ಹೆಚ್ಚಿನ ತೆರಿಗೆದಾರರು ಈಗಾಗಲೇ ತಮ್ಮ ತೆರಿಗೆ ಉಳಿಸುವ ಹೂಡಿಕೆಯ ಮಿತಿಯನ್ನು ಮುಗಿಸಿದ್ದಾರೆ. ಸಾಧ್ಯವಾದಷ್ಟು ತೆರಿಗೆಯನ್ನು ಉಳಿಸುವ ನಿಟ್ಟಿನಲ್ಲಿ ವಿವಿಧ ಹೂಡಿಕೆ ಆಯ್ಕೆಗಳನ್ನು ಹುಡುಕಲು ನೀವು ಪ್ರಾರಂಭಿಸಿರಬಹುದು. ಹಾಗಿದ್ದಲ್ಲಿ ನೀವು ಈ ಲೇಖನವನ್ನು ಓದಲೇಬೇಕು.
ಸಂಬಳ ಪಡೆಯುವ ಜನರು ತಮ್ಮ ಎಚ್ಆರ್ ಇಲಾಖೆಗೆ ಹೂಡಿಕೆ ಪುರಾವೆಗಳನ್ನು ಸಲ್ಲಿಸಬೇಕಾಗಿದೆ. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷಕ್ಕೆ ತೆರಿಗೆ ಉಳಿಸಲು ಇದು ಕೊನೆಯ ಅವಕಾಶವಾಗಿದೆ. ಇಲ್ಲದಿದ್ದರೆ ತೆರಿಗೆಯನ್ನು ಅವರ ಸಂಬಳದಿಂದ ಕಡಿತಗೊಳಿಸಲಾಗುತ್ತದೆ.

ಎರಡು ತೆರಿಗೆ ಪದ್ಧತಿ ಮೌಲ್ಯಮಾಪನ ಮಾಡಿ
ಪ್ರಸ್ತುತ 2024 ರಲ್ಲಿ ತೆರಿಗೆಗಳನ್ನು ಉಳಿಸಲು ಎಷ್ಟು ಮತ್ತು ಎಲ್ಲಿ ಹೂಡಿಕೆ ಮಾಡಬೇಕೆಂದು ನೀವು ನಿರ್ಧರಿಸುವ ಮೊದಲು, ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಯ ಅಡಿಯಲ್ಲಿ ನಿಮ್ಮ ತೆರಿಗೆ ಹೊಣೆಗಾರಿಕೆಗಳನ್ನು ಮೌಲ್ಯಮಾಪನ ಮಾಡುವುದು ಮುಖ್ಯವಾಗಿದೆ.
ಹೊಸ ತೆರಿಗೆ ಪದ್ಧತಿಯು ನಿಮಗೆ ಪ್ರಯೋಜನಕಾರಿಯಾಗಿದ್ದರೆ, ಹೊಸ ತೆರಿಗೆ ಪದ್ಧತಿಯಲ್ಲಿ ಸೆಕ್ಷನ್ 80ಸಿ ಮತ್ತು 80ಸಿಸಿಡಿ ಅಡಿಯಲ್ಲಿ ಕಡಿತಗಳು ಲಭ್ಯವಿಲ್ಲದ ಕಾರಣ ನೀವು ಯಾವುದೇ ಹೂಡಿಕೆಗಳನ್ನು ಮಾಡುವ ಅಗತ್ಯವಿಲ್ಲ. ನೀವು ಮಾಡಬೇಕಾದ ಹೂಡಿಕೆಗಳನ್ನು ಗಣನೆಗೆ ತೆಗೆದುಕೊಂಡ ನಂತರ ಹಳೆಯ ತೆರಿಗೆ ಪದ್ಧತಿಯು ನಿಮಗೆ ಪ್ರಯೋಜನಕಾರಿಯಾಗಿದ್ದರೆ ಅದನ್ನು ನೀವು ಪಾಲಿಸಬಹುದಾಗಿದೆ.
ಕೇವಲ ತೆರಿಗೆಗಳನ್ನು ಉಳಿಸುವ ಉದ್ದೇಶಕ್ಕಾಗಿ ಜೀವ ವಿಮಾ ಉತ್ಪನ್ನಗಳಲ್ಲಿ ಹೂಡಿಕೆ ಮಾಡಬೇಡಿ. ಯಾವುದೇ ಘಟನೆಯ ಸಂದರ್ಭದಲ್ಲಿ ನಿಮ್ಮ ಕುಟುಂಬದ ಸದಸ್ಯರ ಯೋಗಕ್ಷೇಮಕ್ಕಾಗಿಯೂ ನೀವು ಜೀವ ವಿಮೆಯಲ್ಲಿ ಹೂಡಿಕೆ ಮಾಡುವುದು ಅತೀ ಮುಖ್ಯವಾಗುತ್ತದೆ ಎಂಬುವುದು ತಿಳಿದಿರಬೇಕು.
"ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80ಸಿ ಅಡಿಯಲ್ಲಿ ಕಡಿತವನ್ನು ಪಡೆಯಲು ಹಲವು ಉತ್ಪನ್ನಗಳು ಲಭ್ಯವಿರುವುದರಿಂದ, ನಿರ್ದಿಷ್ಟ ಉತ್ಪನ್ನದಲ್ಲಿ ಹೂಡಿಕೆ ಮಾಡುವ ನಿರ್ಧಾರವು ವಿವಿಧ ಅಂಶಗಳನ್ನು ಅವಲಂಬಿಸಿರುತ್ತದೆ. ನೀವು ಚಿಕ್ಕವರಾಗಿದ್ದರೆ ಮತ್ತು ಅಪಾಯಗಳನ್ನು ತೆಗೆದುಕೊಳ್ಳಲು ಸಿದ್ಧರಾಗಿದ್ದರೆ, ಇಎಲ್ಎಸ್ಎಸ್ (ಈಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್) ಅತ್ಯುತ್ತಮ ಉತ್ಪನ್ನವಾಗಿದೆ," ಎಂದು ತೆರಿಗೆ ಮತ್ತು ಹೂಡಿಕೆ ತಜ್ಞ ಬಲ್ವಂತ್ ಜೈನ್ ಹೇಳಿದ್ದಾರೆ.
ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಸಿದ್ಧರಿಲ್ಲದವರು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್ಎಸ್ಸಿ), ಹಿರಿಯ ನಾಗರಿಕ ಉಳಿತಾಯ ಯೋಜನೆ (ಎಸ್ಸಿಎಸ್ಎಸ್) ಮತ್ತು ತೆರಿಗೆ-ಉಳಿತಾಯ ಎಫ್ಡಿ ಡೆಪಾಸಿಟ್ (ಎಫ್ಡಿ) ಗಳಂತಹ ಹೂಡಿಕೆಯ ಸಂಪೂರ್ಣ ಅವಧಿಗೆ ಸ್ಥಿರವಾದ ಬಡ್ಡಿದರವನ್ನು ನೀಡುವ ಯಾವುದೇ ಉತ್ಪನ್ನವನ್ನು ಖರೀದಿ ಮಾಡಬಹುದು.
"ಹೆಚ್ಚಿನ ತೆರಿಗೆ ಸ್ಲ್ಯಾಬ್ಗಳ ಅಡಿಯಲ್ಲಿ ಬರುವವರು ಮತ್ತು ದೀರ್ಘಾವಧಿಯವರೆಗೆ ತಮ್ಮ ಹಣವನ್ನು ಇರಿಸಲು ಸಿದ್ಧವಿರುವವರು ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಅನ್ನು ಆಯ್ಕೆ ಮಾಡಬಹುದು. ಅಲ್ಲಿ ಗಳಿಸಿದ ಬಡ್ಡಿಯು ಸಂಪೂರ್ಣವಾಗಿ ತೆರಿಗೆ ಮುಕ್ತವಾಗಿರುತ್ತದೆ. ನೀವು ಸಂಬಳ ಪಡೆಯುವವರಾಗಿದ್ದರೆ ನಿಮ್ಮ ಭವಿಷ್ಯ ನಿಧಿಗೆ ಹೆಚ್ಚಿನ ಕೊಡುಗೆ ನೀಡಲು ನೀವು ಸ್ವಯಂಪ್ರೇರಣೆಯಿಂದ ನಿರ್ಧರಿಸಬಹುದು. ಇದು ಯಾವುದೇ ಅಪಾಯವಿಲ್ಲದೆ ಹೆಚ್ಚಿನ ಆದಾಯವನ್ನು ನೀಡುತ್ತದೆ," ಎಂದು ಜೈನ್ ತಿಳಿಸುತ್ತಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ



Click it and Unblock the Notifications