ನವಜಾತ ಶಿಶುವಿಗೆ ಶೀಘ್ರದಲ್ಲೇ ತಾತ್ಕಾಲಿಕ ಆಧಾರ್ ಸಂಖ್ಯೆ ಲಭ್ಯವಾಗಲಿದೆ. ಹಾಗೆಯೇ ಜನರ ಮರಣ ಹಾಗೂ ಜನನ ಎರಡೂ ವಿವರಗಳು ಆಧಾರ್ ಕಾರ್ಡ್ನಲ್ಲಿ ಇರಲಿದೆ. ಸಾವನ್ನಪ್ಪಿದ ಜನರ ಆಧಾರ್ ನಂಬರ್ ಅನ್ನು ದುರ್ಬಳಕೆ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲು ಯುಐಡಿಎಐ ನಿರ್ಧಾರ ಮಾಡಿದೆ.
ಆಧಾರ್ ಕಾರ್ಡ್ ವ್ಯವಸ್ಥೆಯನ್ನು 2010ರಲ್ಲಿ ಆರಂಭ ಮಾಡಲಾಗಿದ್ದು, ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲೂ ಆಧಾರ್ ಕಡ್ಡಾಯವಾಗಿದೆ. ಇದೊಂದು ಮೂಲ ದಾಖಲೆಯಾಗಿ ಪರಿವರ್ತನೆಯಾಗಿದೆ. ಈಗ ಈ ಆಧಾರ್ ಅನ್ನು ಜನರ ಹುಟ್ಟಿನಿಂದ ಮರಣದವರೆಗೆ ಜನರ ಮೂಲ ಆಧಾರವಾಗಿ ಲಿಂಕ್ ಮಾಡಲು ಯುಐಡಿಎಐ ಮುಂದಾಗಿದೆ.
"ನವಜಾತ ಶಿಶು ಜನನ ಹೊಂದಿದ ಕೂಡಲೇ ಆಧಾರ್ ಕಾರ್ಡ್ ಅನ್ನು ಮಾಡಿಸಿಕೊಳ್ಳಬೇಕಾಗಿದೆ. ಒಂದು ಕುಟುಂಬದ ಪ್ರತಿಯೋರ್ವ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ," ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನವಜಾತ ಶಿಶುವಿಗೆ ಆಧಾರ್ ಕಾರ್ಡ್
ದೇಶದಲ್ಲಿ ಶೀಘ್ರದಲ್ಲೇ ನವಜಾತ ಶಿಶುವಿನ ಬಯೋಮೆಟ್ರಿಕ್ ಡೇಟಾದೊಂದಿಗೆ ತಾತ್ಕಾಲಿಕ ಆಧಾರ್ ಸಂಖ್ಯೆಯನ್ನು ನೀಡಲಾಗುತ್ತದೆ. ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಯೊಬ್ಬರು ಜನನದ ಸಂದರ್ಭದಲ್ಲಿ ಯುಐಡಿಎಐ ಸಂಖ್ಯೆಯನ್ನು ನಿಗದಿ ಮಾಡಲಾಗುತ್ತದೆ. ಈ ಮೂಲಕ ಒಂದು ಕುಟುಂಬದ ಸಣ್ಣ ವಯಸ್ಸಿನ ಮಗುವಿಗೂ ಸರ್ಕಾರದ ಸೌಲಭ್ಯ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಣ್ಣ ಮಗುವಿದ್ದಾಗ ಮಾಡಿಸಿಕೊಂಡ ಆಧಾರ್
ಸಣ್ಣ ಮಗುವಿದ್ದಾಗ ಮಾಡಿಸಿಕೊಂಡ ಈ ಆಧಾರ್ ಕಾರ್ಡ್ ಅನ್ನು ಸುಮಾರು ಹದಿನೆಂಟು ವರ್ಷ ಕಳೆದಾಗ ಮತ್ತೆ ರಿಜಿಸ್ಟರ್ ಮಾಡಬೇಕಾಗುತ್ತದೆ. ಆ ಬಳಿಕ ಆ ಆಧಾರ್ ನಂಬರ್ ವ್ಯಕ್ತಿಯ ಕಾಯಂ ನಂಬರ್ ಆಗಲಿದೆ. ಆಧಾರ್ ನಂಬರ್ ಅನ್ನು ಜಾರಿ ಮಾಡಿದ ಬಳಿಕ ಐದು ವರ್ಷದಿಂದ ಹದಿನೆಂಟು ವರ್ಷದವರಲ್ಲಿ ಶೇಕಡ 93ರಷ್ಟು ಮಂದಿಗೆ ಆಧಾರ್ ಕಾರ್ಡ್ ನೀಡಲಾಗಿದೆ ಎಂದು ಅಂದಾಜು ಮಾಡಲಾಗಿದೆ. ಇನ್ನು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಕಾಲು ಭಾಗದಷ್ಟು ಮಕ್ಕಳ ಗುರುತನ್ನು ಡೇಟಾಬೇಸ್ನಲ್ಲಿ ನೋಂದಾವಣಿ ಮಾಡಲಾಗಿದೆ.
ಮನ್ಮೋಹನ್ ಸಿಂಗ್ ಸರ್ಕಾರ ಆರಂಭ ಮಾಡಿದೆ
ಈ ಆಧಾರ್ ವ್ಯವಸ್ಥೆಯನ್ನು ಮನ್ಮೋಹನ್ ಸಿಂಗ್ ಸರ್ಕಾರ ಆರಂಭ ಮಾಡಿದ್ದು, ಆದರೆ ಬಳಿಕ ನರೇಂದ್ರ ಮೋದಿ ಸರ್ಕಾರವು ಈ ಆಧಾರ್ ವ್ಯವಸ್ಥೆಯನ್ನು ಹೆಚ್ಚಾಗಿ ಬಳಸಿಕೊಂಡಿದೆ. ಪ್ರಸ್ತುತ ಆಧಾರ್ ಅನ್ನು ಎಲ್ಲಾ ಕ್ಷೇತ್ರಗಳಲ್ಲಿ ಕೇಳಲಾಗುತ್ತದೆ. ಆಧಾರ್ ಅನ್ನು ದಾಖಲೆಯ ಗುರುತಾಗಿ ಪರಿಗಣಿಸಲಾಗುತ್ತಿದೆ.
ನಿಮ್ಮ ಮನೆ ಬಾಗಿಲಿಗೆ ಆಧಾರ್ ಸೇವೆ: ಇಲ್ಲಿದೆ ವಿವರMore From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications