ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಜನರು ತಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವ ನಿಟ್ಟಿನಲ್ಲಿ ದಾಖಲೆಗಳನ್ನು ಹಂಚಿಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಯುಐಡಿಎಐ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡುವ ನಿಟ್ಟಿನಲ್ಲಿ ಇಮೇಲ್ ಅಥವಾ ವಾಟ್ಸಾಪ್ ಮೂಲಕ ಹಂಚಿಕೊಳ್ಳಬೇಡಿ ಎಂದು ತಿಳಿಸಿದೆ.
ಜನರು ಆಧಾರ್ ಕಾರ್ಡ್ ಅನ್ನು ಮಾಡಿಸಿಕೊಂಡು ಸುಮಾರು ಹತ್ತು ವರ್ಷಗಳಾಗಿದ್ದರೆ, ನೀವು ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳುವಂತೆ ಈ ಹಿಂದೆ ಯುಐಡಿಎಐ ಹೇಳಿದೆ. ಆದರೆ ಈ ರೀತಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ದಾಖಲೆಗಳನ್ನು ಹಂಚಿಕೊಳ್ಳುವಂತೆ ನಾವು ಎಂದಿಗೂ ಕೇಳುವುದಿಲ್ಲ. ಹೀಗೆ ದಾಖಲೆ ಹಂಚಿಕೊಳ್ಳಲು ಹೇಳಿದರೆ, ಅದು ಮೋಸದ ಜಾಲವಾಗಿರುವ ಸಾಧ್ಯತೆಯಿದೆ ಎಂದು ಪ್ರಾಧಿಕಾರ ಹೇಳಿದೆ.

ಪ್ರಮುಖ ದಾಖಲೆ ಹಂಚಿಕೊಳ್ಳಲು ಎಂದಿಗೂ ಹೇಳದು ಯುಐಡಿಎಐ
"ಯುಐಡಿಎಐ ನಿಮ್ಮ ಆಧಾರ್ ಅನ್ನು ಇಮೇಲ್ ಅಥವಾ ವಾಟ್ಸಾಪ್ ಮೂಲಕ ಅಪ್ಡೇಟ್ ಮಾಡಲು ನಿಮ್ಮ ಗುರುತಿನ ಪುರಾವೆ (ಪಿಒಐ) ಅಥವಾ ವಿಳಾದ ಪುರಾವೆ (ಪಿಒಎ) ದಾಖಲೆಗಳನ್ನು ಹಂಚಿಕೊಳ್ಳುವಂತೆ ನಿಮ್ಮ ಬಳಿ ಎಂದಿಗೂ ಕೂಡಾ ಹೇಳುವುದಿಲ್ಲ. ನೀವು ಮೈ ಆಧಾರ್ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಣ ಮಾಡಬಹುದು ಅಥವಾ ನಿಮ್ಮ ಸಮೀಪದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ," ಎಂದು ಯುಐಡಿಎಐ ಹೇಳಿದೆ.
ಕಳೆದ ವರ್ಷದ ಆರಂಭದಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಜನರು ತಮ್ಮ ಆಧಾರ್ ಕಾರ್ಡ್ಗಳ ಫೋಟೊಕಾಪಿಗಳನ್ನು ಯಾವುದೇ ಸಂಸ್ಥೆಗಳೊಂದಿಗೆ ಹಂಚಿಕೊಳ್ಳದಂತೆ ಸಲಹೆ ನೀಡಿತ್ತು.
ನೀವು ಆಧಾರ್ ಕಾರ್ಡ್ ದಾಖಲೆಗಳನ್ನು ಹಂಚಿಕೊಂಡರೆ ಅದರ ದುರ್ಬಳಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಬದಲಾಗಿ ಜನರು ಮಾಸ್ಕ್ಡ್ ಆಧಾರ್ ಕಾರ್ಡ್ ಅನ್ನು ಬಳಕೆ ಮಾಡಬಹುದು. ಇದು ನಿಮ್ಮ ಆಧಾರ್ ಕಾರ್ಡ್ನ ಕೊನೆಯ ನಾಲ್ಕು ಅಂಕೆಗಳನ್ನು ಮಾತ್ರ ಪ್ರದರ್ಶಿಸುತ್ತದೆ ಎಂದು ಯುಐಡಿಎಐ ಹೇಳಿದೆ.
ಎಲ್ಲ ಕಡೆಯಲ್ಲಿ ಆಧಾರ್ ಕಾರ್ಡ್ ಬಳಸುವಾಗ ಎಚ್ಚರ
"ಆಧಾರ್ ಕಾರ್ಡ್ ಅನ್ನು ನಿಮ್ಮ ಗುರುತನ್ನು ಸಾಬೀತುಪಡಿಸಲು ಮತ್ತು ವಹಿವಾಟು ಮಾಡಲು ಎಲ್ಲೆಂದರಲ್ಲಿ ಬಳಕೆ ಮಾಡಬೇಡಿ. ಮುಖ್ಯವಾಗಿ ಟ್ವಿಟ್ಟರ್, ಫೇಸ್ಬುಕ್ ಇತ್ಯಾದಿ ಸಾರ್ವಜನಿಕ ವೇದಿಕೆಗಳಲ್ಲಿ ಆಧಾರ್ ಮಾಹಿತಿಯನ್ನು ಹಾಕಬೇಡಿ. ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿ ನೀಡುವ ಸಂದರ್ಭದಲ್ಲಿಯೂ ನೀವು ಎಚ್ಚರವಾಗಿರಬೇಕಾಗುತ್ತದೆ," ಎಂದು ಯುಐಡಿಎಐ ವೆಬ್ಸೈಟ್ನಲ್ಲಿ ಹೇಳಿದೆ.
"ಜನರು ಸರಕುಗಳನ್ನು ಖರೀದಿಸುವಾಗ, ಶಾಲಾ ಶುಲ್ಕ, ನೀರು, ವಿದ್ಯುತ್, ದೂರವಾಣಿ ಮತ್ತು ಇತರ ಯುಟಿಲಿಟಿ ಬಿಲ್ಗಳನ್ನು ಪಾವತಿಸುವಾಗ ತಮ್ಮ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ವಿವರಗಳನ್ನು ಅಥವಾ ಚೆಕ್ (ಬ್ಯಾಂಕ್ ಖಾತೆ ಸಂಖ್ಯೆಯನ್ನು ಹೊಂದಿರುವ) ಮೊದಲಾದವುಗಳನ್ನು ನೀಡುತ್ತೇವೆ. ಹಾಗೆಯೇ ನಾವು ಆತಂಕವಿಲ್ಲದೆ ಅಗತ್ಯವಿರುವಾಗ ನಮ್ಮ ಆಧಾರ್ ಕಾರ್ಡ್ ಅನ್ನು ಬಳಸಬಹುದು. ಆದರೆ ಇತರೆ ಐಡಿ ಕಾರ್ಡ್ಗಳಂತೆ ಅಗತ್ಯಕ್ಕಿಂತ ಅಧಿಕವಿರಬಾರದು, ಅಗತ್ಯಕ್ಕಿಂತ ಕಡಿಮೆ ಇರಬಾರದು," ಎಂದು ರಕ್ಷಣಾ ನೋಟಿಸ್ನಲ್ಲಿ ಯುಐಡಿಎಐ ತಿಳಿಸಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications