2020-21ರ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಡಿಸೆಂಬರ್ 31, 2021 ಆಗಿದೆ. ಯಾರು ಈ ಕೊನೆಯ ದಿನಾಂಕ ಕಳೆದರೂ ಕೂಡಾ ಐಟಿಆರ್ ಸಲ್ಲಿಕೆ ಮಾಡುವುದಿಲ್ಲವೋ ಅಥವಾ ಐಟಿಆರ್ ಫೈಲಿಂಗ್ ಮಾಡುವುದಿಲ್ಲವೋ ಅವರು ದಂಡವನ್ನು ಪಾವತಿ ಮಾಡಬೇಕಾಗುತ್ತದೆ. ಆದರೆ ಈ ದಂಡದಿಂದ ಕೆಲವರಿಗೆ ವಿನಾಯತಿ ದೊರೆಯಲಿದೆ.
ಈ ಡಿಸೆಂಬರ್ 31 ರ ಗಡುವಿನವರೆಗೆ ಸುಮಾರು 5.89 ಕೋಟಿ ಆದಾಯ ತೆರಿಗೆ ರಿಟರ್ನ್ಸ್ಗಳನ್ನು ಹೊಸ ಇ-ಫೈಲಿಂಗ್ ಪೋರ್ಟಲ್ನಲ್ಲಿ ಸಲ್ಲಿಸಲಾಗಿದೆ ಎಂದು ಐ-ಟಿ ಇಲಾಖೆ ಈಗಾಗಲೇ ಹೇಳಿದೆ. "ಆದಾಯ ತೆರಿಗೆ ಇಲಾಖೆಯ ಹೊಸ ಇ-ಫೈಲಿಂಗ್ ಪೋರ್ಟಲ್ನಲ್ಲಿ 2021 ರ ಡಿಸೆಂಬರ್ 31 ರ ವಿಸ್ತೃತ ಗಡುವು ದಿನಾಂಕದವರೆಗೆ ಸುಮಾರು 5.89 ಕೋಟಿ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಲಾಗಿದೆ," ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಮಾಹಿತಿ ನೀಡಿದೆ.
ಇದಾದ ಬಳಿಕವೂ ಹಲವಾರು ಮಂದಿ ಇನ್ನು ಕೂಡಾ ಐಟಿಆರ್ ಸಲ್ಲಿಕೆ ಮಾಡಿಲ್ಲ. ಆದರೆ ಈ ತಡವಾಗಿ ಐಟಿಆರ್ ಸಲ್ಲಿಕೆ ಮಾಡುವಾಗ ದಂಡವಿದ್ದರೂ ಕೂಡಾ ಕೆಲವರು ಈ ದಂಡದಿಂದ ವಿನಾಯಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಯಾರೆಲ್ಲಾ ದಂಡದಿಂದ ವಿನಾಯಿತಿ ಪಡೆಯಬಹುದು ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ ಮುಂದೆ ಓದಿ...

ಯಾರಿಗೆ ದಂಡದಿಂದ ವಿನಾಯಿತಿ ಇದೆ?
ಐದು ಲಕ್ಷಕ್ಕಿಂತ ಅಧಿಕ ಆದಾಯ ಹೊಂದಿರುವವರು ಐಟಿಆರ್ ಫೈಲ್ ಮಾಡುವುದು ತಡವಾದರೆ ಸುಮಾರು 5,000 ದಂಡವನ್ನು ಪಾವತಿ ಮಾಡಬೇಕಾಗಿದೆ. ಐದು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಆದರೆ ಇನ್ನು ಕೆಲವರು ತಡವಾಗಿ ಐಟಿಆರ್ ಫೈಲ್ ಮಾಡಿದರೂ ಯಾವುದೇ ದಂಡವನ್ನು ಪಾವತಿ ಮಾಡಬೇಕಾಗಿಲ್ಲ. ಯಾರ ಮೂಲ ಆದಾಯವು ತೀರಾ ಕಡಿಮೆ ಆಗಿರುತ್ತದೋ ಅವರು ಐಟಿಆರ್ ಫೈಲಿಂಗ್ ಮಾಡುವುದು ತಡವಾದರೂ ಕೂಡಾ ಯಾವುದೇ ದಂಡವನ್ನು ಪಾವತಿ ಮಾಡಬೇಕಾಗಿಲ್ಲ. ಮೂಲ ಆದಾಯವು 2.5 ಲಕ್ಷ ರೂಪಾಯಿಗಿಂತ ಕಡಿಮೆ ಆಗಿದ್ದರೆ ಆ ವ್ಯಕ್ತಿಯು ಐಟಿಆರ್ ಫೈಲ್ ಮಾಡುವುದು ತಡವಾದರೂ ದಂಡವನ್ನು ಪಾವತಿ ಮಾಡಬೇಕಾಗಿಲ್ಲ. ಇನ್ನು ಈ ವೇಳೆ ಈ ಮೂಲ ಆದಾಯವು ಆ ವ್ಯಕ್ತಿಯ ವಯಸ್ಸಿನ ಮೇಲೆಯೂ ಆಧಾರಿತವಾಗಿದೆ. ಆದರೆ ಇದಕ್ಕೆ ಕೆಲವು ನಿಯಮಗಳು ಕೂಡಾ ಇದೆ.
ಷರತ್ತುಗಳು ಅನ್ವಯ!
2.5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿರುವವರು ಐಟಿಆರ್ ಫೈಲ್ ಮಾಡುವುದು ತಡವಾದರೂ ಕೂಡಾ ದಂಡವನ್ನು ಪಾವತಿ ಮಾಡಬೇಕಾಗಿಲ್ಲ. ಆದರೆ ಈ ವಿಚಾರದಲ್ಲಿ ಕೆಲವು ಷರತ್ತುಗಳು ಕೂಡಾ ಅನ್ವಯ ಆಗಲಿದೆ. ಯಾರು ಒಂದು ಕೋಟಿ ಅಥವಾ ಅದಕ್ಕಿಂತ ಹೆಚ್ಚು ಹಣವನ್ನು ಹೂಡಿಕೆ ಮಾಡಿರುತ್ತಾರೋ ಅವರ ಆದಾಯ ಕಡಿಮೆ ಇದ್ದರೂ ಕೂಡಾ ಈ ವಿನಾಯಿತಿ ದೊರೆಯುವುದಿಲ್ಲ. ವಿದೇಶಕ್ಕೆ ಪ್ರಯಾಣ ಮಾಡುವವರಿಗೆ ಅಥವಾ ಯಾವುದೇ ಇತರ ವ್ಯಕ್ತಿಗೆ 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತವನ್ನು ನೀಡಿದವರಿಗೆ ಈ ವಿನಾಯಿತಿ ಇರುವುದಿಲ್ಲ. ವಿದ್ಯುತ್ ಬಳಕೆಗಾಗಿ ರೂ 1 ಲಕ್ಷಕ್ಕಿಂತ ಹೆಚ್ಚಿನ ಖರ್ಚು ಮಾಡಿದವರಿಗೆ ಈ ವಿನಾಯಿತಿ ಇಲ್ಲ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications