Train Cancel: ಬೆಂಗಳೂರು- ಮಂಗಳೂರು ರೈಲು ಐದು ದಿನ ರದ್ದು, ದಿನಾಂಕ, ರೈಲು ಸಂಖ್ಯೆ, ಕಾರಣ ತಿಳಿಯಿರಿ

ಕ್ರಿಸ್‌ಮಸ್‌ ಹಬ್ಬ ಆರಂಭವಾಗುವುದಕ್ಕೂ ಮೊದಲೇ ಊರಿಗೆ ಹೋಗಬೇಕು ಎಂದು ನಿರ್ಧಾರ ಮಾಡಿದ್ದೀರಾ?. ಹಾಗಿದ್ದರೆ ನೀವು ಮೊದಲು ಯಾವೆಲ್ಲ ದಿನ ರೈಲು ರದ್ದಾಗಿದೆ ಎಂದು ನೋಡಬೇಕಾಗುತ್ತದೆ. ರೈಲ್ವೆಯು ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲನ್ನು ಸತತ ಐದು ದಿನಗಳ ಕಾಲ ರದ್ದು ಮಾಡಿದೆ.

ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗುವಂತೆ, ನೈಋತ್ಯ ರೈಲ್ವೆ ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಹಲವಾರು ರೈಲುಗಳನ್ನು ರದ್ದು ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದೆ.

ಬೆಂಗಳೂರು- ಮಂಗಳೂರು ರೈಲು ಐದು ದಿನ ರದ್ದು, ವಿವರ

ಡಿಸೆಂಬರ್ 11 ರಂದು ಪ್ರಿನ್ಸಿಪಲ್ ಚೀಫ್ ಆಪರೇಷನ್ ಮ್ಯಾನೇಜರ್, ಎಸ್‌ಡಬ್ಲ್ಯೂಆರ್ ಅವರ ಅಧಿಸೂಚನೆಯ ಪ್ರಕಾರ, ರೈಲ್ವೆ ಸಚಿವಾಲಯವು ಡಿಸೆಂಬರ್ 14 ರಿಂದ ಡಿಸೆಂಬರ್ 18 ರವರೆಗೆ ಪೂರ್ವ-ಇಂಟರ್‌ಲಾಕಿಂಗ್ ಮತ್ತು ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ ಪುನರ್‌ನಿರ್ಮಾಣಕ್ಕಾಗಿ ಹಾಸನ ಯಾರ್ಡ್‌ನಲ್ಲಿ ನಾನ್-ಇಂಟರ್‌ಲಾಕಿಂಗ್‌ಗೆ ಅನುಮೋದನೆ ನೀಡಿದೆ.

ಡಿಸೆಂಬರ್ 14 ರಿಂದ 18 ರ ಅವಧಿಯಲ್ಲಿ, ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರಸಂಪರ್ಕ ಬ್ಲಾಕ್ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8 ರವರೆಗೆ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ರೈಲು ಕಾರ್ಯಾಚರಣೆಗೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಲಭ್ಯವಿರುವುದಿಲ್ಲ.

ಡಿಸೆಂಬರ್ 19 ರಿಂದ ಡಿಸೆಂಬರ್ 22 ರವರೆಗೆ, ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ಅನ್ನು ಮಾಡಲಾಗುತ್ತದೆ. ಈ ಅವಧಿಯಲ್ಲಿ ಯಾವುದೇ ರೈಲುಗಳು ಕಾರ್ಯನಿರ್ವಹಿಸುವುದಿಲ್ಲ.

ಈ ರೈಲುಗಳು ರದ್ದು

* ಬೆಂಗಳೂರು-ಕಣ್ಣೂರು-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (ರಾತ್ರಿಯ ಸೇವೆಗಳು) - ಡಿಸೆಂಬರ್ 16 ರಿಂದ ಡಿಸೆಂಬರ್ 20 ರವರೆಗೆ ರದ್ದು
* ಬೆಂಗಳೂರು-ಕಾರವಾರ-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (ರಾತ್ರಿಯ ಸೇವೆಗಳು) - ಡಿಸೆಂಬರ್ 16 ರಿಂದ ಡಿಸೆಂಬರ್ 20 ರವರೆಗೆ ರದ್ದು
* ಯಶವಂತಪುರ- ಮಂಗಳೂರು ಜಂಕ್ಷನ್ ಗೋಮಟೇಶ್ವರ ತ್ರಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ - ಡಿಸೆಂಬರ್ 14, 17, 19 ಮತ್ತು 21 ರಂದು ರದ್ದು
* ಯಶವಂತಪುರ- ಕಾರವಾರ ತ್ರಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ - ಡಿಸೆಂಬರ್ 13, 15, 18, 20 ಮತ್ತು 22 ರಂದು ರದ್ದು
* ಯಶವಂತಪುರ- ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ. 16539) - ಡಿಸೆಂಬರ್ 16 ರಂದು ರದ್ದು
* ಮಂಗಳೂರು ಜಂಕ್ಷನ್ -ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) - ಡಿಸೆಂಬರ್ 17 ರಂದು ರದ್ದು

ಪರ್ಯಾಯ ಸೇವೆಗಳ ವಿವರ

ಈ ಅವಧಿಯಲ್ಲಿ ಬೆಂಗಳೂರನ್ನು ಕರಾವಳಿ ಕರ್ನಾಟಕಕ್ಕೆ ಸಂಪರ್ಕಿಸುವ ಏಕೈಕ ರೈಲು ಸೇವೆಯೆಂದರೆ ರೈಲು ಸಂಖ್ಯೆ 16585/16586 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಬೆಂಗಳೂರು-ಮುರುಡೇಶ್ವರ ಆಗಿದೆ. ಆದರೆ ಇದು ಮೈಸೂರು ಪ್ರದೇಶದ ಮೂಲಕ ಸಂಚಾರ ಮಾಡುವುದಿಲ್ಲ.

ಡಿಸೆಂಬರ್ 14 ರಿಂದ ಡಿಸೆಂಬರ್ 16 ರವರೆಗೆ, ರೈಲು ಯಶವಂತಪುರ ಬೈಪಾಸ್, ನೆಲಮಂಗಲ, ಶ್ರವಣಬೆಳಗೊಳ ಮತ್ತು ಹಾಸನ ಮೂಲಕ ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಮೂಲಕ ಚಲಿಸುತ್ತದೆ. ಡಿಸೆಂಬರ್ 17 ರಿಂದ ಡಿಸೆಂಬರ್ 22 ರವರೆಗೆ ಮೈಸೂರು ಮಾರ್ಗವನ್ನು ಹೊರತುಪಡಿಸಿ ಯಶವಂತಪುರ ಬೈಪಾಸ್, ತುಮಕೂರು, ಅರಸೀಕೆರೆ ಮತ್ತು ಹಾಸನ ಮೂಲಕ ರೈಲು ಸಂಚಾರ ನಡೆಸಲಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+