ಕೇಂದ್ರ ಸರ್ಕಾರವು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸುವ ಸಿದ್ಧತೆಯನ್ನು ನಡೆಸುತ್ತಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ಎಲ್ಲ ವಲಯಗಳು ತಮ್ಮ ನಿರೀಕ್ಷೆಗಳನ್ನು, ಬೇಡಿಕೆಗಳನ್ನು ಮುಂದಿಡುತ್ತಿದೆ. ಹೆಚ್ಚಾಗಿ ಎಲ್ಲ ವಲಯಗಳು ತೆರಿಗೆ ಕಡಿತ ಸಂಬಂಧಿತ ನಿರೀಕ್ಷೆಯನ್ನು ಹೊಂದಿದೆ.
ದೇಶದ ಮಧ್ಯಮ ವರ್ಗವೂ ಕೂಡಾ ತನ್ನದೇ ಆದ ನಿರೀಕ್ಷೆಯನ್ನು ಹೊಂದಿದೆ. ತೆರಿಗೆ ಕಡಿತ, ಉದ್ಯೋಗ ಸೃಷ್ಟಿ ಸೇರಿದಂತೆ, ಸರ್ಕಾರದ ಯೋಜನೆಯಿಂದ ಮಧ್ಯಮ ವರ್ಗಕ್ಕೆ ಪ್ರಯೋಜನವಾಗುವ ನಿರೀಕ್ಷೆಯನ್ನು ಹೊಂದಿದೆ. ಕಳೆದ ವರ್ಷವೂ ಮಧ್ಯಮ ವರ್ಗವು ಹಲವಾರು ನಿರೀಕ್ಷೆಗಳನ್ನು ಹೊಂದಿತ್ತು. ಆದರೆ ಅದರಲ್ಲಿ ಪ್ರಮುಖವಾದ ತೆರಿಗೆ ಕಡಿತ ನಿರೀಕ್ಷೆಯು ಈಡೇರಿಲ್ಲ.
ಸಾಮಾನ್ಯವಾಗಿ ವಾರ್ಷಿಕವಾಗಿ 2.5 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಯನ್ನು ಸಂಪಾದನೆ ಮಾಡುವವರು ಇರುವ ಕುಟುಂಬವನ್ನು ಮಧ್ಯಮ ವರ್ಗದ ಕುಟುಂಬ ಎಂದು ಪರಿಗಣಿಸಲಾಗುತ್ತದೆ. ಆದರೆ ಈ ವರ್ಗವು ಕೋವಿಡ್ ಸಾಂಕ್ರಾಮಿಕದಿಂದಾಗಿ ಭಾರೀ ಆರ್ಥಿಕ ಹೊಡೆತವನ್ನು ಅನುಭವಿಸಿದೆ. ಹಲವಾರು ಮಂದಿ ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಆದಾಯವನ್ನು ಕಳೆದುಕೊಂಡಿದ್ದಾರೆ. ಹೀಗಿರುವಾಗ ಮುಂದಿನ ಬಜೆಟ್ನಿಂದ ಮಧ್ಯಮ ವರ್ಗದ ನಿರೀಕ್ಷೆಗಳೇನು ತಿಳಿಯೋಣ ಮುಂದೆ ಓದಿ....
ತೆರಿಗೆ ರಿಲೀಫ್ ನಿರೀಕ್ಷೆ
ಮುಂದಿನ ಬಜೆಟ್ನಲ್ಲಿ ಮಧ್ಯಮ ವರ್ಗದ ಜನರು ಮುಖ್ಯವಾಗಿ ಸರ್ಕಾರವು ತಮಗೆ ತೆರಿಗೆ ರಿಲೀಫ್ ಅನ್ನು ನೀಡುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರವು ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬೇಕು ಎಂಬ ನಿರೀಕ್ಷೆಯಿದೆ. ಪ್ರಸ್ತುತ 2.5 ಲಕ್ಷ ರೂಪಾಯಿವರೆಗೆ ವಾರ್ಷಿಕ ಆದಾಯವನ್ನು ಹೊಂದಿರುವವರು ಆದಾಯ ತೆರಿಗೆಯನ್ನು ಪಾವತಿ ಮಾಡಬೇಕಾಗಿಲ್ಲ. ಈ ಮಿತಿಯನ್ನು ಹೆಚ್ಚಿಸಬೇಕು ಎಂಬುವುದು ಮಧ್ಯಮ ವರ್ಗದ ಬೇಡಿಕೆಯಾಗಿದೆ.
ಉದ್ಯೋಗ ಸೃಷ್ಟಿಯ ಬೇಡಿಕೆ
ಇನ್ನು ತೆರಿಗೆ ಮಿತಿ ಹೆಚ್ಚಿಸುವ ನಡುವೆ ಉದ್ಯೋಗ ಸೃಷ್ಟಿಯನ್ನು ಕೂಡಾ ಮಾಡಬೇಕು ಎಂಬುವುದು ಮಧ್ಯಮ ವರ್ಗದ ಬೇಡಿಕೆಯಾಗಿದೆ. ಮುಖ್ಯವಾಗಿ ಕೇಂದ್ರ ಬಜೆಟ್ ವೇಳೆ ಉದ್ಯೋಗ ಸೃಷ್ಟಿ ಸಂಬಂಧಿಸಿ ಯೋಜನೆಗಳನ್ನು ಕೇಂದ್ರ ಸರ್ಕಾರವು ಜಾರಿ ಮಾಡಬೇಕು ಎಂಬುವುದು ಮಧ್ಯಮ ವರ್ಗದ ನಿರೀಕ್ಷೆಯಾಗಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಾಗಿ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಹಾಗೆಯೇ ಕೋವಿಡ್ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದವವರು ಕೂಡಾ ಮಧ್ಯಮ ವರ್ಗವಾಗಿದೆ. ಆದ್ದರಿಂದಾಗಿ ಮಧ್ಯಮ ವರ್ಗವು ಕೇಂದ್ರ ಸರ್ಕಾರವು ಉದ್ಯೋಗ ಸೃಷ್ಟಿಸಲು ಕ್ರಮಕೈಗೊಳ್ಳಲಿದೆ ಎಂಬ ನಿರೀಕ್ಷೆಯಿದೆ.
ಆರೋಗ್ಯ ಚಿಕಿತ್ಸೆ, ಗೃಹ ಮೊದಲಾದ ಸೌಲಭ್ಯ
ತಮ್ಮ ಜೀವನ ಸ್ಥಿತಿ ಉತ್ತಮಗೊಳಿಸಲು, ಕಡಿಮೆ ಮೊತ್ತದಲ್ಲಿ ಮನೆಯನ್ನು ಖರೀದಿಸಲು ಸಾಧ್ಯವಾಗುವಂತಹ, ಸುಲಭವಾಗಿ ಆರೋಗ್ಯ ಚಿಕಿತ್ಸೆ ಲಭಿಸುವಂತಹ ವಾತಾವರಣವನ್ನು ಸೃಷ್ಟಿ ಮಾಡಬೇಕು ಎಂಬುವುದು ಮಧ್ಯಮ ವರ್ಗದ ಬೇಡಿಕೆಯಾಗಿದೆ. ಕೇಂದ್ರ ಬಜೆಟ್ 2023ರಲ್ಲಿ ತಮ್ಮ ಆರ್ಥಿಕ ಸ್ಥಿತಿ ಉತ್ತಮಗೊಳಿಸುವಂತಹ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂಬುವುದು ಮಧ್ಯಮ ವರ್ಗದ ನಿರೀಕ್ಷೆಯಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications