ಲಕ್ಷಾಂತರ ನೌಕರರು ಹೊಸ ವೇತನ ಆಯೋಗದ ಅನುಷ್ಠಾನದ ಅಪ್ಡೇಟ್ ಮಾಡಲು ಕಾಯುತ್ತಿದ್ದಾರೆ. ಪ್ರಸ್ತುತ 7ನೇ ವೇತನ ಆಯೋಗ ಜಾರಿಯಲ್ಲಿದ್ದು, ಎಂಟನೇ ವೇತನ ಆಯೋಗವು ಜಾರಿಗೆ ಬರಲಿದೆಯೇ ಎಂದು ಕಾಯುತ್ತಿದ್ದಾರೆ. ಈ ನಡುವೆ ಸರ್ಕಾರಿ ನೌಕರರಿಗೆ 8 ನೇ ವೇತನ ಆಯೋಗವನ್ನು ಸ್ಥಾಪಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಕೇಂದ್ರವು ಶುಕ್ರವಾರ ಘೋಷಿಸಿದೆ.
ಎನ್ಡಿಟಿವಿಯೊಂದಿಗೆ ಮಾತನಾಡಿದ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಟಿವಿ ಸೋಮನಾಥನ್, ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ 5.4 ಮಿಲಿಯನ್ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಎಂಟನೇ ವೇತನ ಆಯೋಗವನ್ನು ಸ್ಥಾಪಿಸಲು ಕೇಂದ್ರವು ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.

"8ನೇ ವೇತನ ಆಯೋಗವನ್ನು ಸ್ಥಾಪಿಸುವ ವಿಚಾರ ನಮ್ಮ ಮುಂದೆ ಇಲ್ಲ. ಅದು ಸದ್ಯಕ್ಕೆ ಸಾಧ್ಯವಿಲ್ಲ," ಎಂದು ಸೋಮನಾಥನ್ ಹೇಳಿರುವುದಾಗಿ ಸುದ್ದಿವಾಹಿನಿ ವರದಿ ಮಾಡಿದೆ. ಚುನಾವಣಾ ಪೂರ್ವದಲ್ಲಿ ಈ ಹಿಂದೆ ಸರ್ಕಾರಿ ನೌಕರರು, ಸಶಸ್ತ್ರ ಪಡೆಗಳ ಸಿಬ್ಬಂದಿ ಮತ್ತು ಕುಟುಂಬ ಪಿಂಚಣಿದಾರರ ಗಮನ ಸೆಳೆಯಲು ವೇತನ ಆಯೋಗದ ಸ್ಥಾಪನೆ ಅಥವಾ ಅನುಷ್ಠಾನವನ್ನು ಬಳಸಿಕೊಂಡಿದೆ.
7 ನೇ ವೇತನ ಆಯೋಗವನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಸೆಪ್ಟೆಂಬರ್ 2013 ರಲ್ಲಿ ರಾಜ್ಯ ಮತ್ತು ಸಾರ್ವತ್ರಿಕ ಚುನಾವಣೆಗಳಿಗೆ ಕೆಲವು ತಿಂಗಳುಗಳ ಮೊದಲು ಸ್ಥಾಪಿಸಿತ್ತು. ಈ ಬಾರಿಯೂ ಕೇಂದ್ರ ಸರ್ಕಾರವು ಅದೇ ತಂತ್ರವನ್ನು ಬಳಸಲಿದೆ ಎಂದು ನೌಕರರು ಭಾವಿಸಿದ್ದರು. ಆದರೆ ಕೇಂದ್ರ ಇದನ್ನು ಅಲ್ಲಗಳೆದಿದೆ.
ಪ್ರಸ್ತುತ ಕೇಂದ್ರ ಸರ್ಕಾರವು ಅಂತಹ ಕ್ರಮದ ಬಗ್ಗೆ ಸ್ಪಷ್ಟತೆಯನ್ನು ನೀಡಿದೆ. ಬದಲಿಗೆ ಹೊಸ ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ವಿವಾದದ ಬಿಂದುವಾಗಿ ಮಾರ್ಪಟ್ಟಿರುವ ಹೊಸ ಪಿಂಚಣಿ ಯೋಜನೆಯ ಪರಿಶೀಲನೆಯ ಮೇಲೆ ಕೇಂದ್ರ ಸರ್ಕಾರವು ಅಧಿಕ ಗಮನ ಹರಿಸಿದೆ.
7 ನೇ ವೇತನ ಆಯೋಗದ ಪ್ರಸ್ತುತ ಯೋಜನೆಯ ಪ್ರಕಾರ, ನೌಕರರು ತಮ್ಮ ಮೂಲ ವೇತನದ ಶೇಕಡ 10 ರಷ್ಟು ಕೊಡುಗೆ ನೀಡಿದರೆ, ಸರ್ಕಾರವು ಶೇಕಡ 14 ರಷ್ಟು ಪಾವತಿಸುತ್ತದೆ. ಇತ್ತೀಚಿನ ದಿನಗಳಲ್ಲಿ, ಇದು ರಾಜಕೀಯವಾಗಿ ವಿವಾದಾಸ್ಪದವಾಗಿದೆ. ಹಲವಾರು ವಿರೋಧ ಪಕ್ಷ ಆಡಳಿತ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಗೆ ಬದಲಾಗುತ್ತಿವೆ. ಅದು ಪಿಂಚಣಿದಾರರಿಗೆ ಯಾವುದೇ ಉದ್ಯೋಗಿ ಕೊಡುಗೆಯಿಲ್ಲದೆಯೇ ಮಾಸಿಕ ಕೊನೆಯ ಮಾಸಿಕ ಸಂಬಳದ ಶೇಕಡ 50 ರಷ್ಟನ್ನು ಪಿಂಚಣಿಯಾಗಿ ನೀಡುತ್ತದೆ.
ವ್ಯವಸ್ಥೆಯನ್ನು ಪರಿಶೀಲಿಸಲು ಕೇಂದ್ರವು ಹಣಕಾಸು ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ. "ನಾವು ಸಂಬಂಧಪಟ್ಟ ಎಲ್ಲರೊಂದಿಗೆ ಸಮಾಲೋಚನೆಗಳನ್ನು ಪೂರ್ಣಗೊಳಿಸಿದ್ದೇವೆ ಮತ್ತು ನಮ್ಮ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಬೇಕು," ಎಂದು ಸೋಮನಾಥನ್ ಹೇಳಿದ್ದಾರೆ.
ಆದಾಗ್ಯೂ, ನೌಕರರು ತಮ್ಮ ಕೊನೆಯ ಸಂಬಳದ ಕನಿಷ್ಠ ಶೇಕಡ 40 ರಿಂದ 45 ರಷ್ಟು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ಬದಲಾವಣೆಗಳನ್ನು ತರುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಏನೇ ಇರಲಿ, 8ನೇ ವೇತನ ಆಯೋಗವನ್ನು ಘೋಷಿಸಿ ಅಧಿಸೂಚನೆ ಹೊರಡಿಸುವಂತೆ ಹಣಕಾಸು ಸಚಿವಾಲಯದ ಮೇಲೆ ರಾಜಕೀಯ ಒತ್ತಡ ಹೆಚ್ಚುತ್ತಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications