ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡನೆ ಮಾಡಲಿದ್ದಾರೆ. ಈ ಬಜೆಟ್ 2024ರ ಲೋಕಸಭೆ ಚುನಾವಣೆಗೂ ಮುನ್ನ ಬರುತ್ತಿರುವ ಬಜೆಟ್ ಇದಾದ ಕಾರಣ ಎಲ್ಲ ವಲಯಗಳು ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳು ಇದೆ. ಕೃಷಿ ವಲಯವು ಕೂಡಾ ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳನ್ನು ಹೊಂದಿದೆ.
ಸಾಮ್ಕೋ ಸೆಕ್ಯೂರಿಟೀಸ್ನ ವಿಶ್ಲೇಷಕ ಊರ್ವಿ ಶಾ ಪ್ರಕಾರ ಜಾಗತಿಕವಾಗಿ ಉಂಟಾಗಿರುವ ಆಹಾರ ಬಿಕ್ಕಟ್ಟು ಭಾರತದ ಕೃಷಿ ವಲಯದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದೆ. ಈ ಬಜೆಟ್ ವೇಳೆ ಕೃಷಿ ವಲಯಕ್ಕೆ ಅಧಿಕ ಆದ್ಯತೆಯನ್ನು ನೀಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಕೃಷಿ ಬೆಳವಣಿಗೆಗೆ ಸರ್ಕಾರ ಯೋಜನೆಗಳನ್ನು ರೂಪಿಸಲಿದೆ ಎಂಬುವುದು ಐಸಿಆರ್ಎ ನಿರೀಕ್ಷೆಯಾಗಿದೆ.
ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (Mahatma Gandhi National Rural Employment Guarantee Act) (MGNREGA) ಮೇಲಿನ ಬಜೆಟ್ ಹಂಚಿಕೆಯನ್ನು ಹೆಚ್ಚಳ ಮಾಡುವ ಸಾಧ್ಯತೆಯಿದೆ. ಕೃಷಿಯೇತರ ಕಾರ್ಯಗಳಿಗೂ ಸರ್ಕಾರ ಸಹಾಯವಾಗುವ ಯೋಜನೆ ಜಾರಿ ಮಾಡಲಿದೆ ಎಂಬ ನಿರೀಕ್ಷೆಯಿದೆ. ಹಾಗಾದರೆ ಬಜೆಟ್ ವಲಯದ ನಿರೀಕ್ಷೆಗಳೇನು, ಮುಂದೆ ಓದಿ...
ಕೃಷಿ ವೃತ್ತಿ ಮಾಡುವವರಿಗೆ ತೆರಿಗೆ ವಿನಾಯಿತಿ
ಕೃಷಿ ವಲಯಕ್ಕೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವ ವ್ಯಾಪಾರಗಳಿಗೂ ತೆರಿಗೆ ವಿನಾಯಿತಿ ನೀಡಬೇಕು ಎಂಬುವುದು ಸೋಹನ್ ಲಾಲ್ ಕಮೋಡಿಟಿ ಮ್ಯಾನೇಜ್ಮೆಂಟ್ ಗ್ರೂಪ್ನ ಅಭಿಪ್ರಾಯವಾಗಿದೆ. ಎಸ್ಎಲ್ಸಿಎಂ ಗ್ರೂಪ್ ಕೃಷಿ ಉತ್ಪನ್ನಗಳಿಗೆ ಗೋದಾಮು, ಉಗ್ರಾಣ ವ್ಯವಸ್ಥೆಯನ್ನು ಮಾಡುವ ಸಂಸ್ಥೆಯಾಗಿದೆ. ಸರಕು ಹಾಗೂ ಸೇವಾ ತೆರಿಗೆ (ಜಿಎಸ್ಟಿ) ಸರಳೀಕರಿಸಬೇಕು ಎಂಬುವುದು ಎಸ್ಎಲ್ಸಿಎಂ ಗ್ರೂಪ್ನ ಸಿಇಒ ಸಂದೀಪ್ ಸುಬ್ರಾವಾಲ್ ಆಗ್ರಹವಾಗಿದೆ.
ಕೃಷಿ ವಲಯದಲ್ಲಿ ಆಧುನಿಕ ಹೆಜ್ಜೆ
ಡಿಲಾಯ್ಟ್ ಇಂಡಿಯಾ ವರದಿಯ ಪ್ರಕಾರ 2031ರ ವೇಳೆಗೆ 270 ಬಿಲಿಯನ್ ಡಾಲರ್ ಹೂಡಿಕೆ ಮಾಡಿ 800 ಬಿಲಿಯನ್ ಡಾಲರ್ ಆದಾಯವನ್ನು ಪಡೆಯುವಂತಹ ಸಾಮರ್ಥ್ಯವನ್ನು ಕೃಷಿ ವಲಯವು ಹೊಂದಿದೆ. ವರದಿಯ ಪ್ರಕಾರ ಕೃಷಿ ವಲಯದಲ್ಲಿ ಆಧುನಿಕ ಯಂತ್ರಗಳ ಬಳಕೆಗೆ ಹೆಚ್ಚಿನ ಒತ್ತು ನೀಡುವ ಕಾರ್ಯವನ್ನು ಸರ್ಕಾರ ಮಾಡಬೇಕು. ಹಾಗೆಯೆ ಸಣ್ಣ ಕೃಷಿ ಭೂಮಿಯನ್ನು ಹೊಂದಿರುವವರಿಗೆ ಸಹಾಯವಾಗುವಂತಹ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು. ಕೃಷಿ-ತಂತ್ರಜ್ಞಾನ ಜೊತೆಯಾದ ಸ್ಟಾರ್ಟ್ಅಪ್ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರವು ಹೆಚ್ಚಿನ ಆದ್ಯತೆ ನೀಡಬೇಕು. ರೈತರು ಆಧುನಿಕ ಯಂತ್ರಗಳ ಸಹಾಯವನ್ನು ಹೆಚ್ಚಾಗಿ ಪಡೆಯಬೇಕು.
ಕೃಷಿ ರಾಸಾಯನಿಕ ಸಂಸ್ಥೆಗಳಿಗೆ ಸಹಾಯ
ಮುಂದಿನ ಬಜೆಟ್ ವೇಳೆ ಸರ್ಕಾರವು ಕೃಷಿ ರಾಸಾಯನಿಕ ಉತ್ಪಾದನೆ ಮಾಡುವ ಸಂಸ್ಥೆಗಳಿಗೆ ಅಧಿಕ ಮೊತ್ತವನ್ನು ಹಂಚಿಕೆ ಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಾಮ್ಕೋ ಸೆಕ್ಯೂರಿಟೀಸ್ನ ವಿಶ್ಲೇಷಕ ಊರ್ವಿ ಶಾ ಪ್ರಕಾರ ಬಜೆಟ್ನಲ್ಲಿ ಕೃಷಿ ರಸಗೊಬ್ಬರಗಳನ್ನು ಉತ್ಪಾದನೆ ಮಾಡುವ ಸಂಸ್ಥೆಗಳಿಗೆ ನಿಧಿ ಹಂಚಿಕೆ ಅಧಿಕವಾಗಿ ಮಾಡುವ ನಿರೀಕ್ಷೆಯಿದೆ. ಹಾಗೆಯೇ ಸಬ್ಸಿಡಿಗಳನ್ನು ಸರ್ಕಾರ ಘೋಷಣೆ ಮಾಡುವ ನಿರೀಕ್ಷೆಯಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications