟ್ಟೆಯಲ್ಲಿ ಪ್ರತೀ ಬಾಕ್ಸ್ 2750-2900 (20 ಕೆಜಿ) ಮಾರಾಟವಾಗಿದೆ.
ಟೊಮೆಟೋಗೆ ಉತ್ತಮ ಬೆಲೆ ಇದ್ದರೂ ರೈತರು ಬೆಳೆ ನಷ್ಟದ ಭೀತಿಯನ್ನು ಎದುರಿಸುತ್ತಿದ್ದಾರೆ. ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಬೆಂಗಳೂರು ಹಾಗೂ ಕೃಷಿ ವಿಜ್ಞಾನ ಕೇಂದ್ರ ಕೋಲಾರ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿವೆ.
ಕೋಲಾರ ಜಿಲ್ಲೆಯ ಟೊಮಾಟೋ ಬೆಳೆಯಲ್ಲಿ ಬಿಳಿ ನೊಣ ಹಾಗೂ ಎಲೆ ಮುಟುರು ರೋಗದ ತೀವ್ರತೆಯು ಹೆಚ್ಚಾಗುತ್ತಿದೆ. ದೇಶದ ಅತಿದೊಡ್ಡ ಟೊಮಾಟೋ ಎಪಿಎಂಸಿ ಮಾರುಕಟ್ಟೆಯಲ್ಲಿ ಒಂದಾದ ಕೋಲಾರದಲ್ಲಿನ ಆವಕದಲ್ಲಿ ಭಾರೀ ಇಳಿಕೆಯಾಗಿದೆ.
2023ರ ಜೂನ್ನಲ್ಲಿ ಇಲ್ಲಿನ ಎಪಿಎಂಸಿಗೆ ಕೇವಲ 3.2 ಲಕ್ಷ ಕ್ವಿಂಟಾಲ್ ಟೊಮೆಟೋ ಬಂದಿದೆ. 2022ರ ಜೂನ್ನಲ್ಲಿ 5.45 ಲಕ್ಷ ಕ್ವಿಂಟಾಲ್ ಟೊಮೆಟೋ ಮಾರುಕಟ್ಟೆಗೆ ಬಂದಿತ್ತು. 2021ರ ಜೂನ್ನಲ್ಲಿ ಇದು 9.37 ಲಕ್ಷ ಕ್ವಿಂಟಾಲ್ ತಲುಪಿತ್ತು. ಹೀಗಾಗಿ ಬೆಲೆ ಏರಿಕೆಗೆ ಇದು ಕೂಡಾ ಒಂದು ಕಾರಣ ಎಂದು ಹೇಳಲಾಗುತ್ತಿದೆ.
ಕೇಂದ್ರ ಸರ್ಕಾರವು ಈ ಬೆಲೆ ಏರಿಕೆಯು ತಾತ್ಕಾಲಿಕವಾಗಿದೆ. ಈ ಮಾನ್ಸೂನ್ನಿಂದ ಆದ ನಷ್ಟದಿಂದಾಗಿ ಸ್ಥಿತಿ ಹೀಗಾಗಿದೆ. ಶೀಘ್ರವೇ ದರ ಇಳಿಕೆಯಾಗಲಿದೆ ಎಂದು ಭರವಸೆಯನ್ನು ನೀಡಿದ್ದರೂ ಬೆಲೆಯಲ್ಲಿ ಇಳಿಕೆಯಾಗುತ್ತಿಲ್ಲ.
More From GoodReturns

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications