ಮಹಿಳೆಯರಿಗಾಗಿ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ಗಳು ವಿಶೇಷ ಉಳಿತಾಯ ಖಾತೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಮಹಿಳೆಯರ ಆರ್ಥಿಕ ಅಗತ್ಯಗಳನ್ನು ಪೂರೈಸಲು ಈ ಉಳಿತಾಯ ಯೋಜನೆಗಳು ಸಹಾಯವಾಗಲಿದ್ದು, ಈ ವಿಶೇಷ ಉಳಿತಾಯ ಖಾತೆಯನ್ನು ಗರಿಮಾ ಎಂದು ಹೆಸರಿಡಲಾಗಿದೆ.
ಈ ವಿಶೇಷ ಉಳಿತಾಯ ಖಾತೆಯಲ್ಲಿ ಮಹಿಳೆಯರಿಗೆ ಗರಿಷ್ಠ ಶೇಕಡಾ 7ರ ಬಡ್ಡಿದರವನ್ನು ನೀಡಲಾಗುವುದು. ಈ ಮೂಲಕ ಎಫ್ಡಿಗಿಂತಲೂ ಹೆಚ್ಚಿನ ಬಡ್ಡಿ ದರವನ್ನು ಈ ಖಾತೆಯಿಂದ ಪಡೆಯಲು ಸಾಧ್ಯವಾಗುತ್ತದೆ.
ಏನಿದು ಗರಿಮಾ ಸೇವಿಂಗ್ ಅಕೌಂಟ್?
ಗರಿಮಾ ಸೇವಿಂಗ್ಸ್ ಅಕೌಂಟ್ ಮೂಲಕ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಆರ್ಥಿಕವಾಗಿ ಜಾಗೃತ ಮತ್ತು ಆರ್ಥಿಕವಾಗಿ ಸಕ್ರಿಯವಾಗಿರುವ ಮಹಿಳೆಯರಿಗೆ ತಮ್ಮ ದಿನನಿತ್ಯದ ಬ್ಯಾಂಕಿಂಗ್ ಅಗತ್ಯಗಳನ್ನು ಪೂರೈಸಲು ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದು ಸ್ವತಃ ಒಂದು ವಿಶೇಷ ರೀತಿಯ ಖಾತೆಯಾಗಿದ್ದು, ಇದು ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಮತ್ತು ಸಣ್ಣ ಉದ್ಯಮಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ.
ಗರಿಮಾ ಸೇವಿಂಗ್ ಅಕೌಂಟ್ನಿಂದ ಏನು ಪ್ರಯೋಜನ?
ಗರಿಮಾ ಉಳಿತಾಯ ಖಾತೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ನಗದು ಮತ್ತು ಉಚಿತ ಅನಿಯಮಿತ ಹಣವನ್ನು ಹಿಂಪಡೆಯುವ ಸೌಲಭ್ಯ ಸಿಗಲಿದೆ. ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಮಹಿಳೆಯರು ಬ್ಯಾಂಕಿನ ಯಾವುದೇ ಶಾಖೆಯಿಂದ ಅನಿಯಮಿತ ಹಣವನ್ನು ಹಿಂಪಡೆಯಬಹುದು. ಖಾತೆಯನ್ನು ಹೊಂದಿರುವ ಶಾಖೆ ಅಷ್ಟೇ ಅಲ್ಲದೆ, ಇತರೆ ಶಾಖೆಗಳಲ್ಲೂ ಈ ಸೌಲಭ್ಯವನ್ನು ಒದಗಿಸಲಾಗುವುದು. ಇದಲ್ಲದೆ, ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಮೂಲಕ ಅನಿಯಮಿತ ಉಚಿತ ನೆಫ್ಟ್ ಮತ್ತು ಆರ್ಟಿಜಿಎಸ್ ವ್ಯವಹಾರಗಳನ್ನು ಮಾಡಲು ಸಾಧ್ಯವಾಗುತ್ತದೆ.
ಡೆಬಿಟ್ ಕಾರ್ಡ್ ಮತ್ತು ಚೆಕ್ ಬುಕ್
ಗರಿಮಾ ಉಳಿತಾಯ ಖಾತೆಯಲ್ಲಿ ಮಹಿಳೆಯರಿಗೆ ರುಪೇ ಡೆಬಿಟ್ ಕಾರ್ಡ್ ಸಿಗುತ್ತದೆ, ಇದು ಇತರ ಅನೇಕ ಪ್ರಯೋಜನಗಳೊಂದಿಗೆ ಸಂಪರ್ಕಗೊಳ್ಳುತ್ತದೆ. ಖಾತೆ ಹೊಂದಿರುವವರು ಮಹಿಳೆಯರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ವೈಯಕ್ತಿಕಗೊಳಿಸಿದ ಚೆಕ್ ಪುಸ್ತಕವನ್ನು ಪಡೆಯುತ್ತಾರೆ.
2017 ರಲ್ಲಿ ಬೆಂಗಳೂರಿನಲ್ಲಿ ಪ್ರಾಯೋಗಿಕ ಶಾಖೆ ಪ್ರಾರಂಭ
ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ತನ್ನ ಬ್ಯಾಂಕಿಂಗ್ ವ್ಯವಹಾರವನ್ನು 2017 ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಪ್ರಾಯೋಗಿಕ ಶಾಖೆಗಳೊಂದಿಗೆ ಪ್ರಾರಂಭಿಸಿತು. ಇಂದು ಇದು 575 ಶಾಖೆಗಳನ್ನು ಹೊಂದಿದೆ. ಇದರ ಶಾಖೆಗಳು ದೇಶದ 24 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಿಸಿದೆ.
ಹಿರಿಯ ನಾಗರಿಕರಿಗೆ ಶೇ. 7 ರಷ್ಟು ಬಡ್ಡಿ ದರ
ಇಂಡಸ್ಇಂಡ್ ಬ್ಯಾಂಕ್ ಮತ್ತು ಆರ್ಬಿಎಲ್ ಬ್ಯಾಂಕ್ ಹಿರಿಯ ನಾಗರಿಕರಿಗೆ ಒಂದು ವರ್ಷದ ಎಫ್ಡಿ ಮೇಲೆ ಶೇ 7ರಷ್ಟು ಬಡ್ಡಿದರವನ್ನು ನೀಡುತ್ತಿದ್ದರೆ, ಸಾಮಾನ್ಯ ನಾಗರಿಕರಿಗೆ ಈ ಅವಧಿಯಲ್ಲಿ ಶೇ 6.5 ರಷ್ಟು ಬಡ್ಡಿ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ಯೆಸ್ ಬ್ಯಾಂಕ್ ಶೇ 6.75, ಡಿಸಿಬಿ ಬ್ಯಾಂಕ್ ಶೇ 6.55 ಮತ್ತು ಬಂಧನ್ ಬ್ಯಾಂಕ್ ಶೇ 6.5 ರಷ್ಟು ಬಡ್ಡಿ ನೀಡುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications